AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು’ ಅಂದಿದ್ದೇ ತಪ್ಪಾಯ್ತಾ!?

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು […]

‘ಪಕ್ಕಕ್ಕೆ ಸರಿಯಪ್ಪ ಕಸ ಗುಡಿಸ್ಬೇಕು' ಅಂದಿದ್ದೇ ತಪ್ಪಾಯ್ತಾ!?
ಸಾಧು ಶ್ರೀನಾಥ್​
|

Updated on:Nov 21, 2019 | 2:01 PM

Share

ಹುಬ್ಬಳ್ಳಿ: ರಸ್ತೆ ಕಸ ಗುಡಿಸುವಾಗ ಪಕ್ಕಕ್ಕೆ ಹೋಗಿ ಎಂದು ಹೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಣಕಲ್​ನ ಉಳವಿ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಅರ್ಚಕ ಬಸಪ್ಪ ಗುಡಿಮನಿ. 2ದಿನದ ಹಿಂದೆ ದೇಗುಲದ ಕಸ ಗುಡಿಸ್ತಿದ್ದಾಗ, ಶಿವಾನಂದ ಗಂಬ್ಯಾಪೂರ್ ಎಂಬ ವ್ಯಕ್ತಿಗೆ ಸ್ವಲ್ಪ ಆ ಕಡೆ ಕೂರಿ ಎಂದಿದ್ದಾರೆ. ಇಷ್ಟಕ್ಕೆ ಶಿವಾನಂದ ಜಗಳ ಮಾಡಿದ್ದಾನೆ. ನಂತರ ಸ್ಥಳದಲ್ಲಿದ್ದ ಭಕ್ತರು ಜಗಳ ಬಿಡಿಸಿ ಕಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವಾನಂದ ರಾತ್ರಿ ಯಾರೂ ಇಲ್ಲದ ಹೊತ್ತಲ್ಲಿ ಬಂದು ಬಸಪ್ಪನಿಗೆ ಹಿಗ್ಗಾಮಗ್ಗಾ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಬಸಪ್ಪ ಆಸ್ಪತ್ರೆ ಸೇರಿದ್ದಾರೆ.

ಹಿನ್ನೆಲೆ: ಶಿವಾನಂದ ಈ ಹಿಂದೆ ದೇಗುಲದಲ್ಲಿ ಸ್ಮೋಕ್​ ಮಾಡ್ತಿದ್ನಂತೆ. ಈ ವೇಳೆ ಅರ್ಚಕ ಬಸಪ್ಪ ಇಲ್ಲಿ ಸ್ಮೋಕ್ ಮಾಡ್ಬೇಡಿ ಎಂದು ಹೇಳಿ ಕಳುಹಿಸಿದ್ದರಂತೆ. ಇದ್ರಿಂದ ಕುಪಿತಗೊಂಡಿದ್ದ ಶಿವಾನಂದ, ಸರಿದು ನಿಲ್ಲು ಎಂದಿದ್ದನ್ನೇ ನೆಪವಾಗಿಟ್ಕೊಂಡು ಹಲ್ಲೆ ನಡೆಸಿದ್ದಾನೆ ಎನ್ನಲಾಗ್ತಿದೆ. ಇನ್ನು, ಹಲ್ಲೆಯಿಂದ ಬಸಪ್ಪರ ಕಿಡ್ನಿ ಹಾಗೂ ಎದೆಗೆ ತೀವ್ರವಾಗಿ ಪೆಟ್ಟಾಗಿದೆ. ಸದ್ಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ ಪೊಲೀಸರು ಶಿವಾನಂದ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ ಅಂತ ಬಸಪ್ಪನ ಸಂಬಂಧಿಕರು ಆರೋಪಿಸಿದ್ದಾರೆ.

Published On - 1:44 pm, Thu, 21 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ