AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಜೋಡಿಯ ಲವ್ವಿ ಡೌವ್ವಿ: ಯುವಕನಿಗೆ ಥಳಿತ, ಎಫ್​ಐಆರ್ ದಾಖಲು

ಅನ್ಯಕೋಮಿನ ಯುವಕ-ಯುವತಿ ಮೇಲೆ ಎರಗಿದ ವಿದ್ಯಾರ್ಥಿಗಳ ಗುಂಪೊಂದು ಯುವಕನಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ.

ಅನ್ಯಕೋಮಿನ ಜೋಡಿಯ ಲವ್ವಿ ಡೌವ್ವಿ: ಯುವಕನಿಗೆ ಥಳಿತ, ಎಫ್​ಐಆರ್ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 31, 2022 | 1:19 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರಿದಿದ್ದು, ಪರಸ್ಪರ ಪ್ರೀತಿಸುತ್ತಿದ್ದ ಅನ್ಯಕೋಮಿನ ಜೋಡಿಯ ಮೇಲೆ ಎರಗಿದ ವಿದ್ಯಾರ್ಥಿಗಳ ಗುಂಪೊಂದು ಯುವಕನಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಎಂಟು ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿರುವ ಮುಸ್ಲಿಂ ಯುವಕ ಸನೀಫ್ ಸುಳ್ಯ ಮತ್ತು ಅದೇ ಕಾಲೇಜಿನ ಯುವರ್ತಿಯೋರ್ವಳು ಪರಸ್ಪರ ಪ್ರೀತಿಸುತ್ತಿದ್ದರು. ಅದರಂತೆ ಜೋಡಿ ನಿರಂತರ ಮಾತುಕತೆಯಲ್ಲಿ ತೊಡಗಿದ್ದರು. ಇದರಿಂದ ಕೆರಳಿದ ವಿದ್ಯಾರ್ಥಿಗಳ ಗುಂಪೊಂದು ಮಂಗಳವಾರ ಕಾಲೇಜು ಮೈದಾನಕ್ಕೆ ಯುವಕನನ್ನು ಕರೆದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.

ಸನೀಫ್​ನ ಕಾಲರ್ ಪಟ್ಟಿ ಹಿಡಿದು ಯುವತಿಯೊಂದಿಗೆ ಯಾಕೆ ಮಾತನಾಡುತ್ತೀಯಾ? ಇನ್ನು ಮುಂದೆ ಯುವತಿಯೊಂದಿಗೆ ಮಾತನಾಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಸನೀಫ್​ನ ಬೆನ್ನಿಗೆ ಬಾಸುಂಡೆಗಳು ಬರುವಂತೆ ಥಳಿಸಿದ್ದಾರೆ. ಪ್ರಕರಣ ಸಂಬಂಧ ಸನೀಫ್ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರಿನ ಅನ್ವಯ ಪೊಲೀಸರು ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಸೇರಿದಂತೆ ಒಟ್ಟು ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Wed, 31 August 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು