AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು, ನಗರದಲ್ಲಿ ಆಯುಧ ಮಾರಾಟ ವಿಚಾರವಾಗಿ ದಾವಣಗೆರೆ ಮೂಲದ ಫಯಾಜ್​ವುಲ್ಲಾ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ
ಸಿಸಿಬಿ ಕಚೇರಿ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on: Jul 20, 2023 | 3:00 PM

ದಾವಣಗೆರೆ, ಜುಲೈ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು (CCB Police) ದಾವಣಗೆರೆಯಲ್ಲಿ (Davanagere) ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿದ್ದ ಶಂಕಿತರ ಉಗ್ರರಿಗೆ ದಾವಣಗೆರೆಯ ಲಿಂಕ್ ಇತ್ತಾ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸಿಸಿಬಿ ವಶದಲ್ಲಿರುವ ದಾವಣಗೆರೆ ಅಜಾದ್ ನಗರದ ನಿವಾಸಿ ಫಯಾಜ್ ವುಲ್ಲಾನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಫಯಾಜ್ ವುಲ್ಲಾ (30) ಎಂಬ ವ್ಯಕ್ತಿಯನ್ನ ಇಂದು ಬೆಳಿಗ್ಗೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾವಣಗೆರೆ ಆಗಮಿಸಿ ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಅಕ್ರಮವಾಗಿ ಆಯುಧ ಮಾರಾಟ ವಿಚಾರವಾಗಿ ಇತನ ಮೇಲೆ ಐದು ಪ್ರಕರಣ ದಾಖಲಾಗಿದ್ದವು. ಜಾಮೀನು ಮೇಲೆ ಹೊರಗಿದ್ದ ಈತನನ್ನು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಫಯಾಜ್ ವುಲ್ಲಾನನ್ನು ವಶಕ್ಕೆ ಪಡೆದಿದ್ದು, ಶಂಕಿತರಿಗೆ ಮತ್ತು ಫಯಾಜ್​ಗೂ ಲಿಂಕ್ ಇತ್ತಾ ಎಂಬ ಸಂಶಯ ಮೂಡಿಸಿದೆ.

ಇದನ್ನೂ ಓದಿ: ಮತ್ತೊಬ್ಬ ಶಂಕಿತ ಉಗ್ರನ ಬಗ್ಗೆ ಸಿಸಿಬಿಗೆ ಸುಳಿವು, ವಿಧ್ವಂಸಕ ಕೃತ್ಯಕ್ಕೆ ಬೇಕು ಬೇಡಗಳನ್ನು ಪೂರೈಸಿದ್ದ ಯಾರವನು?

ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಜುಲೈ 19 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರ ಬಳಿ ಇದ್ದ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ಮೂಲಕ ರಾಜಧಾನಿಯಲ್ಲಿ ನಡೆಯುತ್ತಿದ್ದ ಉಗ್ರರ ಪ್ಲಾನ್ ಅನ್ನು ವಿಫಲಗೊಳಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು. ಬೆಂಗಳೂರಿನಲ್ಲಿ ಕುಕೃತ್ಯ ಎಸಗಲು ವಿದೇಶದಿಂದ ಹಣ ಬರುತ್ತಿತ್ತು ಎಂದು ತಿಳಿದುಬಂದಿದೆ.

ವ್ಯವಹಾರ ಸಂಬಧ 2017 ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ 21 ಮಂದಿ ಹದಿನೆಂಟು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ವೇಳೆ ಉಗ್ರರ ಸಂಪರ್ಕಕ್ಕೆ ಬಂದ್ದಿದ್ದ ಅವರು ಬೆಂಗಳೂರಿನಲ್ಲಿ ಬ್ಲಾಸ್ಟ್ ಮಾಡುವ ಪ್ಲಾನ್ ಮಾಡಿದ್ದರು. 2020 ರಲ್ಲಿ ಜುನೈದ್ ಎಂಬಾತ ರಕ್ತ ಚಂದನ ಪ್ರಕರಣದಲ್ಲಿ ಐದು ತಿಂಗಳ ಕಾಲ ಜೈಲಿನಲ್ಲಿದ್ದು, ನಂತರ ಬಿಡುಗಡೆಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತನಿಂದಲೇ ಈ ಐವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎಂಬ ಸ್ಫೋಟಕ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತರು ಬಿಚ್ಚಿಟ್ಟದ್ದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್