AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ನದಿ ನೀರಲ್ಲಿ ಆಟವಾಡ್ತಿದ್ದ ಬಾಲಕನ ಮೇಲೆ ಮೊಸಳೆ ದಾಳಿ, ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿಯಿತು ಪುಟ್ಟ ಜೀವ

ಮಹಿಳೆಯರೆಲ್ಲ ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದರು. ಆದ್ರೆ ಪವನ್ ಸ್ವಲ್ಪ ಮುಂದೆ ಹೋಗಿ ನೀರಿನಲ್ಲಿ ಆಟವಾಡುತ್ತಿದ್ದ. ಈ ವೇಳೆ ಘಟನೆ ಸಂಭವಿಸಿದೆ.

ರಾಯಚೂರು: ನದಿ ನೀರಲ್ಲಿ ಆಟವಾಡ್ತಿದ್ದ ಬಾಲಕನ ಮೇಲೆ ಮೊಸಳೆ ದಾಳಿ, ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿಯಿತು ಪುಟ್ಟ ಜೀವ
TV9 Web
| Edited By: |

Updated on:Feb 03, 2023 | 2:51 PM

Share

ರಾಯಚೂರು: ಜಿಲ್ಲೆಯ ಕೊರ್ತಕುಂದ ಗ್ರಾಮದಲ್ಲಿ 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ಮಾಡಿದ ಘಟನೆ ನಡೆದಿದೆ. ಕುಟುಂಬಸ್ಥರ ಜೊತೆ ನದಿಗೆ ತೆರಳಿದ್ದ ಪವನ್ ಮೇಲೆ ಮೊಸಳೆ ದಾಳಿ ನಡೆಸಿದ್ದು ಕೂಡಲೇ ಮೊಸಳೆಯಿಂದ ಬಾಲಕ ಪವನ್​ನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಬಾಲಕ ಬದುಕುಳಿದಿದ್ದಾನೆ.

ಕೊರ್ತಕುಂದದಲ್ಲಿ ಗ್ರಾಮದ ತಿಮ್ಮಪ್ಪ ಜಾತ್ರೆ ಹಿನ್ನೆಲೆ ಅಜ್ಜಿ ಮನೆಗೆ ಬಂದಿದ್ದ ಪವನ್, ಕುಟುಂಬಸ್ಥರ ಜೊತೆ ನದಿಗೆ ತೆರಳಿದ್ದ. ಮಹಿಳೆಯರೆಲ್ಲ ನದಿ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದರು. ಆದ್ರೆ ಪವನ್ ಸ್ವಲ್ಪ ಮುಂದೆ ಹೋಗಿ ನೀರಿನಲ್ಲಿ ಆಟವಾಡುತ್ತಿದ್ದ. ಈ ವೇಳೆ ಘಟನೆ ಸಂಭವಿಸಿದೆ. ಸದ್ಯ ಬಾಲಕ ಪವನ್​ಗೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಹುಲಿ ಹಾವಳಿ

ಕೊಡಗು: ವಿರಾಜಪೇಟೆ ತಾಲೂಕಿನ ಮಾಯಮುಡಿ ಬಳಿಯ ರುದ್ರಬೀಡು ಗ್ರಾಮದಲ್ಲಿ ಹುಲಿ ಮತ್ತೆ ಕಾಣಿಸಿಕೊಂಡಿದ್ದು ಹಸು ಕೊಂದು ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru News: ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಬಂಧನ ​

ರಾಜಕೀಯ ಪಕ್ಷದ ಬಂಟಿಂಗ್ಸ್​​​ಗೆ ಸಿಲುಕಿ ಅಮಾಯಕ ಕೋತಿಯ ದುರ್ಮರಣ

ದೊಡ್ಡಬಳ್ಳಾಪುರ: ಮುಂಬರುವ ಅಸೆಂಬ್ಲಿ ಚುನಾವಣೆಯ ಕಾವು ಜೋರಾಗಿಯೇ ಇದೆ. ಆದರೆ ಚುನಾವಣೆ ನಿಮಿತ್ತ ಪಕ್ಷಗಳ ಆರ್ಭಟದ ಮಧ್ಯೆ ಅಮಾಯಕ ಪ್ರಾಣಿಯೊಂದು ಅಸುನೀಗಿದೆ. ರಾಜಕೀಯ ಪಕ್ಷವೊಂದು ಪ್ರಚಾರ ನಿಮಿತ್ತ ಮರದಲ್ಲಿ ನೇತು ಹಾಕಿದ್ದ ಬಂಟಿಂಗ್ಸ್ (Buntings)ಗೆ ಸಿಲುಕಿ ಕೋತಿಯೊಂದು ಪ್ರಾಣ ಬಿಟ್ಟಿದೆ. ಮರಕ್ಕೆ ಕಟ್ಟಿದ್ದ ಬಂಟಿಂಗ್ಸ್​​ನಿಂದ ಕೋತಿ (Monkey) ನೇಣು ಬಿಗಿದ‌ ಸ್ಥಿತಿಯಲ್ಲಿ (Hanging) ಮೃತಪಟ್ಟಿದೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ‌ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಆರೂಡಿ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ.

ರಾಜಕೀಯ ಪಕ್ಷದ ಬಂಟಿಂಗ್ ನಲ್ಲಿ ಆಟವಾಡುವ ವೇಳೆ ಅದು ಕೋತಿಯ ಕುತ್ತಿಗೆಗೆ ಸುತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಅದು ಬಿಗಿಯಾಗಿ ಕುತ್ತಿಗೆಗೆ ಸುತ್ತಿಕೊಂಡ ಕಾರಣ ಕೋತಿ ಸಾವು ಕಂಡಿದೆ. ಅಂದಹಾಗೆ ಬಿಜೆಪಿ ಕಾರ್ಯಕ್ರಮಕ್ಕಾಗಿ ಕಟ್ಟಿದ್ದ ಬಂಟಿಂಗ್ಸ್ ಅದಾಗಿತ್ತು. ಮರದ ತುದಿಯಲ್ಲಿ ಬಂಟಿಂಗ್ಸ್ ಗೆ ಸಿಲುಕಿ, ಕೋತಿ ಸಾವನ್ನಪಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:51 pm, Fri, 3 February 23

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ