AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ದನದ ಮಾಂಸ ತಿನ್ನಿಸಿದ ಯುವಕರು

ಉತ್ತರ ಪ್ರದೇಶದ ಹೋಟೆಲ್​ವೊಂದರಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಮುಸ್ಲಿಂ ಯುವಕರಿಬ್ಬರು ಅದನ್ನು ವಿಡಿಯೋ ಮಾಡಿಕೊಂಡು, ಆಕೆ ಮದುವೆಯಾಗಬೇಕಾಗಿದ್ದ ವರನಿಗೆ ಕಳುಹಿಸಿದ್ದಾರೆ. ಅಲ್ಲದೆ, ಆಕೆಗೆ ಒತ್ತಾಯವಾಗಿ ದನದ ಮಾಂಸ ತಿನ್ನಿಸಿದ್ದಾರೆ.

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ದನದ ಮಾಂಸ ತಿನ್ನಿಸಿದ ಯುವಕರು
ಪ್ರಾತಿನಿಧಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 08, 2023 | 12:59 PM

Share

ನೊಯ್ಡಾ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಬಳಿಕ ಇಬ್ಬರು ಮುಸ್ಲಿಂ ವ್ಯಕ್ತಿಗಳು, ಆ ಘಟನೆಯನ್ನು ವಿಡಿಯೋ ಮಾಡಿ, ಆಕೆಗೆ ಬಲವಂತವಾಗಿ ದನದ ಮಾಂಸವನ್ನು ತಿನ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಆರೋಪಿಗಳ ಸ್ನೇಹಿತೆಯಾಗಿದ್ದ ಮುಸ್ಲಿಂ ಮಹಿಳೆಯೂ ಈ ಕೃತ್ಯಕ್ಕೆ ಸಹಾಯ ಮಾಡಿದ್ದಳು.

ಮುಸ್ಲಿಂ ಮಹಿಳೆ ತನ್ನಿಬ್ಬರು ಸ್ನೇಹಿತರನ್ನು ಹೋಟೆಲ್​ಗೆ ಕರೆದಿದ್ದಳು. ಅಲ್ಲಿ ಆಕೆ ದಲಿತ ಮಹಿಳೆಯನ್ನು ಕರೆಸಿದ್ದಳು. ಆಕೆಯ ಮೇಲೆ ಮುಸ್ಲಿಂ ಯುವಕರಿಬ್ಬರು ಅತ್ಯಾಚಾರ ನಡೆಸಿದ್ದಾರೆ. ಬಿ ಫಾರ್ಮಾ ವಿದ್ಯಾರ್ಥಿ ಶೋಯೆಬ್ ಮತ್ತು ಕ್ಷೌರಿಕನಾಗಿ ಕೆಲಸ ಮಾಡುವ ನಾಜಿಮ್ ಎಂದು ಗುರುತಿಸಲಾದ ಆರೋಪಿಗಳು ಈ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ. ನಂತರ ಅತ್ಯಾಚಾರಕ್ಕೊಳಗಾದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ದುಷ್ಟ ಅಣ್ಣನಿಗೆ ರಕ್ಷಾ ಬಂಧನದಂದೇ ಶಿಕ್ಷೆ ಪ್ರಕಟಿಸಿದ ಹೈಕೋರ್ಟ್​

ಅದಕ್ಕೆ ಆಕೆ ಒಪ್ಪದಿದ್ದಾಗ ಆ ಮಹಿಳೆಯ ಜೊತೆ ಮದುವೆ ನಿಶ್ಚಯವಾಗಿದ್ದ ವರನಿಗೆ ಆ ವಿಡಿಯೋವನ್ನು ಕಳುಹಿಸಿದ್ದಾರೆ. ಬಳಿಕ ಸಿಕ್ಕಿ ಬೀಳುತ್ತೇವೆಂಬ ಭಯದಲ್ಲಿ ನಾಜಿಮ್ ಅವರ ಅಂಗಡಿ ಇರುವ ಕಾಶ್ಮೀರಕ್ಕೆ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ನಿಂದ ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆ ದಲಿತ ಮಹಿಳೆ ತನ್ನ ಮುಸ್ಲಿಂ ಸ್ನೇಹಿತೆಯಿಂದ ಸ್ವಲ್ಪ ಹಣವನ್ನು ಸಾಲ ಪಡೆದಿದ್ದಳು. ನಂತರ ಅದನ್ನು ಹಿಂದಿರುಗಿಸಲು ಬಯಸಿದ್ದಳು. ಅದಕ್ಕಾಗಿ ಆಕೆಯನ್ನು ಭೇಟಿಯಾಗಲು ಸೆಪ್ಟೆಂಬರ್ 2ರಂದು ಹೋಟೆಲ್​ಗೆ ಬಂದಿದ್ದಳು. ಆಗ ಆ ಮುಸ್ಲಿಂ ಮಹಿಳೆ ತನ್ನಿಬ್ಬರು ಗೆಳೆಯರನ್ನು ಕರೆಸಿ, ಸಾಮೂಹಿಕ ಅತ್ಯಾಚಾರಕ್ಕೆ ಪ್ರಚೋದನೆ ನೀಡಿದ್ದಾಳೆ ಎನ್ನಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!