AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: ವೃದ್ಧೆಯಿಂದ 1 ಕೋಟಿಗೂ ಅಧಿಕ ಹಣ ದೋಚಿದ ವಂಚಕರು

ಮುಂಬೈ ಮೂಲದ ಸೈಬರ್ ವಂಚಕರು ಬೆಂಗಳೂರಿನ 83 ವರ್ಷದ ವೃದ್ಧೆಯಿಂದ 1.24 ಕೋಟಿ ರೂಪಾಯಿ ದೋಚಿದ್ದಾರೆ. ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಮನಿ ಲ್ಯಾಂಡರಿಂಗ್ ಆರೋಪದ ಬೆದರಿಕೆ ಹಾಕಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ. ವೃದ್ಧೆ ಹಂತಹಂತವಾಗಿ ಹಣ ವರ್ಗಾಯಿಸಿದ್ದು, ನಂತರ ವಂಚನೆ ಅರಿತು ದೂರು ನೀಡಿದ್ದಾರೆ. ಇದೇ ರೀತಿಯ ಇನ್ನೊಂದು ಘಟನೆಯಲ್ಲಿ ಧಾರವಾಡದ ವ್ಯಕ್ತಿಯೊಬ್ಬರು 3 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ಸೈಬರ್​ ಕ್ರೈಂ: ವೃದ್ಧೆಯಿಂದ 1 ಕೋಟಿಗೂ ಅಧಿಕ ಹಣ ದೋಚಿದ ವಂಚಕರು
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Dec 17, 2024 | 9:44 AM

Share

ಬೆಂಗಳೂರು, ಡಿಸೆಂಬರ್​ 17: ಮುಂಬೈ (Mumbai) ಮೂಲದ ಸೈಬರ್​ ವಂಚಕರು (Cyber Crime) ಸಿಬಿಐ ಪೊಲೀಸರ (CBI Police) ಹೆಸರಿನಲ್ಲಿ ಬೆಂಗಳೂರಿನ 83 ವರ್ಷದ ವೃದ್ದೆಗೆ 1 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು, “ನಿಮ್ಮ ಮತ್ತೊಂದು ದೂರವಾಣಿ ಸಂಖ್ಯೆಯಿಂದ ಮನಿ ಲ್ಯಾಂಡರಿಂಗ್ ನಡೆಯುತ್ತಿದೆ. ನಿಮ್ಮ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ದಾಖಲಾಗಿದೆ ಎಂದು ವೃದ್ಧೆಗೆ ಬೆದರಿಕೆ ಹಾಕಿದ್ದಾರೆ.

ಬಳಿಕ, ಆರೋಪಿಗಳು ವೃದ್ಧೆಯ ಬ್ಯಾಂಕ್ ಖಾತೆಗಳ ಮಾಹಿತಿ ಪಡೆದಿದ್ದಾರೆ. ಆರೋಪಿಗಳ ಬೆದರಿಕೆಗೆ ಹೆದರಿದ ವೃದ್ಧೆ ಆರೋಪಿಗಳ ಖಾತೆ ಹಂತ ಹಂತವಾಗಿ 32 ಲಕ್ಷ ರೂ., 50 ರೂ. ಲಕ್ಷ, 32 ಲಕ್ಷ ರೂ., 10 ಲಕ್ಷ ರೂ. ಒಟ್ಟು 1.24 ಕೋಟಿ ರೂ. ಸೈಬರ್ ವಂಚಕರ ಖಾತೆಗೆ ವರ್ಗಾವಣೆ ಮಾಡಿದ್ದಾರೆ.

ಹಣ ಖಾತೆಗೆ ಜೆಮೆಯಾದ ಬಳಿಕ ಆರೋಪಿಗಳು ಮತ್ತೆ ಸಂಪರ್ಕಿಸಿದ ಹಿನ್ನೆಲೆಯಲ್ಲಿ ವೃದ್ಧೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ, ವಂಚನೆಗೆ ಒಳಗಾಗಿರುವುದು ತಿಳಿದುಕೊಡಿದ್ದಾರೆ. ನಂತರ, ಘಟನೆ ನಡೆದು ಎರಡು ತಿಂಗಳ ಬಳಿಕ ವೃದ್ಧೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ವೃದ್ಧೆ ನೀಡಿದ ದೂರಿನ ಆಧಾರದ ಮೇಲೆ ಸೈಬರ್​ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸಿಟಿ ಪೊಲೀಸರ ಹೆಸರಿನಲ್ಲಿ ಬಂತು APK ಫೈಲ್: ಆ್ಯಪ್ ಇನ್​ಸ್ಟಾಲ್ ಆಗುತ್ತಿದ್ದಂತೇ ಮೊಬೈಲ್ ಹ್ಯಾಕ್, 1.5 ಲಕ್ಷ ರೂ. ಮಾಯ

ಕಳೆದ ತಿಂಗಳಷ್ಟೇ ಇದೇ ರೀತಿಯಾಗಿ ಸೈಬರ್​ ಕ್ರೈಂ ನಡೆದಿತ್ತು. ವಂಚಕರು ವೃದ್ದೆಯೊಬ್ಬರಿಂದ 10 ಲಕ್ಷ ಹಣ ಸುಲಿಗೆ ಮಾಡಿದ್ದರು.

ಪೊಲೀಸ್​ ಹೆಸರಿನಲ್ಲಿ ವಿಡಿಯೋ ಕಾಲ್​​ ಮಾಡಿ ​ವಂಚನೆ

ಸೈಬರ್​ ವಂಚಕರು ವಿಡಿಯೋ ಕರೆ ಮಾಡಿ ಹೆದರಿಸಿ ಅಮಾಯಕರಿಂದ ಹಣ ವಸೂಲಿ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿತ್ತು. ರಮೇಶ್​ ನೂಲ್ವಿ ಹಣ ಕಳೆದುಕೊಂಡಿದ್ದ ವ್ಯಕ್ತಿ. ಪೊಲೀಸ್ ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ರಮೇಶ್​ ನೂಲ್ವಿ ಎಂಬುವರಿಗೆ ವಿಡಿಯೋ ಕರೆ ಮಾಡಿದ್ದನು. ಆತ ಪೊಲೀಸ್ ಠಾಣೆಯಲ್ಲಿ ಕುಳಿತು ಮಾತನಾಡುತ್ತಿರುವಂತೆ ಠಾಣೆಯ ಸೆಟ್ ಕೂಡ ಇತ್ತು. ನಿಮ್ಮ ಮೇಲೆ ಅಕ್ರಮ ಹಣ ವರ್ಗಾವಣೆ, ಡ್ರಗ್ಸ್ ಸಾಗಾಣಿಕೆ ಕೇಸು ದಾಖಲಾಗಿದ್ದು, ಕೋರ್ಟ್ ಅರೆಸ್ಟ್ ವಾರೆಂಟ್ ನೀಡಿದೆ ಎಂದು ಹೇಳಿದ್ದನು. ಅಲ್ಲದೇ, ನೀವು ಕೂಡಲೇ ಮುಂಬೈ ಕ್ರೈಂ ಬ್ರ್ಯಾಂಚ್​ಗೆ ಹಾಜರಾಗಬೇಕು ಅಂತ ರಮೇಶ್​ ಅವರಿಗೆ ಹೇಳಿದ್ದನು. ಅಲ್ಲದೇ, ನಕಲಿ ವಾರೆಂಟ್ ಪ್ರತಿಯನ್ನು ಕೂಡ ಕಳಿಸಿದ್ದನು.

ಇದನ್ನು ನೋಡಿದ ರಮೇಶ ಭಯಗೊಂಡು, ಆರೋಪಿ ಕೇಳಿದ ಖಾತೆಗೆ 3 ಲಕ್ಷ ರೂ. ಕೂಡಲೇ ವರ್ಗಾವಣೆ ಮಾಡಿದ್ದರು. ಬಳಿಕ, ರಮೇಶ್​ ಅವರಿಗೆ ಇವರೆಲ್ಲ ನಕಲಿ ಅಧಿಕಾರಿಗಳು ಎಂಬುವುದು ಗೊತ್ತಾಗಿತ್ತು. ಕೂಡಲೇ ಧಾರವಾಡದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂಥ ಮೋಸಕ್ಕೆ ಬಲಿಯಾಗಬೇಡಿ ಅಂತ ಧಾರವಾಡ ಎಸ್ಪಿ ಡಾ. ಗೋಪಾಲ ಬ್ಯಾಕೋಡ್ ಮನವಿ ಮಾಡಿದ್ದರು.

ವರದಿ:- ಪ್ರದೀಪ್​

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು