AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯಕ್ಕೆ ಬಡಿದ ಸಂಶಯದ ಗಾಳಿ; ಪತ್ನಿಯನ್ನು ಕೊಂದ ಪತಿ ಮಾಡಿದ್ದೇನು ನೋಡಿ

ದಾಂಪತ್ಯ ಎಂಬ ಸುಂದರ ಸಂಬಂಧದಲ್ಲಿ ಕೊಂಚ ವ್ಯತ್ಯಾಸವಾದರೂ ಬಿರುಕು ಮೂಡುವುದು ಖಂಡಿತ. ಮಂಗಳೂರಿನಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಪತಿಯ ಸಂಶಯ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದ್ದಲ್ಲದೆ ತನ್ನ ಜೀವನವನ್ನೂ ಅಂತ್ಯಗೊಳಿಸಿದ್ದಾನೆ.

ದಾಂಪತ್ಯಕ್ಕೆ ಬಡಿದ ಸಂಶಯದ ಗಾಳಿ; ಪತ್ನಿಯನ್ನು ಕೊಂದ ಪತಿ ಮಾಡಿದ್ದೇನು ನೋಡಿ
ಮಂಗಳೂರು: ಪತ್ನಿಯನ್ನು ಕೊಂದ ಪತಿ
TV9 Web
| Edited By: |

Updated on: Oct 28, 2022 | 11:54 AM

Share

ಮಂಗಳೂರು: ಒಂದಾಗಿ ಬಾಳಬೇಕಾದ ಜೀವಗಳ ನಡುವೆ ವಿರಸ ಮೂಡಿದರೆ ಎಂತಹ ವಿಕೋಪಕ್ಕೂ ದಾರಿ ಮಾಡಿಕೊಡಬಹುದು ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದಲ್ಲಿ ನಡೆದ ಈ ಘೋರ ದುರಂತವೇ ಸಾಕ್ಷಿ. ಬರೋಬ್ಬರಿ 26 ವರ್ಷಗಳ ದಾಂಪತ್ಯವೊಂದು ಕೊಲೆ ಹಾಗೂ ಆತ್ಮಹತ್ಯೆಯಲ್ಲಿ ದಾರುಣ ಅಂತ್ಯ ಕಂಡ ಘಟನೆಯೊಂದು ಮಂಗಳೂರು ನಗರ ಹೊರವಲಯದ ಉಳ್ಳಾಲ ಪೊಲೀಸ್​ ಠಾಣಾ ವ್ಯಾಪ್ತಿಯ ಸೋಮೇಶ್ವರ ಪಿಲಾರ್​ ಎಂಬಲ್ಲಿ ನಡೆದಿದೆ. ಹೆಂಡತಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನ ಹೊಂದಿದ್ದ ಪತಿಯು ಆಕೆಯನ್ನು ಕೊಂದು ತಾನೂ ನೇಣಿಗೆ ಶರಣಾಗಿದ್ದಾನೆ.

ಮೃತ ಪತ್ನಿಯನ್ನು 46 ವರ್ಷದ ಶೋಭಾ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರಾದ ಶೋಭಾ ಹಾಗೂ 55 ವರ್ಷದ ಶಿವಾನಂದ ದಾಪಂತ್ಯದಲ್ಲಿ ಮದುವೆಯಾದ ದಿನದಿಂದಲೂ ವಿರಸವಿತ್ತಂತೆ. ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನದ ಭೂತ ಶಿವಾನಂದನನ್ನೂ ಕಾಡುತ್ತಿತ್ತು. ಪುತ್ರಿಯನ್ನು ವಿವಾಹ ಮಾಡಿಕೊಟ್ಟಿದ್ದ ಶೋಭಾ ಹಾಗೂ ಶಿವನಾಂದ ಪುತ್ರನ ಜೊತೆಯಲ್ಲಿ ಮನೆಯಲ್ಲಿ ವಾಸವಿದ್ದ. ಅದರಂತೆ ಅ.27ರಂದು ಬೆಳಗ್ಗೆ ಪುತ್ರ ಕಾರ್ತಿಕ್​ ಕೆಲಸಕ್ಕೆ ತೆರಳಿದ ಬಳಿಕ ಪತ್ನಿಯ ಜೊತೆ ಜಗಳ ಮಾಡಲು ಆರಂಭಿಸಿದ್ದಾನೆ. ಇದು ವಿಕೋಪಕ್ಕೆ ತಿರುಗಿದ್ದಲ್ಲದೆ ಶಿವಾನಂದ ಶೋಭಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಸಂಬಂಧಿಗಳಿಗೆ ಕರೆ ಮಾಡಿ ನಾನು ಸಾಯುತ್ತೇನೆ, ನನ್ನ ಶವಕ್ಕೆ ಮುಡಿಸಲು ಹೂವು ತನ್ನಿ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಬಳಿಕ ಮರವೊಂದಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೊಲೀಸರು ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಒಟ್ಟಿನಲ್ಲಿ ಮಕ್ಕಳ ಪ್ರಗತಿಯನ್ನು ನೋಡುತ್ತಾ ಜೊತೆಯಾಗಿ ಬಾಳಬೇಕಿದ್ದ ಈ ಜೋಡಿ ಈ ರೀತಿ ದಾರುಣ ಅಂತ್ಯ ಕಂಡಿದ್ದು ದುರಂತವೇ ಸರಿ.

ವರದಿ: ಅಶೋಕ್​ ಟಿವಿ 9 ಮಂಗಳೂರು

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ