ಸಾಲ ಕೊಡಿಸುವ ನೆಪದಲ್ಲಿ ಲಕ್ಷ ಲಕ್ಷ ವಂಚನೆ ಮಾಡ್ತಿದ್ದ ಐನಾತಿ ಗ್ಯಾಂಗ್ ಅಂದರ್

ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು. ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ […]

ಸಾಲ ಕೊಡಿಸುವ ನೆಪದಲ್ಲಿ ಲಕ್ಷ ಲಕ್ಷ ವಂಚನೆ ಮಾಡ್ತಿದ್ದ ಐನಾತಿ ಗ್ಯಾಂಗ್ ಅಂದರ್
ಸಾಧು ಶ್ರೀನಾಥ್​

Updated on: Dec 16, 2019 | 8:12 AM

ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು.

ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ASI ಹನುಮಂತರಾಜ್ ಹತ್ಯೆಗೆ ಯತ್ನ ನಡೆದಿದೆ.

ಗಾಯಾಳು ಪೇದೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಚೇಸ್ ಮಾಡಿ ಕೇರಳ ಮೂಲದ ಎಂ. ಶರೂನ್, ರಿಬಿನ್, ಸೈಯದ್ ಅಹ್ಮದ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ದೂರು ಸಂಬಂಧಿಸಿ ವಿಚಾರಣೆ ವೇಳೆ ಪೊಲೀಸರಿಗೆ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

33 ಕೋಟಿ ಹಣ ಸಾಲ ಕೊಡಿಸುವುವಾಗಿ ಹೇಳಿ ₹26 ಲಕ್ಷ ಹಣ ಪಡೆದು ವಂಚಿಸಿದ್ದರು. ಎರಡು ಪ್ರಕರಣಗಳ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೇ ರೀತಿ ಮತ್ತಷ್ಟು ಜನರಿಂದ ಲಕ್ಷಾಂತರ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆಯೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 8:11 am, Mon, 16 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us