Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಡೇಟಿಂಗ್ ಆ್ಯಪ್​ ಮೂಲಕ ಯುವಕನಿಗೆ ಕಿರುಕುಳ: ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ಬೆಂಗಳೂರು ಪೊಲೀಸರಿಗೆ ಮನವಿ ​

ಆನ್​ಲೈನ್ ಡೇಟಿಂಗ್ ಆ್ಯಪ್​ ಮೂಲಕ ಯುವಕನಿಗೆ ಲೈಂಗಿಕ ಕಿರುಕುಳ ನಿಡುತ್ತಿರುವ ಮಹಿಳೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ದೀಪಿಕಾ ನಾರಾಯಣ ಭಾರದ್ವಾಜ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಆನ್​ಲೈನ್ ಡೇಟಿಂಗ್ ಆ್ಯಪ್​ ಮೂಲಕ ಯುವಕನಿಗೆ ಕಿರುಕುಳ: ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ಬೆಂಗಳೂರು ಪೊಲೀಸರಿಗೆ ಮನವಿ ​
ಬೆಂಗಳೂರು ಪೊಲೀಸ್​
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on: Jan 16, 2024 | 7:34 AM

ಬೆಂಗಳೂರು, ಜನವರಿ 16: ಆನ್​ಲೈನ್ ಡೇಟಿಂಗ್ ಆ್ಯಪ್‌​ ಮೂಲಕ ಯುವಕನಿಗೆ (Boy) ಲೈಂಗಿಕ ಕಿರುಕುಳ ನಿಡುತ್ತಿರುವ ಮಹಿಳೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ (Bollywood director) ದೀಪಿಕಾ ನಾರಾಯಣ ಭಾರದ್ವಾಜ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ದೀಪಿಕಾ ನಾರಾಯಣ ಭಾರದ್ವಾಜ್​ ಅವರು ಸರಣಿ ಟ್ವೀಟ್​ ಮಾಡಿ ಘಟನೆಯ ವಿವರವನ್ನು ಬಿಚ್ಚಿಟ್ಟಿದ್ದಾರೆ.

ಓರ್ವ ಯುವಕ ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆಯನ್ನು ಭೇಟಿಯಾಗಿದ್ದಾನೆ. ನಂತರ ಮಹಿಳೆ ಯುವಕನೊಂದಿಗೆ ಆತ್ಮೀಯವಾಗಿರಲು ಮುಂದಾಗಿದ್ದಾಳೆ. ನಂತರ ಮಹಿಳೆ ಭೇಟಿಯಾಗುವಂತೆ ಯುವಕನ ದುಂಬಾಲು ಬೀಳುತ್ತಾಳೆ. ಆದರೆ ಯುವಕ ಇದನ್ನು ತಿರಸ್ಕರಿಸಿದ್ದಾನೆ. ಕೆಲ ದಿನಗಳ ಬಳಿಕ ಮಹಿಳೆ ಯುವಕನಿಗೆ ಹಣ ಕೇಳಲು ಆರಂಭಿಸುತ್ತಾಳೆ. ಆಗ ಯುವಕ ಹಣ ನೀಡಲು ನಿರಾಕರಿಸಿದ್ದಾನೆ. ಬಳಿಕ ಮಹಿಳೆ ಯುವಕನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಆರಂಭಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿನ ಸೈಬರ್​ ಕ್ರೈಂ ಪ್ರಕರಣಗಳ ಪತ್ತೆಗೆ ನಾಲ್ವರು ಡಿಸಿಪಿಗಳ ನೇಮಕ

ಅಲ್ಲದೇ ಮಹಿಳೆ ದೈಹಿಕ ಸಂಬಂಧ ಬೆಳಸಲು ಒತ್ತಾಯಿಸುತ್ತಾಳೆ. ಆದರೆ ಯುವಕ ತಿರಸ್ಕರಿಸುತ್ತಾನೆ. ಆದರೂ ಬಿಡದ ಮಹಿಳೆ ” ನಿನ್ನ (ಯುವಕ) ಭಾವಚಿತ್ರವನ್ನು ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಮಾಡುವುದಾಗಿ ಬೆದರಿಸಿ ಕಿರುಕುಳ ನೀಡಲು ಆರಂಭಿಸುತ್ತಾಳೆ. ಹೀಗೆ ಮಾಡಬಾರದಿದ್ದರೇ ಹಣ ನೀಡುವಂತೆ ಕಿರುಕುಳ ನೀಡಿ ಧಮ್ಕಿ ಹಾಕಿದ್ದಾಳೆ. ಇದರಿಂದ ಬೇಸತ್ತ ಯುವಕ ಪೊಲೀಸ್​ ಠಾಣೆಗೆ ದೂರು ನೀಡಲು ಹೋಗಿದ್ದಾರೆ. ಠಾಣೆಯಲ್ಲಿ ಪೊಲೀಸರು ಮಹಿಳೆ ನಿಮ್ಮ ವಿರುದ್ಧ ದೂರು ನೀಡಿದರೆ ನಾವು ನಿಮ್ಮನ್ನು ಬಂಧಿಸಬೇಕಾಗುತ್ತದೆ, ಆದ್ದರಿಂದ ನೀವು ನಿಜವಾಗಿಯೂ ದೂರು ನೀಡಲು ಬಯಸುತ್ತೀರಾ? ಎಂದು ಯುವಕನಿಗೆ ಕೇಳಿದ್ದಾರೆ. ಇದರಿಂದ ಯುವಕ ಡಿಪ್ರೆಶನ್​ಗೆ ಒಳಗಾಗಿದ್ದಾನೆ.

ಇನ್ನು ಯುವಕನೊಂದಿಗೆ ಮಾತನಾಡಿದ್ದೇನೆ ಮತ್ತು ಅವನಿಗೆ ಹೋರಾಡಲು ಆತ್ಮವಿಶ್ವಾಸವನ್ನು ನೀಡಿದ್ದೇನೆ. ಅಲ್ಲದೇ ಸಂಬಂಧಪಟ್ಟ ಬೆಂಗಳೂರು ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಅವರನ್ನು ಸಂಪರ್ಕಿಸಿದ್ದೇನೆ. ಆ ವ್ಯಕ್ತಿ ಪೊಲೀಸರೊಂದಿಗೆ ಮಾತನಾಡಿದ್ದಾನೆ ಮತ್ತು ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. ಯುವಕ ಕೂಡ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ ಎಂದು ಎಕ್ಸ್​​ (ಟ್ವಿಟರ್​)ನಲ್ಲಿ ಪೋಸ್ಟ್​ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್