AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ವಿಜಯಪುರ ಸಿಐಎಸ್​ಎಫ್​ ಯೋಧ ಸಾವು

ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಯೋಧ, ಕುಟುಂಬದಲ್ಲಿ ದುಖಃ ಮಡುಗಟ್ಟಿದೆ. ನಾಳೆ ಮೃತ ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸೋ ಸಾಧ್ಯತೆಯಿದೆ. 

ಸೇನಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ವಿಜಯಪುರ ಸಿಐಎಸ್​ಎಫ್​ ಯೋಧ ಸಾವು
ದಯಾನಂದ ಪಾಟೀಲ್ (26) ಮೃತ ಯೋಧ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 12, 2022 | 10:56 PM

Share

ವಿಜಯಪುರ: ಜಮ್ಮು-ಕಾಶ್ಮೀರದ ಶ್ರೀನಗರದ ಸೇನಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ಜಿಲ್ಲೆಯ ಸಿಐಎಸ್​ಎಫ್ (CISF)​ ಯೋಧ ಸಾವನ್ನಪ್ಪಿರುವಂತಹ ಘಟನೆ ಜಮ್ಮು ಮತ್ತು ಕಾಶ್ಮೀರನ ಶ್ರೀನಗರದಲ್ಲಿ ನಡೆದಿದೆ. ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿಕೆ ಗ್ರಾಮದ ದಯಾನಂದ ಪಾಟೀಲ್ (26) ಮೃತ ಯೋಧ. ಸೇನಾ ನೆಲೆಯಲ್ಲಿ ಮಿಸ್ ಫೈಯರ್ ಆಗಿ ಯೋಧ ದಯಾನಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರಿಗೆ ಸೇನಾಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ. ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಯೋಧ, ಕುಟುಂಬದಲ್ಲಿ ದುಖಃ ಮಡುಗಟ್ಟಿದೆ. ನಾಳೆ ಮೃತ ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸೋ ಸಾಧ್ಯತೆಯಿದೆ.

ಬ್ಯುಸಿನೆಸ್ ಮಿಟಿಂಗ್ ಅಂತ ಹೋದವಳು ಶವವಾಗಿ ಪತ್ತೆ:

ಬೆಂಗಳೂರು: ಬ್ಯುಸಿನೆಸ್ ಮಿಟಿಂಗ್ ಅಂತ ಹೋದವಳು ಶವವಾಗಿ ಪತ್ತೆ ಆಗಿರುವಂತಹ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುನೀತ (54) ಕೊಲೆಯಾದ ಮಹಿಳೆ. ಸುನೀತ ಮಲ್ಲೇಶ್ವರಂ  ನಿವಾಸದಿಂದ ಮಾರ್ಚ್ 31 ರಂದು ಬ್ಯುಸಿನೆಸ್ ಮೀಟಿಂಗ್ ಅಂತ ತೆರಳಿದ್ರು. ಅಂದು ಸಂಜೆಯಾದ್ರೂ ಮನೆಗೆ ವಾಪಸ್ಸಾಗಿರಲಿಲ್ಲ. ಎಲ್ಲ ಕಡೆ ಹುಡುಕಾಡಿ ಕೊನೆಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ರು. ನಿನ್ನೆ ಸಂಜೆ ವರ್ತೂರು ಸಮೀಪ ಸುನೀತ ಶವವಾಗಿ ಪತ್ತೆಯಾಗಿದ್ದಾಳೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ವರ್ತೂರು ಪೊಲೀಸರಿಂದ ಹಂತಕನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಫಲವತ್ತಾದ ಭೂ ಸ್ವಾಧೀನ ಕೈಬಿಡುವಂತೆ ರೈತರು ಪಟ್ಟು; ಮನವಿ ನೀಡಲು ಬಂದ ರೈತರನ್ನು ತಡೆದ ಪೊಲೀಸರು:

ಬೆಳಗಾವಿ: ಕಣಬರ್ಗಿಯಲ್ಲಿ ನೂತನ ಬಡಾವಣೆಗಾಗಿ ಬುಡಾದಿಂದ‌ ಭೂಸ್ವಾಧೀನ ಮಾಡಲಾಗಿದ್ದು, ಬಿಜೆಪಿ ನಾಯಕರು ತಂಗಿರುವ ಹೋಟೆಲ್‌ಗೆ ರೈತರು ಮುತ್ತಿಗೆಗೆ ಯತ್ನಿಸಿದ್ದಾರೆ. ಫಲವತ್ತಾದ ಭೂ ಸ್ವಾಧೀನ ಕೈಬಿಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಬಿಎಸ್‌ವೈ, ಅರುಣ್ ಸಿಂಗ್​ಗೆ ಮನವಿ ನೀಡಲು ಅವಕಾಶ ನೀಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ರೈತರನ್ನು ಗೇಟ್ ಆವರಣದಲ್ಲಿ ತಡೆದ ಪೊಲೀಸರು ಮರಳಿ ಕಳುಹಿಸಲು ಹರಸಾಹಸ ಪಟ್ಟರು. ಪೊಲೀಸರ ಮಾತಿಗೆ ಬೆಲೆ ಕೊಡದೇ ಹೋಟೆಲ್ ಮುತ್ತಿಗೆಗೆ ರೈತರು ಯತ್ನಿಸಿದ್ದಾರೆ. ಮಾಳ ಮಾರುತಿ ಠಾಣೆ ಪೊಲೀಸರು ರೈತರನ್ನು ‌ವಶಕ್ಕೆ ಪಡೆದಿದ್ದಾರೆ.

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಮೂವರು ನೀರುಪಾಲು ತುಮಕೂರು: ಜಿಲ್ಲೆಯ ಒಂದೇ ಕುಟುಂಬದ ಮೂವರು ನೀರುಪಾಲಾಗಿದ್ದಾರೆ. ಆಂಧ್ರಪ್ರದೇಶದ ಪೆರೂರು ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿ ಮೂವರು ನೀರುಪಾಲಾಗಿದ್ದಾರೆ. ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯ ನಾಗರಾಜ್(45), ಸೋದರ ರಾಮಾಂಜಿ(28), ಪುತ್ರಿ ರಕ್ಷಾ(15) ಮೃತರು. ಗಾಳ ಹಾಕಿ ಮೀನು ಹಿಡಿಯುತ್ತಿದ್ದಾಗ ರಕ್ಷಾ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ರಕ್ಷಾ ರಕ್ಷಿಸಲು ಹೋಗಿ ನಾಗರಾಜ್ ಹಾಗೂ ರಾಮಾಂಜಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕಲಬುರಗಿ ನಗರದಲ್ಲಿ ಹೊತ್ತಿ ಉರಿದ ಸೈಕಲ್ ಶಾಪ್ ಕಲಬುರಗಿ ನಗರದಲ್ಲಿ ಬಸವರಾಜ್ ಬಿಲಗುಂದಿ ಎಂಬುವರ ಶಾಪ್ ಬೆಂಕಿಗಾಹುತಿ ಆಗಿದ್ದು ₹15 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿ ಸುಟ್ಟು ಹೋಗಿದೆ. ಶಾರ್ಟ್ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದ ಸಾಧ್ಯತೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​

Published On - 10:22 pm, Tue, 12 April 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ