AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ

ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಬೆಂಗಳೂರಿನ ಹೆಚ್​ಎಎಲ್​ ಲೇಔಟ್​ ನಿವಾಸಿಗೆ ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ
ಸೈಬರ್​ ಕ್ರೈಂ
Jagadisha B
| Edited By: |

Updated on:Sep 12, 2023 | 7:24 AM

Share

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ಹೆಚ್ಚುತ್ತಿವೆ. ಮೊಬೈಲ್​, ಸಿಸ್ಟಮ್​ ಹ್ಯಾಕ್​ ಅಥವಾ ಕರೆ ಮಾಡಿ ನಿಮ್ಮ ವೈಯಕ್ತಿ ದಾಖಲೆಗಳ ಮಾಹಿತಿ ಪಡೆದು ವಂಚಿಸುತ್ತಿರುವ ಸಂಖ್ಯೆ ಹೆಚ್ಚಿತ್ತಿದೆ. ಈ ಬಗ್ಗೆ ಪೊಲೀಸ್​ ಇಲಾಖೆ ಕ್ರಮಕೈಗೊಳ್ಳುತ್ತಿದೆ ಮತ್ತು ಸಾರ್ವಜನಿಕರಲ್ಲೂ ಅರಿವು ಮೂಡಿಸುತ್ತಿದೆ. ಇದೀಗ ಮತ್ತೊಂದು ಸೈಬರ್​ ಕ್ರೈಂ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರ (Delhi Police) ಹೆಸರಿನಲ್ಲಿ ಕರೆ ಮಾಡಿ 54 ಸಾವಿರ ರೂ. ಹಣ ನೀಡುವಂತೆ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2023ರ ಆಗಸ್ಟ್​​ 17 ಮತ್ತು 18 ರಂದು ರಾಜು ತಿವಾರಿ ಎಂಬಾತ ನಗರದ ಹೆಚ್​ಎಎಲ್​ ಲೇಔಟ್​​​ ನಿವಾಸಿಯಾದ ಪ್ರೋಮಿತ್ ಮೌಲಿಕ್ ಅವರಿಗೆ ಕರೆ ಮಾಡಿ ನಾನು (ರಾಜು ತಿವಾರಿ) ದೆಹಲಿ ಪೊಲೀಸ್, ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ಹೆದರಿಸುತ್ತಾನೆ. ನಂತರ ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಹೇಳುತ್ತಾನೆ. ಇದಕ್ಕೆ ಬೆದರಿ ಪ್ರೋಮಿತ್​ ಮೌಲಿಕ್​ ಅವರು ಒಂದಿಷ್ಟು ಹಣ ನೀಡುತ್ತಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಆರೋಪಿ ಮತ್ತೆ ಪ್ರೋಮಿತ್​ ಮೌಲಿಕ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಮುಚ್ಚಿ ಹಾಕಲು 54 ಸಾವಿರ ರೂ. ನೀಡಿ ಎಂದು ಹೇಳುತ್ತಾನೆ. ಹಣ ನೀಡುವಂತೆ ಪದೇ ಪದೇ ಕರೆ ಮಾಡುತ್ತಾನೆ. ನಿರಂತರವಾಗಿ ಕರೆ ಬಂದ ಹಿನ್ನೆಲೆಯಲ್ಲಿ ಪ್ರೋಮಿತ್ ಮೌಲಿಕ್ ಅವರು ಹೆಚ್​ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Tue, 12 September 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ