AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ

ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಬೆಂಗಳೂರಿನ ಹೆಚ್​ಎಎಲ್​ ಲೇಔಟ್​ ನಿವಾಸಿಗೆ ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ
ಸೈಬರ್​ ಕ್ರೈಂ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Sep 12, 2023 | 7:24 AM

Share

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ಹೆಚ್ಚುತ್ತಿವೆ. ಮೊಬೈಲ್​, ಸಿಸ್ಟಮ್​ ಹ್ಯಾಕ್​ ಅಥವಾ ಕರೆ ಮಾಡಿ ನಿಮ್ಮ ವೈಯಕ್ತಿ ದಾಖಲೆಗಳ ಮಾಹಿತಿ ಪಡೆದು ವಂಚಿಸುತ್ತಿರುವ ಸಂಖ್ಯೆ ಹೆಚ್ಚಿತ್ತಿದೆ. ಈ ಬಗ್ಗೆ ಪೊಲೀಸ್​ ಇಲಾಖೆ ಕ್ರಮಕೈಗೊಳ್ಳುತ್ತಿದೆ ಮತ್ತು ಸಾರ್ವಜನಿಕರಲ್ಲೂ ಅರಿವು ಮೂಡಿಸುತ್ತಿದೆ. ಇದೀಗ ಮತ್ತೊಂದು ಸೈಬರ್​ ಕ್ರೈಂ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರ (Delhi Police) ಹೆಸರಿನಲ್ಲಿ ಕರೆ ಮಾಡಿ 54 ಸಾವಿರ ರೂ. ಹಣ ನೀಡುವಂತೆ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2023ರ ಆಗಸ್ಟ್​​ 17 ಮತ್ತು 18 ರಂದು ರಾಜು ತಿವಾರಿ ಎಂಬಾತ ನಗರದ ಹೆಚ್​ಎಎಲ್​ ಲೇಔಟ್​​​ ನಿವಾಸಿಯಾದ ಪ್ರೋಮಿತ್ ಮೌಲಿಕ್ ಅವರಿಗೆ ಕರೆ ಮಾಡಿ ನಾನು (ರಾಜು ತಿವಾರಿ) ದೆಹಲಿ ಪೊಲೀಸ್, ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ಹೆದರಿಸುತ್ತಾನೆ. ನಂತರ ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಹೇಳುತ್ತಾನೆ. ಇದಕ್ಕೆ ಬೆದರಿ ಪ್ರೋಮಿತ್​ ಮೌಲಿಕ್​ ಅವರು ಒಂದಿಷ್ಟು ಹಣ ನೀಡುತ್ತಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಆರೋಪಿ ಮತ್ತೆ ಪ್ರೋಮಿತ್​ ಮೌಲಿಕ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಮುಚ್ಚಿ ಹಾಕಲು 54 ಸಾವಿರ ರೂ. ನೀಡಿ ಎಂದು ಹೇಳುತ್ತಾನೆ. ಹಣ ನೀಡುವಂತೆ ಪದೇ ಪದೇ ಕರೆ ಮಾಡುತ್ತಾನೆ. ನಿರಂತರವಾಗಿ ಕರೆ ಬಂದ ಹಿನ್ನೆಲೆಯಲ್ಲಿ ಪ್ರೋಮಿತ್ ಮೌಲಿಕ್ ಅವರು ಹೆಚ್​ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Tue, 12 September 23

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ