AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್​ ಅಧಿಕಾರಿಗಳು

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್​ ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 28, 2022 | 9:32 PM

ಬೆಂಗಳೂರು: ದೇವನಹಳ್ಳಿ (Devanhalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ (Kempegowda International Airport) ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು (Customs officers) ಜಪ್ತಿ ಮಾಡಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದಿದ್ದ 16.38 ಲಕ್ಷ ರೂ. ಮೌಲ್ಯದ ಒಟ್ಟು 84 ವಿದೇಶಿ ಸಿಗರೇಟ್​ ಬಾಕ್ಸ್​ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಉತ್ತರ ಕನ್ನಡ: ಮನೆ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

ಉತ್ತರ ಕನ್ನಡ: ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಯಬ್ ಮೊಮ್ಮದ್‌ಗೌಸ್ (23) ಬಂಧಿತ ಆರೋಪಿ. ಆರೋಪಿ ಮೊಮ್ಮದ್‌ಗೌಸ್ ಶುಕ್ರವಾರ (ಆ 26) ರಂದುಯಲ್ಲಾಪುರ ತಾಲೂಕಿನ ಹಾದಿಭಾವಿಗಲ್ಲಿ ಗ್ರಾಮದಲ್ಲಿ ಸುಭ್ರಾಯ್ ಭಟ್ ಎಂಬುವರಿಗೆ ಸೇರಿದ ಮನೆ ಬೀಗ ಮುರಿದು ನಗದು, ಒಡವೆ ಸೇರಿದಂತೆ 1,25,000 ಮೌಲ್ಯದ ವಸ್ತುಗಳನ್ನು ಕಳ್ಳತನಮಾಡಿದ್ದನು.

ದೂರಿನನ್ವಯ ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿಯಿಂದ ಚಿನ್ನಾಭರಣ, ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹೃದಯಾಘಾತದಿಂದ ಕರ್ತವ್ಯ ನಿರತ BSF ಯೋಧ ಸಾವು

ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಧಾರವಾಡದ BSF ಯೋಧ ಸಾವನ್ನಪ್ಪಿರುವಂತಹ ಘಟನೆ ಪಶ್ಚಿಮ ಬಂಗಾಳದ ಕುಚ್ ಬಿಹಾರ್​​ನಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗಂಗಾಧರಯ್ಯ ಹಿರೇಮಠ(49) ಮೃತ ಯೋಧ. ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದ ಯೋಧ. ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸ್ತಿದ್ದ ಯೋಧ ಗಂಗಾಧರಯ್ಯ, BSF ಬೆಟಾಲಿಯನ್ 138ರಲ್ಲಿ ಸೇವೆ ಸಲ್ಲಿಸ್ತಿದ್ದರು. 28 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ರಾತ್ರಿ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

ರೈಲಿಗೆ ಸಿಲುಕಿ ವ್ಯಕ್ತಿ ಸಾವು

ನೆಲಮಂಗಲ: ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು-ಬೆಂಗಳೂರು ರೈಲು ಮಾರ್ಗದ ದಾಬಸ್‌ಪೇಟೆ ಬಳಿ ನಡೆದಿದೆ. ದಾಬಸ್‌ಪೇಟೆ ನಿವಾಸಿ ಗಂಗಾಧರ್ (31) ಮೃತ ವ್ಯಕ್ತಿ. ಕಳೆದ ಒಂದುವರೆ ವರ್ಷದ ಹಿಂದೆ ಮದುವೆಯಾಗಿದ್ದ. ಮೃತನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳೀಯವಾಗಿ ಕ್ಯಾಂಟರ್ ಚಾಲಕನಾಗಿದ್ದ ಮೃತ ಗಂಗಾಧರ್, ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Sun, 28 August 22

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ