AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು’ ಅಂದಿದ್ದೇ ತಪ್ಪಾಯ್ತಾ!?

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು […]

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು' ಅಂದಿದ್ದೇ ತಪ್ಪಾಯ್ತಾ!?
ಸಾಧು ಶ್ರೀನಾಥ್​
|

Updated on:Nov 21, 2019 | 2:01 PM

Share

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು ಬಸಪ್ಪನಿಗೆ ಹಿಗ್ಗಾಮಗ್ಗಾ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಸಪ್ಪ ಆಸ್ಪತ್ರೆ ಸೇರಿದ್ದಾರೆ.

ಹಿನ್ನೆಲೆ: ಶಿವಾನಂದ ಈ ಹಿಂದೆ ದೇಗುಲದಲ್ಲಿ ಸ್ಮೋಕ್​ ಮಾಡ್ತಿದ್ನಂತೆ. ಈ ವೇಳೆ ಅರ್ಚಕ ಬಸಪ್ಪ ಇಲ್ಲಿ ಸ್ಮೋಕ್ ಮಾಡ್ಬೇಡಿ ಎಂದು ಹೇಳಿ ಕಳುಹಿಸಿದ್ದರಂತೆ. ಇದ್ರಿಂದ ಕುಪಿತಗೊಂಡಿದ್ದ ಶಿವಾನಂದ, ಸರಿದು ನಿಲ್ಲು ಎಂದಿದ್ದನ್ನೇ ನೆಪವಾಗಿಟ್ಕೊಂಡು ಹಲ್ಲೆ ನಡೆಸಿದ್ದಾನೆ ಎನ್ನಲಾಗ್ತಿದೆ. ಇನ್ನು, ಹಲ್ಲೆಯಿಂದ ಬಸಪ್ಪರ ಕಿಡ್ನಿ ಹಾಗೂ ಎದೆಗೆ ತೀವ್ರವಾಗಿ ಪೆಟ್ಟಾಗಿದೆ. ಸದ್ಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಪೊಲೀಸರು ಶಿವಾನಂದ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ ಅಂತ ಬಸಪ್ಪನ ಸಂಬಂಧಿಕರು ಆರೋಪಿಸಿದ್ದಾರೆ.

Published On - 1:44 pm, Thu, 21 November 19

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ