AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ತಾನ ಮೂಲದ ನಟೋರಿಯಸ್ ಸೈಬರ್ ವಂಚಕನನ್ನು ಬಂಧಿಸಿದ ದಾವಣಗೆರೆ ಪೊಲೀಸ್​

ದಾವಣಗೆರೆ ಪೊಲೀಸರು ರಾಜಸ್ತಾನ ಮೂಲದ ನಟೋರಿಯಸ್ ಸೈಬರ್ ವಂಚಕ ಅಮನ್ ತಿವಾರಿಯನ್ನು ಬಂಧಿಸಿದ್ದಾರೆ.

ರಾಜಸ್ತಾನ ಮೂಲದ ನಟೋರಿಯಸ್ ಸೈಬರ್ ವಂಚಕನನ್ನು ಬಂಧಿಸಿದ ದಾವಣಗೆರೆ ಪೊಲೀಸ್​
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Aug 07, 2022 | 3:30 PM

Share

ದಾವಣಗೇರೆ: ದಾವಣಗೆರೆ ಪೊಲೀಸರು ರಾಜಸ್ತಾನ ಮೂಲದ ನಟೋರಿಯಸ್ ಸೈಬರ್ ವಂಚಕ ಅಮನ್ ತಿವಾರಿಯನ್ನು ಬಂಧಿಸಿದ್ದಾರೆ.  ಆರೋಪಿ ರಕ್ಷಿತ್ ಎಂಬುವವರ ಫ್ಲಿಪ್ ಕಾರ್ಟ್ ಖಾತೆಯಿಂದ 45 ಸಾವಿರ ಎಗರಿಸಿದ್ದನು. ಈ ಕುರಿತು ದಾವಣಗೆರೆಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಅಮಿನ್ ತಿವಾರಿಯಿಂದ 1ಲಕ್ಷದ 50 ಸಾವಿರ ನಗದು 4 ಮೊಬೈಲ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಓನ್ ಪಾಸ್ವರ್ಡ್ ಬಳಸುವವರನ್ನೇ ಟಾರ್ಗೆಟ್ ಮಾಡುತ್ತಿದ್ದನು. ಆರೋಪಿ ಅಮನ್ ತಿವಾರಿ ಜಿ ಮೇಲ್, ಫೇಸ್ ಬುಕ್, ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಎಲ್ಲಾ ಖಾತೆಗೂ ಒಂದೇ ಪಾಸ್ವರ್ಡ್ ಬಳಸುವವರನ್ನು ತನ್ನ  ಖೆಡ್ಡಾಗೆ ಕೆಡವಿಕೊಳ್ಳುತ್ತಿದ್ದನು. ಇದರಿಂದ ದಾವಣಗೆರೆ ಜನತೆ ಆನ್ ಲೈನ್ ಚೀಟಿಂಗ್ ನಿಂದ ರೋಸಿ ಹೋಗಿದ್ದರು.

ಅಕ್ರಮವಾಗಿ ಸಾಗುಸುತ್ತಿದ್ದ 17 ಟನ್ ಪಡಿತರ ಅಕ್ಕಿ ಜಪ್ತಿ

ಬೀದರ್: ಅಕ್ರಮವಾಗಿ ಸಾಗುಸುತ್ತಿದ್ದ 17 ಟನ್ ಪಡಿತರ ಅಕ್ಕಿಯನ್ನು ಬೀದರ್ ಜಿಲ್ಲೆಯ ಹುಮನಾಬಾದ್ ಎನ್​ಹೆಚ್​ 65 ನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪಡಿತರ ಅಕ್ಕಿಯನ್ನು ಬೀದರ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪ ಕೇಳಿಬಂದಿದೆ. ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಓವರ್ ಟೇಕ್ ಮಾಡಲು ಹೋಗಿ ಹಳ್ಳಕ್ಕೆ ಬಿದ್ದ ಕಾರು

ತಮಿಳುನಾಡು: ಬಸ್ ಓವರ್ ಟೇಕ್ ಮಾಡಲು ಹೋಗಿ ಕಾರು ಹಳ್ಳಕ್ಕೆ ಬಿದ್ದಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ‌ಹೊಸೂರಿನ ಸುಂಡಗಿರಿ ಬಳಿ ನಡೆದಿದೆ. ಕಾರಿನಲ್ಲಿದ್ದ 7 ಜನರಿಗೆ ಗಾಯವಾಗಿದ್ದು,  ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬ ಬೆಂಗಳೂರಿನಿಂದ‌ ಕಾರಿನಲ್ಲಿ ಕೃಷ್ಣಗಿರಿಗೆ ಹೊರಟಿತ್ತು. ಈ ವೇಳೆ ಬಸ್ ಓವರ್ ಟೇಕ್ ಮಾಡಲು ಹೋಗಿ ಕರು ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದವರ ಚೀರಾಡುವ ಶಬ್ದ ಕೇಳಿ ಸ್ಥಳೀಯರು ರಕ್ಷಿಸಿದ್ದಾರೆ.

ವಿದ್ಯುತ್ ತಂತಿ ತುಳಿದು ಯುವಕ ಸಾವು

ತುಮಕೂರು: ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಪಾವಗಡ ತಾಲ್ಲೂಕಿನ ಬೊಮ್ಮತಹಳ್ಳಿಯಲ್ಲಿ ನಡೆದಿದೆ. ರಮೇಶ್ (20) ಮೃತ ದುರ್ದೈವಿ. ರಮೇಶ್ ಬೊಮ್ಮತಹಳ್ಳಿಯಲ್ಲಿ ಹಲಸಿನಹಣ್ಣು ಕೀಳಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಪಾವಗಡ ಶಾಸಕ ವೆಂಕಟರಮಣಪ್ಪ ಭೇಟಿ ನೀಡಿದ್ದು, ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:18 pm, Sun, 7 August 22

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು