AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಮಗಳು

ತಾಯಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು ಮೈಕೋಲೇಔಟ್‌ ಪೊಲೀಸ್​ ಠಾಣೆಗೆ ಪುತ್ರಿ ತಂದಿರುವ ಹೃದಯವಿದ್ರಾಹಕ ಘಟನೆ ಬೆಂಗಳೂರಲ್ಲಿ ನಡೆದಿದೆ.

Bengaluru News: ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಮಗಳು
ತಾಯಿಯನ್ನು ಕೊಂದ ಮಗಳು
ವಿವೇಕ ಬಿರಾದಾರ
|

Updated on:Jun 13, 2023 | 6:45 AM

Share

ಬೆಂಗಳೂರು: ತಾಯಿಯನ್ನು (Mother) ಕೊಂದು (Murder) ಶವವನ್ನು (Body) ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು ಮೈಕೋಲೇಔಟ್‌ ಪೊಲೀಸ್​ ಠಾಣೆಗೆ ಪುತ್ರಿ ತಂದಿರುವ ಹೃದಯವಿದ್ರಾಹಕ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೀವಾ ಪಾಲ್ (70) ಮೃತ ದುರ್ದೈವಿ. ಸೆನಾಲಿ ಸೇನ್‌(39) ಕೊಲೆ ಆರೋಪಿ. ನಗರದ ಬಿಳೇಕಹಳ್ಳಿಯ ಎನ್‌ಎಸ್‌ಆರ್ ಗ್ರೀನ್‌ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಫ್ಲ್ಯಾಟ್‌ನಲ್ಲಿ ಪುತ್ರಿ ಸೆನಾಲಿ ಸೇನ್‌, ತಾಯಿ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ವಾಸವಿದ್ದರು. ನಿತ್ಯ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಜಗಳವಾಗುತ್ತಿತ್ತು. ಇದನ್ನು ಕಂಡು ಸೆನಾಲಿ ಸೇನ್‌ ಬೇಸತ್ತು ಹೋಗಿದ್ದರು.

ಇನ್ನು ನಿತ್ಯ ಜಗಳದಿಂದ ಬೇಸತ್ತ ಬೀವಾ ಪಾಲ್ ಅವರು ನಿದ್ದೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದರು. ಆದರೆ ಸೆನಾಲಿನೇ  ತಾಯಿಗೆ 20 ನಿದ್ದೆ ಮಾತ್ರೆ ನುಂಗಿಸಿದ್ದಾರೆ. ಇದರಿಂದ ಬೀವಾ ಪಾಲ್ ಹೊಟ್ಟೆ ನೋವು ಎಂದು ಒದ್ದಾಡುತ್ತಿದ್ದಾಗ, ಸೆನಾಲಿ ತಾಯಿಯ ಕುತ್ತಿಗೆ ವೇಲ್​​ನಿಂದ ಬಿಗಿದು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಕ್ರಿಶ್ಚಿಯನ್ ಎಂದು ಹಿಂದೂ ಯುವತಿಯನ್ನು ಬಲೆಗೆ ಬಿಳಿಸಿಕೊಂಡಿದ್ದ ಮುಸ್ಲಿಂ ಯುವಕ

ನಂತರ ತಾಯಿ ಬೀವಾ ಪಾಲ್ ಅವರ ಶವವನ್ನು ಟ್ರ್ಯಾಲಿ ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು, ಜೊತೆಗೆ ತಂದೆಯ ಪೊಟೋವನ್ನು ಇಟ್ಟುಗೊಂಡು ಸೆನಾಲಿ ಮೈಕೋಲೇಔಟ್‌ ಠಾಣೆಗೆ ಆಗಮಿಸಿದ್ದಾಳೆ. ಇನ್ನು ಸೆನಾಲಿ ಕೃತ್ಯ ಕಂಡು ಮೈಕೋಲೇಔಟ್ ಪೊಲೀಸರು ಬೆಚ್ಚಬಿದ್ದಿದ್ದಾರೆ. ಪೊಲೀಸರು ಸೆನಾಲಿ ಸೇನ್‌ ಅವರನ್ನು ಬಂಧಿಸಿ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮೈಸೂರಿನ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಹುಣಸೂರು ತಾಲ್ಲೂಕಿನ ಕರಿ ಮಾರಮ್ಮ ದೇವಾಲಯದ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.  ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್​ಜಿ ಗೀತಾ ಎಂದು ಹಚ್ಚೆ ಗುರುತು ಇದೆ.  ನೀಲಿ ಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಬಿಳಿಗೆರೆಯುಳ್ಳ ಶರ್ಟ್ ಧರಿಸಿರುವ ವ್ಯಕ್ತಿಯ ಮೃತ ದೇಹ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 am, Tue, 13 June 23

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು