AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಮಗಳು

ತಾಯಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು ಮೈಕೋಲೇಔಟ್‌ ಪೊಲೀಸ್​ ಠಾಣೆಗೆ ಪುತ್ರಿ ತಂದಿರುವ ಹೃದಯವಿದ್ರಾಹಕ ಘಟನೆ ಬೆಂಗಳೂರಲ್ಲಿ ನಡೆದಿದೆ.

Bengaluru News: ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಮಗಳು
ತಾಯಿಯನ್ನು ಕೊಂದ ಮಗಳು
ವಿವೇಕ ಬಿರಾದಾರ
|

Updated on:Jun 13, 2023 | 6:45 AM

Share

ಬೆಂಗಳೂರು: ತಾಯಿಯನ್ನು (Mother) ಕೊಂದು (Murder) ಶವವನ್ನು (Body) ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು ಮೈಕೋಲೇಔಟ್‌ ಪೊಲೀಸ್​ ಠಾಣೆಗೆ ಪುತ್ರಿ ತಂದಿರುವ ಹೃದಯವಿದ್ರಾಹಕ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೀವಾ ಪಾಲ್ (70) ಮೃತ ದುರ್ದೈವಿ. ಸೆನಾಲಿ ಸೇನ್‌(39) ಕೊಲೆ ಆರೋಪಿ. ನಗರದ ಬಿಳೇಕಹಳ್ಳಿಯ ಎನ್‌ಎಸ್‌ಆರ್ ಗ್ರೀನ್‌ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಫ್ಲ್ಯಾಟ್‌ನಲ್ಲಿ ಪುತ್ರಿ ಸೆನಾಲಿ ಸೇನ್‌, ತಾಯಿ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ವಾಸವಿದ್ದರು. ನಿತ್ಯ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಜಗಳವಾಗುತ್ತಿತ್ತು. ಇದನ್ನು ಕಂಡು ಸೆನಾಲಿ ಸೇನ್‌ ಬೇಸತ್ತು ಹೋಗಿದ್ದರು.

ಇನ್ನು ನಿತ್ಯ ಜಗಳದಿಂದ ಬೇಸತ್ತ ಬೀವಾ ಪಾಲ್ ಅವರು ನಿದ್ದೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದರು. ಆದರೆ ಸೆನಾಲಿನೇ  ತಾಯಿಗೆ 20 ನಿದ್ದೆ ಮಾತ್ರೆ ನುಂಗಿಸಿದ್ದಾರೆ. ಇದರಿಂದ ಬೀವಾ ಪಾಲ್ ಹೊಟ್ಟೆ ನೋವು ಎಂದು ಒದ್ದಾಡುತ್ತಿದ್ದಾಗ, ಸೆನಾಲಿ ತಾಯಿಯ ಕುತ್ತಿಗೆ ವೇಲ್​​ನಿಂದ ಬಿಗಿದು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಕ್ರಿಶ್ಚಿಯನ್ ಎಂದು ಹಿಂದೂ ಯುವತಿಯನ್ನು ಬಲೆಗೆ ಬಿಳಿಸಿಕೊಂಡಿದ್ದ ಮುಸ್ಲಿಂ ಯುವಕ

ನಂತರ ತಾಯಿ ಬೀವಾ ಪಾಲ್ ಅವರ ಶವವನ್ನು ಟ್ರ್ಯಾಲಿ ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು, ಜೊತೆಗೆ ತಂದೆಯ ಪೊಟೋವನ್ನು ಇಟ್ಟುಗೊಂಡು ಸೆನಾಲಿ ಮೈಕೋಲೇಔಟ್‌ ಠಾಣೆಗೆ ಆಗಮಿಸಿದ್ದಾಳೆ. ಇನ್ನು ಸೆನಾಲಿ ಕೃತ್ಯ ಕಂಡು ಮೈಕೋಲೇಔಟ್ ಪೊಲೀಸರು ಬೆಚ್ಚಬಿದ್ದಿದ್ದಾರೆ. ಪೊಲೀಸರು ಸೆನಾಲಿ ಸೇನ್‌ ಅವರನ್ನು ಬಂಧಿಸಿ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮೈಸೂರಿನ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಹುಣಸೂರು ತಾಲ್ಲೂಕಿನ ಕರಿ ಮಾರಮ್ಮ ದೇವಾಲಯದ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.  ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್​ಜಿ ಗೀತಾ ಎಂದು ಹಚ್ಚೆ ಗುರುತು ಇದೆ.  ನೀಲಿ ಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಬಿಳಿಗೆರೆಯುಳ್ಳ ಶರ್ಟ್ ಧರಿಸಿರುವ ವ್ಯಕ್ತಿಯ ಮೃತ ದೇಹ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 am, Tue, 13 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ