ಮಂಗಳೂರು, ಜನವರಿ 28: ಪಟಾಕಿ (firecracker) ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ದುರಂತ ಸಂಭವಿಸಿದೆ. ಕೇರಳ ಮೂಲದ ಸ್ವಾಮಿ(55), ವರ್ಗಿಸ್(68)
ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಚೇತನ್(25) ಮೃತರು. ಬಶೀರ್ ಎಂಬುವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್ ಪಟಾಕಿ ಗೋದಾಮಿನಲ್ಲಿ ಅವಘಡ ಸಂಭವಿಸಿದೆ. ಪಟಾಕಿ ಸ್ಫೋಟದ ರಭಸಕ್ಕೆ ಗೋದಾಮಿನಿಂದ ಹೊರಗೆ ಕಾರ್ಮಿಕ ಹಾರಿಬಿದ್ದಿದ್ದಾರೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ಸ್ಪೋಟದಲ್ಲಿ ಗಾಯಗೊಂಡ ಆರು ಜನರ ಗುರುತು ಪತ್ತೆಯಾಗಿದೆ. ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು. ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು.
ಇಬ್ಬರು ಕಾರ್ಮಿಕರನ್ನು ವೇಣೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟಾಕಿ ಕಾರ್ಖಾನೆ ಮಾಲೀಕನ ವಿರುದ್ಧ ಸ್ಥಳೀಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಫೋಟದ ತೀವ್ರತೆಗೆ ಕೈ ಹಾಗೂ ಮೆದುಳು ಪಕ್ಕದ ತೋಟದಲ್ಲಿ ಬಿದ್ದಿದೆ.
ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ನಗರದ ಬಸವನಗಲ್ಲಿಯಲ್ಲಿ ನಡೆದಿದೆ. ಮನೆಯಲ್ಲಿ ಎಲ್ಪಿಜಿ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ಐವರಿಗೆ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ: ಬಂಟ್ವಾಳ: ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಮುಂದಾಗಿದ್ದ ದಂಪತಿ ಸಾವು
ಲಲಿತಾ ಭಟ್(48), ಮೋಹನ್ ಭಟ್(56), ಕಮಲಾಕ್ಷಿ ಭಟ್(80), ಹೇಮಂತ್ ಭಟ್(27), ಗೋಪಿಕೃಷ್ಣ ಭಟ್(84) ಎಂಬುವರಿಗೆ ಗಾಯಗಳಾಗಿವೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಲಾಪುರ ಬಳಿ ನಡೆದಿದೆ. ಸೋಮಶೇಖರ್ 42 ಮೃತ ದುರ್ದೈವಿ. ಉಮೇಶ್ ಎನ್ನುವರಿಗೆ ಕಾಲು ಮುರಿದಿದೆ. ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ: ಎರಡು ಕ್ಯಾಂಟರ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಲಾಂಗ್ನಿಂದ ಹೊಡೆದು ಕೊಲೆ
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮ್ಮನಕೆರೆ ಕಟ್ಟೆ ಮೇಲೆ ಘಟನೆ ನಡೆದಿದೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:57 pm, Sun, 28 January 24