AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ

ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಬೆಂಗಳೂರಿನ ಹೆಚ್​ಎಎಲ್​ ಲೇಔಟ್​ ನಿವಾಸಿಗೆ ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ
ಸೈಬರ್​ ಕ್ರೈಂ
Jagadisha B
| Edited By: |

Updated on:Sep 12, 2023 | 7:24 AM

Share

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ಹೆಚ್ಚುತ್ತಿವೆ. ಮೊಬೈಲ್​, ಸಿಸ್ಟಮ್​ ಹ್ಯಾಕ್​ ಅಥವಾ ಕರೆ ಮಾಡಿ ನಿಮ್ಮ ವೈಯಕ್ತಿ ದಾಖಲೆಗಳ ಮಾಹಿತಿ ಪಡೆದು ವಂಚಿಸುತ್ತಿರುವ ಸಂಖ್ಯೆ ಹೆಚ್ಚಿತ್ತಿದೆ. ಈ ಬಗ್ಗೆ ಪೊಲೀಸ್​ ಇಲಾಖೆ ಕ್ರಮಕೈಗೊಳ್ಳುತ್ತಿದೆ ಮತ್ತು ಸಾರ್ವಜನಿಕರಲ್ಲೂ ಅರಿವು ಮೂಡಿಸುತ್ತಿದೆ. ಇದೀಗ ಮತ್ತೊಂದು ಸೈಬರ್​ ಕ್ರೈಂ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರ (Delhi Police) ಹೆಸರಿನಲ್ಲಿ ಕರೆ ಮಾಡಿ 54 ಸಾವಿರ ರೂ. ಹಣ ನೀಡುವಂತೆ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2023ರ ಆಗಸ್ಟ್​​ 17 ಮತ್ತು 18 ರಂದು ರಾಜು ತಿವಾರಿ ಎಂಬಾತ ನಗರದ ಹೆಚ್​ಎಎಲ್​ ಲೇಔಟ್​​​ ನಿವಾಸಿಯಾದ ಪ್ರೋಮಿತ್ ಮೌಲಿಕ್ ಅವರಿಗೆ ಕರೆ ಮಾಡಿ ನಾನು (ರಾಜು ತಿವಾರಿ) ದೆಹಲಿ ಪೊಲೀಸ್, ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ಹೆದರಿಸುತ್ತಾನೆ. ನಂತರ ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಹೇಳುತ್ತಾನೆ. ಇದಕ್ಕೆ ಬೆದರಿ ಪ್ರೋಮಿತ್​ ಮೌಲಿಕ್​ ಅವರು ಒಂದಿಷ್ಟು ಹಣ ನೀಡುತ್ತಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಆರೋಪಿ ಮತ್ತೆ ಪ್ರೋಮಿತ್​ ಮೌಲಿಕ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಮುಚ್ಚಿ ಹಾಕಲು 54 ಸಾವಿರ ರೂ. ನೀಡಿ ಎಂದು ಹೇಳುತ್ತಾನೆ. ಹಣ ನೀಡುವಂತೆ ಪದೇ ಪದೇ ಕರೆ ಮಾಡುತ್ತಾನೆ. ನಿರಂತರವಾಗಿ ಕರೆ ಬಂದ ಹಿನ್ನೆಲೆಯಲ್ಲಿ ಪ್ರೋಮಿತ್ ಮೌಲಿಕ್ ಅವರು ಹೆಚ್​ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Tue, 12 September 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?