AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಹಾಡಹಗಲೇ ಖದೀಮರ ರಾಬರಿ, ಡ್ಯಾಗರ್ ಹಿಡಿದು ಹಣ, ಮೊಬೈಲ್ ಲೂಟಿ ಮಾಡ್ತಾರೆ..

ಬೆಂಗಳೂರು: ಇತ್ತೀಚೆಗಷ್ಟೇ ಚಾಕು ಹಿಡಿದ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಇಬ್ಬರ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸದ್ಯ ವೈರಲ್ ಆಗಿರೋ ವಿಡಿಯೋ ನೋಡ್ತಿದ್ರೆ ನಿಜಕ್ಕೂ ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ. ಕೈಯಲ್ಲಿ ಡ್ಯಾಗರ್ ಹಿಡಿದು ಡರೋಡೆಗೆ ಸ್ಕೆಚ್! ಯೆಸ್.. ಸಿಟಿ ಮಾರ್ಕೆಟ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಲೈವ್ ರಾಬರಿಯ ನಡೆದಿದೆ.. ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ […]

ಬೆಂಗಳೂರಲ್ಲಿ ಹಾಡಹಗಲೇ ಖದೀಮರ ರಾಬರಿ, ಡ್ಯಾಗರ್ ಹಿಡಿದು ಹಣ, ಮೊಬೈಲ್ ಲೂಟಿ ಮಾಡ್ತಾರೆ..
ಆಯೇಷಾ ಬಾನು
ಆಯೇಷಾ ಬಾನು|

Updated on: Oct 21, 2020 | 7:12 AM

Share

ಬೆಂಗಳೂರು: ಇತ್ತೀಚೆಗಷ್ಟೇ ಚಾಕು ಹಿಡಿದ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಇಬ್ಬರ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸದ್ಯ ವೈರಲ್ ಆಗಿರೋ ವಿಡಿಯೋ ನೋಡ್ತಿದ್ರೆ ನಿಜಕ್ಕೂ ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ.

ಕೈಯಲ್ಲಿ ಡ್ಯಾಗರ್ ಹಿಡಿದು ಡರೋಡೆಗೆ ಸ್ಕೆಚ್! ಯೆಸ್.. ಸಿಟಿ ಮಾರ್ಕೆಟ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಲೈವ್ ರಾಬರಿಯ ನಡೆದಿದೆ.. ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಇಬ್ಬರು ಖದೀಮರು ದರೋಡೆ ಮಾಡಿರೋ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸ್ತಿದೆ. ದಾರಿಯಲ್ಲಿ ಬರೋರನ್ನ ಬೆದರಿಸಿ ಹಣ, ಮೊಬೈಲ್‌ ಕಸಿದುಕೊಳ್ಳುತ್ತಿರೋ ದೃಶ್ಯ ವೈರಲ್ ಆಗಿದೆ. ಮುಖ ಮುಚ್ಕೊಂಡ್, ಜಾಕೆಟ್ ಹಾಕಿಕೊಂಡಿರೋ ಈ ಇಬ್ಬರು ಖದೀಮರು ಹಾಡಹಗಲೇ ರಾಬರಿ ಮಾಡ್ತಿದ್ದಾರೆ.

ಕ್ಯಾಂಟರ್‌ ಪಕ್ಕದಲ್ಲಿ ಹೋಗ್ತಿದ್ದ ಯುಕನನ್ನ ಹಿಂದಿನಿಂದ ತಡೆದು ಡ್ಯಾಗರ್‌ ತೋರಿಸ್ತಾನೆ.. ಅಷ್ಟರಲ್ಲೇ ಎಚ್ಚೆತ್ತ ಯುವಕ ಕಿರುಚಿಕೊಂಡು ಎಸ್ಕೇಪ್‌ ಆಗಿಬಿಡ್ತಾನೆ. ಅಷ್ಟೇ ಅಲ್ಲ, ಮತ್ತೊಬ್ಬನ ಮೇಲೆ ಅಟ್ಯಾಕ್‌ ಮಾಡಿದ ಈ ಖದೀಮರು ಆತನ ಬಳಿಯಿದ್ದ ಪರ್ಸ್‌ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ದೃಶ್ಯವನ್ನ ಕ್ಯಾಂಟರ್‌ ವಾಹನದಲ್ಲಿ ಕುಳಿತ್ತಿದ್ದ ವ್ಯಕ್ತಿ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ.

ಅಷ್ಟಕ್ಕೂ ಇದು ಇತ್ತೀಚೆಗೆ ನಡೆದಿರೋ ಕೃತ್ಯವಲ್ಲ. ಲಾಕ್‌ಡೌನ್ ಸಂದರ್ಭದಲ್ಲಿ ನಡೆದಿರೋ ಘಟನೆ ಎನ್ನಲಾಗ್ತಿದೆ. ಆದ್ರೆ ಯಾವಾಗ ಈ ವಿಡಿಯೋ ವೈರಲ್ ಆಯ್ತೋ ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್‌ ಎಂ ಪಾಟೀಲ್‌ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜತೆಗೆ ವೈರಲ್ ವಿಡಿಯೋದಲ್ಲಿರೋ ಖದೀಮರಿಗಾಗಿ ಬಲೆಬಿಸಿದ್ದು, ತನಿಖೆಗೆ ತಂಡವನ್ನ ರಚನೆ ಮಾಡಲಾಗಿದೆ. ಅಷ್ಟೇ ಅಲ್ಲ ಇಂಥಾ ಘಟನೆ ನಡೆದ್ರೆ ಕೂಡಲೇ ಹತ್ತಿರದ ಠಾಣೆಗೆ ದೂರು ನೀಡುವಂತೆ ಮನವಿ ಮಾಡಿದ್ದಾರೆ.

ಒಟ್ನಲ್ಲಿ ಹಳೆಯದ್ದೋ ಹೊಸತೋ ವೈರಲ್ ಆಗಿರೋ ವಿಡಿಯೋ ಅಕ್ಷರಶಃ ಭಯ ಹುಟ್ಟಿಸುವಂತಿದ್ದು, ಆದಷ್ಟು ಬೇಗ ಸೂಕ್ತ ತನಿಖೆ ನಡೆದು ಆರೋಪಿಗಳಿಗೆ ತಕ್ಕ ಶಾಸ್ತಿಯಾಗಬೇಕಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?