Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ಗ್ರಾಹಕರೇ ಎಚ್ಚರ! ವಿದ್ಯುತ್​​ ಬಿಲ್​ ಬಾಕಿ ಇದೆ ಎಂದು ಕರೆ ಮಾಡುತ್ತಾರೆ ಸೈಬರ್ ಕಳ್ಳರು; ಅಕೌಂಟ್​​ನಿಂದ ಹಣ ಮಾಯ

ಬೆಂಗಳೂರಲ್ಲಿ ಸೈಬರ್ ಕಳ್ಳರು ಬೆಸ್ಕಾಂ ಗ್ರಾಹಕರಿಗೆ ಕರೆ ಮಾಡಿ ಬಿಲ್ ಬಾಕಿ ಇದೆ ಬೇಗ ಬಿಲ್ ಕಟ್ಟಿ ಇಲ್ಲವಾದರೆ ಕನೆಕ್ಷನ್ ಕಟ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ದೋಚಿರುವ ಆರೋಪ ಕೇಳಿಬಂದಿದೆ.

ಬೆಸ್ಕಾಂ ಗ್ರಾಹಕರೇ ಎಚ್ಚರ! ವಿದ್ಯುತ್​​ ಬಿಲ್​ ಬಾಕಿ ಇದೆ ಎಂದು ಕರೆ ಮಾಡುತ್ತಾರೆ ಸೈಬರ್ ಕಳ್ಳರು; ಅಕೌಂಟ್​​ನಿಂದ ಹಣ ಮಾಯ
ಸಾಂದರ್ಭಿಕ ಚಿತ್ರ
Follow us
Shivaprasad
| Updated By: ವಿವೇಕ ಬಿರಾದಾರ

Updated on:Jul 08, 2023 | 8:42 AM

ಬೆಂಗಳೂರು: ಕರ್ನಾಟಕ ಸರ್ಕಾರ (Karnataka Government) ಮಹತ್ವದ 5 ಗ್ಯಾರಂಟಿ (5 Guarantee) ಯೋಜನೆಗಳಲ್ಲಿ ಒಂದಾದ “ಗೃಹ ಜ್ಯೋತಿ”ಗೆ (Gruha Jyothi) ಅಭೂತಪೂರ್ವ ರೆಸ್ಪಾನ್ಸ್​ ದೊರೆತಿದೆ. ಆದರೆ ಆರಂಭದ ವೇಳೆಯೇ ಸೈಬರ್ ಕಳ್ಳರ (Cyber thieves) ಕೈಚಳಕ ಆತಂಕ ಮೂಡಿಸಿದೆ. ಆರೋಪಿಗಳು ಬೆಸ್ಕಾಂ (BESCOM) ಗ್ರಾಹಕರಿಗೆ ಕರೆ ಮಾಡಿ ​ಬಿಲ್ ಬಾಕಿ ಇದೆ ಬೇಗ ಬಿಲ್ ಕಟ್ಟಿ ಇಲ್ಲವಾದರೆ ಕನೆಕ್ಷನ್ ಕಟ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ದೋಚಿರುವ ಆರೋಪ ಕೇಳಿಬಂದಿದೆ. ಹೀಗೆ ನಗರದ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್​ ಅವರಿಗೆ ಕರೆ ಮಾಡಿ ಸುಳ್ಳು ಹೇಳಿ ಅಕೌಂಟ್​ನಿಂದ 53 ಸಾವಿರ ರೂ. ವಂಚಿಸಿದ್ದಾರೆ.

ಸೈಬರ್ ಕಳ್ಳರು ಮೊದಲಿಗೆ ನಾರಾಯಣ್ ಅವರ ಮೊಬೈಲ್ ನಂಬರ್​ಗೆ ಒಂದು ಲಿಂಕ್ ಕಳಿಸಿದ್ದಾರೆ. ಬಳಿಕ ಕರೆ ಮಾಡಿ ಬೆಸ್ಕಾಂ ಬಿಲ್ ಬಾಕಿ ಇದೆ ಎಂದು ಹೇಳಿದ್ದಾರೆ. ನೀವು ಇಂದೇ ಬೆಸ್ಕಾಂ ಬಿಲ್ ಕಟ್ಟಬೇಕು ಇಲ್ಲವಾದರೇ ಕನೆಕ್ಷನ್ ಕಟ್ ಆಗುತ್ತೆ ಎಂದು ಹೇಳಿದ್ದಾರೆ. ಅದಕ್ಕೆ ನಾರಾಯಣ್ ಪ್ರಸಾದ್ ಗಾಬರಿಯಾಗಿ ಹೇಗೆ ತುಂಬುವುದು ಎಂದಿದ್ದಾರೆ.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ಅಧಿಕೃತ ಫೋನ್ ಸಂಖ್ಯೆ ದುರ್ಬಳಕೆ: ಎಫ್​​ಐಆರ್​ ದಾಖಲು

ಆರೋಪಿಗಳು ನಾವು ಕಳುಹಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಫಾಲೋ ಮಾಡಿ ಎಂದಿದ್ದಾರೆ. ಸೈಬರ್ ಕಳ್ಳರ ಮಾತು ಕೇಳಿ ನಾರಾಯಣ್ ಪ್ರಸಾದ್​ ಲಿಂಕ್ ಕ್ಲಿಕ್ ಮೇಲೆ ಕ್ಲಿಕ್ ಮಾಡಿದ್ದಾರೆ. ಈ ವೇಳೆ ನಾರಾಯಣ್ ಪ್ರಸಾದ್​ ಮೊದಲು ಒಂದು ರೂಪಾಯಿ ಕಳುಹಿಸಿದ್ದಾರೆ. ಬಳಿಕ ಹಂತ ಹಂತವಾಗಿ 9 ಸಾವಿರ 10 ಸಾವಿರ ಹಣ ಅಕೌಂಟ್​​​ನಿಂದ ಕಟ್ ಆಗಿತ್ತು. ಬಳಿಕ ನಾರಾಯಣ್​ ಪ್ರಸಾದ್​​ ಅಕೌಂಟ್​ ಚೆಕ್​​ ಮಾಡಿದಾಗ 53 ಸಾವಿರ ರೂ. ಕಟ್​​ ಆಗಿರುವುದು ತಿಳಿದಿದೆ. ಸದ್ಯ ನಾರಾಯಣ್ ಪ್ರಸಾದ್ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್​ಐಆರ್​ ದಾಖಲಾಗಿದೆ. ಪೊಲೀಸರು 420 ವಂಚನೆ ಅಡಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:41 am, Sat, 8 July 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್