AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು’ ಅಂದಿದ್ದೇ ತಪ್ಪಾಯ್ತಾ!?

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು […]

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು' ಅಂದಿದ್ದೇ ತಪ್ಪಾಯ್ತಾ!?
ಸಾಧು ಶ್ರೀನಾಥ್​
|

Updated on:Nov 21, 2019 | 2:01 PM

Share

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು ಬಸಪ್ಪನಿಗೆ ಹಿಗ್ಗಾಮಗ್ಗಾ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಸಪ್ಪ ಆಸ್ಪತ್ರೆ ಸೇರಿದ್ದಾರೆ.

ಹಿನ್ನೆಲೆ: ಶಿವಾನಂದ ಈ ಹಿಂದೆ ದೇಗುಲದಲ್ಲಿ ಸ್ಮೋಕ್​ ಮಾಡ್ತಿದ್ನಂತೆ. ಈ ವೇಳೆ ಅರ್ಚಕ ಬಸಪ್ಪ ಇಲ್ಲಿ ಸ್ಮೋಕ್ ಮಾಡ್ಬೇಡಿ ಎಂದು ಹೇಳಿ ಕಳುಹಿಸಿದ್ದರಂತೆ. ಇದ್ರಿಂದ ಕುಪಿತಗೊಂಡಿದ್ದ ಶಿವಾನಂದ, ಸರಿದು ನಿಲ್ಲು ಎಂದಿದ್ದನ್ನೇ ನೆಪವಾಗಿಟ್ಕೊಂಡು ಹಲ್ಲೆ ನಡೆಸಿದ್ದಾನೆ ಎನ್ನಲಾಗ್ತಿದೆ. ಇನ್ನು, ಹಲ್ಲೆಯಿಂದ ಬಸಪ್ಪರ ಕಿಡ್ನಿ ಹಾಗೂ ಎದೆಗೆ ತೀವ್ರವಾಗಿ ಪೆಟ್ಟಾಗಿದೆ. ಸದ್ಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಪೊಲೀಸರು ಶಿವಾನಂದ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ ಅಂತ ಬಸಪ್ಪನ ಸಂಬಂಧಿಕರು ಆರೋಪಿಸಿದ್ದಾರೆ.

Published On - 1:44 pm, Thu, 21 November 19

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!