AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತ ಭಿಕ್ಷುಕಿಯ ಕೊಲೆ! ಪಾತಕಿಯ ಲೆಕ್ಕಾಚಾರ ಏನಿತ್ತು ಗೊತ್ತಾ?

ಮುಂಬೈ: ಅತ್ತೆ ಸೊಸೆಯರ ಜಗಳ ಬಹುತೇಕರ ಮನೆಯಲ್ಲೂ ಇದ್ದದ್ದೆ. ಆದ್ರೆ ಮುಂಬೈನಲ್ಲಿ ಮಾತ್ರ ಇದು ವಿಕೋಪಕ್ಕೆ ತಿರುಗಿದೆ. ಪರಿಣಾಮ ಸಿಟ್ಟಿನ ಕೈಗೆ ಬುದ್ದಿ ಕೊಟ್ಟ ಸೊಸೆ, ಅತ್ತೆಯನ್ನ ಕುತ್ತಿಗೆ ಹಿಚುಕಿ ಕೊಲೆ ಮಾಡಿ ಕಂಬಿ ಹಿಂದೆ ಹೋಗಿದ್ದಾಳೆ. ಹೌದು ಮುಂಬೈ ಮಹಾನಗರದಲ್ಲಿ ಕ್ರೈಮ್‌ಗಳಿಗೇನೂ ಬರವಿಲ್ಲ. ಆದ್ರೆ ಈ ಕೊಲೆ ಮಾತ್ರ ಕೊಂಚ ಭಿನ್ನವಾಗಿದೆ. ಮುಂಬೈನ ಚೆಂಬೂರ್ ಸಮೀಪದ ಪೆಸ್ತುಮ್ ಸಾಗರ್ ಕಾಲೋನಿಯ ನಿವಾಸಿ 70 ವರ್ಷದ ಸಂಜನಾ ಪಾಟೀಲ್ ಎಂಬ ವೃದ್ಧೆ ಕೊಲೆಗೀಡಾದ ದುರ್ದೈವಿ. ಈಕೆಗೆ ಮಕ್ಕಳಾಗಿರಲಿಲ್ಲ. […]

ಶ್ರೀಮಂತ ಭಿಕ್ಷುಕಿಯ ಕೊಲೆ! ಪಾತಕಿಯ ಲೆಕ್ಕಾಚಾರ ಏನಿತ್ತು ಗೊತ್ತಾ?
Guru
| Edited By: |

Updated on:Jul 17, 2020 | 7:42 PM

Share

ಮುಂಬೈ: ಅತ್ತೆ ಸೊಸೆಯರ ಜಗಳ ಬಹುತೇಕರ ಮನೆಯಲ್ಲೂ ಇದ್ದದ್ದೆ. ಆದ್ರೆ ಮುಂಬೈನಲ್ಲಿ ಮಾತ್ರ ಇದು ವಿಕೋಪಕ್ಕೆ ತಿರುಗಿದೆ. ಪರಿಣಾಮ ಸಿಟ್ಟಿನ ಕೈಗೆ ಬುದ್ದಿ ಕೊಟ್ಟ ಸೊಸೆ, ಅತ್ತೆಯನ್ನ ಕುತ್ತಿಗೆ ಹಿಚುಕಿ ಕೊಲೆ ಮಾಡಿ ಕಂಬಿ ಹಿಂದೆ ಹೋಗಿದ್ದಾಳೆ.

ಹೌದು ಮುಂಬೈ ಮಹಾನಗರದಲ್ಲಿ ಕ್ರೈಮ್‌ಗಳಿಗೇನೂ ಬರವಿಲ್ಲ. ಆದ್ರೆ ಈ ಕೊಲೆ ಮಾತ್ರ ಕೊಂಚ ಭಿನ್ನವಾಗಿದೆ. ಮುಂಬೈನ ಚೆಂಬೂರ್ ಸಮೀಪದ ಪೆಸ್ತುಮ್ ಸಾಗರ್ ಕಾಲೋನಿಯ ನಿವಾಸಿ 70 ವರ್ಷದ ಸಂಜನಾ ಪಾಟೀಲ್ ಎಂಬ ವೃದ್ಧೆ ಕೊಲೆಗೀಡಾದ ದುರ್ದೈವಿ. ಈಕೆಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಗಂಡನ ಸಹೋದರನ ಮಗನನ್ನು ದತ್ತು ಪಡೆದಿದ್ದಳು. ಆತನಿಗೆ ಮದುವೆಯನ್ನೂ ಮಾಡಿ ಮನೆಯಲ್ಲಿಯೇ ಇಟ್ಟುಕೊಂಡಿದ್ದಳು.

ನಾಲ್ಕು ಫ್ಲಾಟ್‌ಗಳಿದ್ದರೂ ಭಿಕ್ಷೆ ಬೇಡುತ್ತಿದ್ದ ಅತ್ತೆ  ಈ ಸಂಜನಾ ಪಾಟೀಲ್‌ಗೆ ಮುಂಬೈನ ಚೆಂಬೂರ್‌ನಲ್ಲಿ ಎರಡು ಮತ್ತು ವೊರ್ಲಿಯಲ್ಲಿ ಎರಡು ಫ್ಲಾಟ್‌ಗಳಿವೆ. ಇವುಗಳಲ್ಲಿ ಮೂರು ಫ್ಲಾಟ್‌ಗಳನ್ನು ಬಾಡಿಗೆಗೆ ನೀಡಿ ಒಂದರಲ್ಲಿ ತಾನು ಮತ್ತು ದತ್ತುಮಗನ ಸಂಸಾರದೊಂದಿಗೆ ವಾಸವಾಗಿದ್ದಳು. ಆದ್ರೂ ಈ ವೃದ್ಧೆ ಸಮೀಪದ ಜೈನ್ ದೇವಸ್ಥಾನದ ಹತ್ತಿರ ಭಿಕ್ಷೆ ಬೇಡುತ್ತಿದ್ದಳು ಎನ್ನಲಾಗಿದೆ. ಹೀಗೆ ಬಾಡಿಗೆಯಿಂದ ಬಂದ ಹಣ ಮತ್ತು ಭಿಕ್ಷೆಯಿಂದ ಬಂದ ಹಣವನ್ನು ಯಾರಿಗೂ ಕೊಡದೇ ಮನೆಯಲ್ಲಿ ಬಚ್ಚಿಡುತ್ತಿದ್ದಳು ಎಂದು ತಿಳಿದು ಬಂದಿದೆ.

ಸಾಯೋವರೆಗೂ ಬ್ಯಾಟ್‌ನಿಂದ ಹೊಡೆತ ಇಷ್ಟೆಲ್ಲಾ ಇದ್ರೂ ಈ ಮುದುಕಿ, ಸೊಸೆಯ ಹತ್ತಿರ ಹಣ ಕೇಳುತ್ತಿದ್ದಳು ಎನ್ನಲಾಗಿದೆ. ಆದರೆ ಸೋಮವಾರ ಮೂರು ಗಂಟೆಯ ಸುಮಾರಿಗೆ ಹಣದ ವಿಷಯಕ್ಕೆ ಸಂಬಂಧಿಸಿದಂತೆ ಅತ್ತೆ ಸಂಜನಾ ಮತ್ತು ಸೊಸೆ ಅಂಜನಾ ನಡುವೆ ಜಗಳ ಶುರುವಾಗಿದೆ. ನಂತರ ವಿಕೋಪಕ್ಕೆ ತಿರುಗಿ, ಸೊಸೆ ಬ್ಯಾಟ್‌ನಿಂದ ಅತ್ತೆಯನ್ನ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ನಂತರ ಮೊಬೈಲ್ ಚಾರ್ಜಿಂಗ್ ವೈರ್‌ನಿಂದ ಅತ್ತೆಯ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ.

ಗಾಯ ನೋಡಿ ದಂಗಾದ ವೈದ್ಯರು ಕೊಲೆ ಮಾಡಿದ ನಂತರ ಮೃತ ದೇಹವನ್ನ ಸಮೀಪದ ರಾಜವಾಡಿ ಆಸ್ಪತ್ರೆಗೆ ಸಾಗಿಸಿದ ಸೊಸೆ, ಅತ್ತೆ ಬಾತ್ ರೂಮ್‌ನಲ್ಲಿ ಬಿದ್ದು ಗಾಯಗೊಂಡಿದ್ದಾಳೆ ಎಂದು ಹೇಳಿದ್ದಾಳೆ. ಆದ್ರೆ ದೇಹದ ಮೇಲಿನ ಗಾಯದ ಕಲೆ ಮತ್ತು ಕುತ್ತಿಗೆ ಸುತ್ತ ಆದ ಗಾಯ ನೋಡಿದ ವೈದ್ಯರು, ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ಬಗ್ಗೆ ವಿಚಾರಣೆ ಆರಂಭಿಸಿದ ಪೊಲೀಸರಿಗೆ ತನಿಖೆ ವೇಳೆ ಸೊಸೆ ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ಆಕೆಯ ಚಿಕ್ಕ ಮಗಳನ್ನ ಪೊಲೀಸರು ವಿಚಾರಿಸಿದಾಗ ಅತ್ತೆ-ಸೊಸೆಯ ಜಗಳದ ಬಗ್ಗೆ ಗೊತ್ತಾಗಿದೆ.

ದುರಾಸೆಗೆ ಬಿದ್ದು ಜೈಲು ಪಾಲಾದ ಸೊಸೆ ಅಷ್ಟೆ, ಪೊಲೀಸರು ಸೊಸೆಯನ್ನ ಕಂಬಿ ಹಿಂದೆ ಹಾಕಿ ಇಂಟರಾಗೇಶನ್ ಮಾಡಿದ್ದಾರೆ. ಯಾವಾಗ ಲಾಕಪ್ ಹಿಂದೆ ಹೋದಳೋ ಸೊಸೆ ನಡೆದ ಘಟನೆಯನ್ನಲ್ಲಾ ಬಾಯಿ ಬಿಟ್ಟಿದ್ದಾಳೆ. ನಾಲ್ಕು ಫ್ಲಾಟ್‌ಗಳನ್ನು ತನ್ನ ಹೆಸರಿಗೆ ಮಾಡು ಅಂತಾ ಅತ್ತೆಗೆ ಏಷ್ಟು ಕೇಳಿಕೊಂಡರೂ ತನ್ನ ಹೆಸರಿಗೆ ಮಾಡಲಿಲ್ಲ. ಜೊತೆಗೆ ಹಣಕ್ಕಾಗಿ ಆಗಾಗ ಜಗಳವಾಗತ್ತಿತ್ತು ಎಂದು ಬಾಯಿ ಬಿಟ್ಟಿದ್ದಾಳೆ. ಆದರೆ ಏನು ಬಂತು ದುರಾಸೆಗೆ ಬಿದ್ದು ಅತ್ತೆಯ ಕೊಲೆ ಮಾಡಿದ್ದಕ್ಕೆ ಈಗ ಕಂಬಿ ಹಿಂದೆ ಹೋಗಿದ್ದಾಳೆ. ಮನೆಯಲ್ಲಿ ಗಂಡ ಮತ್ತು ಮಕ್ಕಳು ಅನಾಥರಾಗಿದ್ದಾರೆ.

Published On - 6:01 pm, Fri, 17 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ