ಗಂಗಾವತಿಯಲ್ಲಿ ಭೀಕರ ಮರ್ಡರ್​: ಕೊಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Edited By:

Updated on: Oct 08, 2025 | 12:43 PM

ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನನ್ನು ಭೀಕರವಾಗಿ ಕೊಚ್ಚಿ ದುಷ್ಕರ್ಮಿಗಳ ತಂಡ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ನಗರದ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆಯೇ ಮರ್ಡರ್​ ಮಾಡಲಾಗಿದ್ದು, ಘಟನೆಯ ಭೀಕರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.

ಕೊಪ್ಪಳ, ಅಕ್ಟೋಬರ್ 8: ಬೈಕ್​ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನನ್ನು ಭೀಕರ ಹತ್ಯೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೊದಲು ಕಾರಿನಿಂದ ಗುದ್ದುವ ದುಷ್ಕರ್ಮಿಗಳು, ಬಳಿಕ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ದಾಳಿಮಾಡಿರೋದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್​ನಿಂದ ಗಂಗಾವತಿ ಕಡೆಗೆ ವೆಂಕಟೇಶ್ ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಬಳಿ ತಲುಪುತ್ತಿದ್ದಂತೆ ದುರುಳರು ಅಟ್ಟಹಾಸ ಮೆರೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 08, 2025 12:33 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More