AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್​​ಕೇಸ್​​ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ

ತೆಲಂಗಾಣದ ಹೈದರಾಬಾದ್​ನಲ್ಲಿ ಮಹಿಳೆಯ ಶವವನ್ನು ಸೂಟ್​ಕೇಸ್​​ನಲ್ಲಿ ತುಂಬಿಸಿ ಪೊದೆಗಳಲ್ಲಿ ಎಸೆಯಲಾಗಿದೆ. ತೆಲಂಗಾಣದ ಬಾಚುಪಲ್ಲಿಯಲ್ಲಿ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಮೃತಳನ್ನು ಬೇರೆಡೆ ಕೊಂದು, ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ಇರಿಸಲಾಗಿದೆ ಎಂದು ಶಂಕಿಸಲಾಗಿದೆ. ಮಹಿಳೆಯ ಗುರುತು ಅಥವಾ ಆಕೆಯ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಮಾಹಿತಿ ಇರುವವರು ಬಾಚುಪಲ್ಲಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಕೋರಿದ್ದಾರೆ.

ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್​​ಕೇಸ್​​ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ
Suitcase
ಸುಷ್ಮಾ ಚಕ್ರೆ
|

Updated on: Jun 05, 2025 | 4:25 PM

Share

ಹೈದರಾಬಾದ್, ಜೂನ್ 5: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬುಧವಾರ ಬಾಚುಪಲ್ಲಿಯಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿಸಿದ ಅಪರಿಚಿತ ಮಹಿಳೆಯ ಕೊಳೆತ ಶವ (Woman Body) ಪತ್ತೆಯಾಗಿದೆ. ಪೊಲೀಸರ ಪ್ರಕಾರ, ವಿಜಯದುರ್ಗಾ ಮಾಲೀಕರ ಸಂಘದ ಕಾಲೋನಿಯ ರೆಡ್ಡಿ ಲ್ಯಾಬ್‌ನ ಗೋಡೆಯ ಬಳಿ 25ರಿಂದ 35 ವರ್ಷ ವಯಸ್ಸಿನ ಮಹಿಳೆಯ ಹೆಣ ಪತ್ತೆಯಾಗಿದೆ. ಈ ಜಾಗದಲ್ಲಿ ಕಡುಗೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ದುರ್ವಾಸನೆ ಬರುತ್ತಿದೆ ಎಂಬುದರ ಬಗ್ಗೆ ಬುಧವಾರ ಮಧ್ಯಾಹ್ನ ಮಾಹಿತಿ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಸೂಟ್‌ಕೇಸ್ ಅನ್ನು ಪರಿಶೀಲಿಸಿದಾಗ, ಕೆಂಪು ಸೂಟ್ ಧರಿಸಿದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ 10ರಿಂದ 12 ದಿನಗಳ ಹಿಂದೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

“ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಯಾರೋ ಆಕೆಯನ್ನು ಬೇರೆಡೆ ಕೊಂದು ಇಲ್ಲಿ ಎಸೆದಿರುವಂತೆ ತೋರುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 194ರ ಅಡಿಯಲ್ಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂಟ್‌ಕೇಸ್ ಅನ್ನು ಯಾರಾದರೂ ಎಸೆದಿರುವ ದೃಶ್ಯಗಳಿಗಾಗಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಹೇಯ ಕೃತ್ಯ: ಹಣಕ್ಕಾಗಿ 80ರ ವೃದ್ದೆ ಮೇಲೆ ಅತ್ಯಾಚಾರವೆಸಗಿ ಕೊಲೆ

ಇದನ್ನೂ ಓದಿ
Image
ಮೊಬೈಲ್ ಕದ್ದ ಶಂಕೆ, ಬಾಲಕನನ್ನು ಉಲ್ಟಾ ನೇತು ಹಾಕಿ, ಕರೆಂಟ್ ಶಾಕ್ ಕೊಟ್ರು
Image
ಅಯೋಧ್ಯೆಯಲ್ಲಿ ಇಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ
Image
ಭಾರತವನ್ನು ಮಂಡಿಯೂರುವಂತೆ ಮಾಡುವುದಾಗಿ ಹೇಳಿ ಮಣ್ಣು ಮುಕ್ಕಿದ್ದ ಪಾಕಿಸ್ತಾನ
Image
ಹೃದಯವಿದ್ರಾವಕ ಘಟನೆ; ಬೆಂಗಳೂರಿನ ಕಾಲ್ತುಳಿತಕ್ಕೆ ಪ್ರಧಾನಿ ಮೋದಿ ಸಂತಾಪ

ಮೃತಳನ್ನು ಗುರುತಿಸಲು ಮತ್ತು ಆಕೆಯ ಸಾವಿಗೆ ಕಾರಣರಾದವರನ್ನು ಬಂಧಿಸಲು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಕೆ. ಸುರೇಶ್ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಆರಂಭಿಕ ಹಂತಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ತಂಡಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಪೊಲೀಸರು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಶಿಲ್ಲಾಂಗ್‌ನಲ್ಲಿ ಕಾಫಿ ವಿವಾದದಿಂದ ಇಂದೋರ್ ವ್ಯಕ್ತಿಯ ಹತ್ಯೆ; ಹನಿಮೂನ್​ಗೆ ಹೋದವರು ಶವವಾಗಿ ಪತ್ತೆ

ಮೃತ ಮಹಿಳೆಯ ಗುರುತು ಅಥವಾ ಆಕೆಯ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಮಾಹಿತಿ ಇರುವ ಯಾರಾದರೂ ಬಾಚುಪಲ್ಲಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸರು ಒತ್ತಾಯಿಸಿದ್ದಾರೆ. ಮೃತ ಮಹಿಳೆ 25 ಮತ್ತು 35 ವರ್ಷದ ಮಧ್ಯದವರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ