‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.  ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ […]

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’
ಸೈಬರ್ ಕ್ರೈಂ
ಸಾಧು ಶ್ರೀನಾಥ್​

Updated on: May 25, 2020 | 2:22 PM

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

 ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ ಬ್ಯುಸಿಯಾಗಿದ್ದೆ ಹ್ಯಾಕರ್ಸ್​ಗೆ ಬಂಡವಾಳವಾಗಿದೆ.

ಆನ್​ಲೈನ್ ಫ್ರಾಡ್, ಸೆಕ್ಸ್ ದೋಖಾ, ಆಫರ್ಸ್ ಮೂಲಕ ವಂಚನೆ ಮಾಡುತ್ತಿದ್ದಾರೆ. ದಯವಿಟ್ಟು ಹೆಣ್ಣು ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಮನೆಯಲ್ಲಿರುವವರು ಎಚ್ಚರಿಕೆಯಿಂದಿರುವಂತೆ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೂ ಸಹ ಎಚ್ಚರಿಕೆ ನೀಡಿದ್ದಾರೆ.

Published On - 2:14 pm, Mon, 25 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us