AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ

ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಬೆಂಗಳೂರಿನ ಹೆಚ್​ಎಎಲ್​ ಲೇಔಟ್​ ನಿವಾಸಿಗೆ ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ
ಸೈಬರ್​ ಕ್ರೈಂ
Jagadisha B
| Edited By: |

Updated on:Sep 12, 2023 | 7:24 AM

Share

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ಹೆಚ್ಚುತ್ತಿವೆ. ಮೊಬೈಲ್​, ಸಿಸ್ಟಮ್​ ಹ್ಯಾಕ್​ ಅಥವಾ ಕರೆ ಮಾಡಿ ನಿಮ್ಮ ವೈಯಕ್ತಿ ದಾಖಲೆಗಳ ಮಾಹಿತಿ ಪಡೆದು ವಂಚಿಸುತ್ತಿರುವ ಸಂಖ್ಯೆ ಹೆಚ್ಚಿತ್ತಿದೆ. ಈ ಬಗ್ಗೆ ಪೊಲೀಸ್​ ಇಲಾಖೆ ಕ್ರಮಕೈಗೊಳ್ಳುತ್ತಿದೆ ಮತ್ತು ಸಾರ್ವಜನಿಕರಲ್ಲೂ ಅರಿವು ಮೂಡಿಸುತ್ತಿದೆ. ಇದೀಗ ಮತ್ತೊಂದು ಸೈಬರ್​ ಕ್ರೈಂ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರ (Delhi Police) ಹೆಸರಿನಲ್ಲಿ ಕರೆ ಮಾಡಿ 54 ಸಾವಿರ ರೂ. ಹಣ ನೀಡುವಂತೆ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2023ರ ಆಗಸ್ಟ್​​ 17 ಮತ್ತು 18 ರಂದು ರಾಜು ತಿವಾರಿ ಎಂಬಾತ ನಗರದ ಹೆಚ್​ಎಎಲ್​ ಲೇಔಟ್​​​ ನಿವಾಸಿಯಾದ ಪ್ರೋಮಿತ್ ಮೌಲಿಕ್ ಅವರಿಗೆ ಕರೆ ಮಾಡಿ ನಾನು (ರಾಜು ತಿವಾರಿ) ದೆಹಲಿ ಪೊಲೀಸ್, ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ಹೆದರಿಸುತ್ತಾನೆ. ನಂತರ ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಹೇಳುತ್ತಾನೆ. ಇದಕ್ಕೆ ಬೆದರಿ ಪ್ರೋಮಿತ್​ ಮೌಲಿಕ್​ ಅವರು ಒಂದಿಷ್ಟು ಹಣ ನೀಡುತ್ತಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಆರೋಪಿ ಮತ್ತೆ ಪ್ರೋಮಿತ್​ ಮೌಲಿಕ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಮುಚ್ಚಿ ಹಾಕಲು 54 ಸಾವಿರ ರೂ. ನೀಡಿ ಎಂದು ಹೇಳುತ್ತಾನೆ. ಹಣ ನೀಡುವಂತೆ ಪದೇ ಪದೇ ಕರೆ ಮಾಡುತ್ತಾನೆ. ನಿರಂತರವಾಗಿ ಕರೆ ಬಂದ ಹಿನ್ನೆಲೆಯಲ್ಲಿ ಪ್ರೋಮಿತ್ ಮೌಲಿಕ್ ಅವರು ಹೆಚ್​ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Tue, 12 September 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್