AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ

ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಬೆಂಗಳೂರಿನ ಹೆಚ್​ಎಎಲ್​ ಲೇಔಟ್​ ನಿವಾಸಿಗೆ ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ
ಸೈಬರ್​ ಕ್ರೈಂ
Jagadisha B
| Edited By: |

Updated on:Sep 12, 2023 | 7:24 AM

Share

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ಹೆಚ್ಚುತ್ತಿವೆ. ಮೊಬೈಲ್​, ಸಿಸ್ಟಮ್​ ಹ್ಯಾಕ್​ ಅಥವಾ ಕರೆ ಮಾಡಿ ನಿಮ್ಮ ವೈಯಕ್ತಿ ದಾಖಲೆಗಳ ಮಾಹಿತಿ ಪಡೆದು ವಂಚಿಸುತ್ತಿರುವ ಸಂಖ್ಯೆ ಹೆಚ್ಚಿತ್ತಿದೆ. ಈ ಬಗ್ಗೆ ಪೊಲೀಸ್​ ಇಲಾಖೆ ಕ್ರಮಕೈಗೊಳ್ಳುತ್ತಿದೆ ಮತ್ತು ಸಾರ್ವಜನಿಕರಲ್ಲೂ ಅರಿವು ಮೂಡಿಸುತ್ತಿದೆ. ಇದೀಗ ಮತ್ತೊಂದು ಸೈಬರ್​ ಕ್ರೈಂ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರ (Delhi Police) ಹೆಸರಿನಲ್ಲಿ ಕರೆ ಮಾಡಿ 54 ಸಾವಿರ ರೂ. ಹಣ ನೀಡುವಂತೆ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2023ರ ಆಗಸ್ಟ್​​ 17 ಮತ್ತು 18 ರಂದು ರಾಜು ತಿವಾರಿ ಎಂಬಾತ ನಗರದ ಹೆಚ್​ಎಎಲ್​ ಲೇಔಟ್​​​ ನಿವಾಸಿಯಾದ ಪ್ರೋಮಿತ್ ಮೌಲಿಕ್ ಅವರಿಗೆ ಕರೆ ಮಾಡಿ ನಾನು (ರಾಜು ತಿವಾರಿ) ದೆಹಲಿ ಪೊಲೀಸ್, ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ಹೆದರಿಸುತ್ತಾನೆ. ನಂತರ ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಹೇಳುತ್ತಾನೆ. ಇದಕ್ಕೆ ಬೆದರಿ ಪ್ರೋಮಿತ್​ ಮೌಲಿಕ್​ ಅವರು ಒಂದಿಷ್ಟು ಹಣ ನೀಡುತ್ತಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಆರೋಪಿ ಮತ್ತೆ ಪ್ರೋಮಿತ್​ ಮೌಲಿಕ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಮುಚ್ಚಿ ಹಾಕಲು 54 ಸಾವಿರ ರೂ. ನೀಡಿ ಎಂದು ಹೇಳುತ್ತಾನೆ. ಹಣ ನೀಡುವಂತೆ ಪದೇ ಪದೇ ಕರೆ ಮಾಡುತ್ತಾನೆ. ನಿರಂತರವಾಗಿ ಕರೆ ಬಂದ ಹಿನ್ನೆಲೆಯಲ್ಲಿ ಪ್ರೋಮಿತ್ ಮೌಲಿಕ್ ಅವರು ಹೆಚ್​ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Tue, 12 September 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು