ಗಂಗಾವತಿಯಲ್ಲಿ ಭೀಕರ ಮರ್ಡರ್​: ಕೊಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Updated By: ಪ್ರಸನ್ನ ಹೆಗಡೆ

Updated on: Oct 08, 2025 | 12:43 PM

ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನನ್ನು ಭೀಕರವಾಗಿ ಕೊಚ್ಚಿ ದುಷ್ಕರ್ಮಿಗಳ ತಂಡ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ನಗರದ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆಯೇ ಮರ್ಡರ್​ ಮಾಡಲಾಗಿದ್ದು, ಘಟನೆಯ ಭೀಕರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.

ಕೊಪ್ಪಳ, ಅಕ್ಟೋಬರ್ 8: ಬೈಕ್​ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನನ್ನು ಭೀಕರ ಹತ್ಯೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೊದಲು ಕಾರಿನಿಂದ ಗುದ್ದುವ ದುಷ್ಕರ್ಮಿಗಳು, ಬಳಿಕ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ದಾಳಿಮಾಡಿರೋದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್​ನಿಂದ ಗಂಗಾವತಿ ಕಡೆಗೆ ವೆಂಕಟೇಶ್ ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಬಳಿ ತಲುಪುತ್ತಿದ್ದಂತೆ ದುರುಳರು ಅಟ್ಟಹಾಸ ಮೆರೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 08, 2025 12:33 PM