AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಖೋಟಾ ನೋಟು ತಯಾರಿಕೆ: ಓರ್ವ ಇಂಜಿನಿಯರ್ ಸೇರಿದಂತೆ 6 ಆರೋಪಿಗಳ ಬಂಧನ

ಹರಿಹರ ಗ್ರಾಮಾಂತರ ಪೊಲೀಸರು, DCRB ಪೊಲೀಸರ ಕಾರ್ಯಾಚಣೆ ಮಾಡಿ ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. 7.70 ಲಕ್ಷ ರೂ. ಮೌಲ್ಯದ 500, 200 ಮುಖಬೆಲೆಯ ಖೋಟಾ ನೋಟು ಸೇರಿದಂತೆ ಲ್ಯಾಪ್​ಟಾಪ್ ಸೇರಿ‌, ಮೂರು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ದಾವಣಗೆರೆ: ಖೋಟಾ ನೋಟು ತಯಾರಿಕೆ: ಓರ್ವ ಇಂಜಿನಿಯರ್ ಸೇರಿದಂತೆ 6 ಆರೋಪಿಗಳ ಬಂಧನ
ಹರಿಹರ ಗ್ರಾಮಾಂತರ ಪೊಲೀಸರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jan 24, 2024 | 10:50 PM

Share

ದಾವಣಗೆರೆ, ಜನವರಿ 24: ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಓರ್ವ ಇಂಜಿನಿಯರ್ ಸೇರಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸರು, DCRB ಪೊಲೀಸರ ಕಾರ್ಯಾಚಣೆ ಮಾಡಿ, ದಾವಣಗೆರೆ ಮೂಲದ ಕುಬೇರಪ್ಪ ತಳವಾರ್, ಹರೀಶ್ ಗೌಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಇಂಜಿನಿಯರ್ ಜೆ.ರುದ್ರೇಶ್, ಮೈಸೂರು ಮೂಲದ ಮನೋಜ್ ಗೌಡ, ಮಂಡ್ಯ ಮೂಲದ ಸಂದೀಪ್ ಮತ್ತು ಚಿತ್ರದುರ್ಗ ಮೂಲದ ಕೃಷ್ಣ ನಾಯ್ಕನನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರಿಂದ 7.70 ಲಕ್ಷ ರೂ. ಮೌಲ್ಯದ 500, 200 ಮುಖಬೆಲೆಯ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ.

ಖೋಟಾ ನೋಟು ತಯಾರು‌ ಮಾಡಲು ಬಳಸುತ್ತಿದ್ದ ‌ಲ್ಯಾಪ್​ಟಾಪ್ ಸೇರಿ‌, ಮೂರು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಖೋಟಾ ನೋಟು ತಯಾರಿ ಬಗ್ಗೆ ಇಂಜಿನಿಯರ್ ರುದ್ರೇಶ್ ಒಪ್ಪಿಕೊಂಡಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.

29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

ಆನೇಕಲ್​: ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಎಳೆನಹಳ್ಳಿ ಸಮೀಪದ ಪ್ರೆಸ್ಟೀಜ್ ಅಪಾರ್ಟ್ಮೆಂಟ್ನ 29ನೇ ಮಹಡಿಯಿಂದ ಸುಮಾರು 12 ವರ್ಷದ ಬಾಲಕಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ನಿನ್ನೆ ಮುಂಜಾನೆ 4:30ರ ಸುಮಾರಿಗೆ ನಡೆದಿದೆ. 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಕುವಿರಾ ಮೃತ ಬಾಲಕಿ.

ಇದನ್ನೂ ಓದಿ: ಶಿಕ್ಷಕಿ ಕೊಲೆಗೆ ಕಾರಣವೇನು? ಹತ್ಯೆಗೆ ಮುನ್ನ ಆರೋಪಿ ಏನೆಲ್ಲಾ ಪ್ಲ್ಯಾನ್ ಮಾಡಿದ್ದ? ಮಾಹಿತಿ ಬಿಚ್ಚಿಟ್ಟ ಎಸ್ಪಿ

ನಿನ್ನೆ ಮುಂಜಾನೆ 5 ಗಂಟೆ ಸುಮಾರಿಗೆ ತಾನು ವಾಸವಿದ್ದ 29ನೇ ಮಹಡಿಯ ಬಾಲ್ಕನ್ನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಿರುಚಿದ ಶಬ್ದ ಕೇಳಿ ಸೆಕ್ಯೂರಿಟಿ ಗಾರ್ಡ್ ಗಮನಿಸಿ ಅಪಾರ್ಟ್ಮೆಂಟ್ ಅಸೋಸಿಯೇಷನ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ದುರ್ಮರಣ

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆತಕ್ಕೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಹದಿನೈದಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್, ಲಾರಿಗಳು ಅಪ್ಪಚ್ಚಿಯಾಗಿವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ವಿಲವಿಲ ಅಂತಿದ್ದಾರೆ. ಇನ್ನೂ ಯಲ್ಲಮ್ಮನ ದರ್ಶನಕ್ಕೆ ಹೋಗ್ತಾಯಿದ್ದ ಸಹೋದರಿಯರಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೊಬ್ರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ