AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್

ಕಾಮುಕ ಮುನಾಜ್ ಅದಾದ ಮೇಲೆ ಸದರಿ ವಿದ್ಯಾರ್ಥಿನಿಗೆ ಪದೇ ಪದೇ ಕರೆ ಮಾಡಿ, ಬೆತ್ತಲೆ ಫೋಟೋ ಕೇಳಿದ್ದಾನೆ. ಬಾಧಿತ ಯುವತಿಯು ಕೊನೆಗೆ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್
ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Aug 01, 2022 | 8:57 PM

Share

ಮಂಗಳೂರು: ಸೂರತ್ಕಲ್ ಸಮೀಪದ ಎನ್.ಐ.ಟಿ.ಕೆ ಬೀಚ್ ನಲ್ಲಿ ಹಾಡಹಗಲೇ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ. ಜುಲೈ 27 ರಂದು ಈ ಆಘಾತಕಾರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ವಿದ್ಯಾರ್ಥಿನಿಯು ತನ್ನ ಸಹಪಾಠಿ ವಿದ್ಯಾರ್ಥಿಯ ಜೊತೆ ಒಟ್ಟಿಗೆ ಬೀಚ್ ಬಳಿ ಇದ್ದರು. ಅದನ್ನು ಮುನಾಜ್ ಅಹ್ಮದ್ (30) ಎಂಬ ದುಷ್ಕರ್ಮಿ ವೀಡಿಯೊ ಮಾಡಿಕೊಂಡಿದ್ದಾನೆ. ಬಳಿಕ ಮುನಾಜ್ ಅಹ್ಮದ್ ಪದವಿ ವ್ಯಾಸಂಗದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅದನ್ನೂ ಕೂಡ ವೀಡಿಯೊ ಮಾಡಿಕೊಂಡಿದ್ದಾನೆ. ಈ ಮಧ್ಯೆ ಹುಡುಗಿಯ ಜೊತೆ ಬಂದಿದ್ದ ಹುಡುಗ ಪರಾರಿಯಾಗಿದ್ದಾನೆ.

ಕಾಮುಕ ಮುನಾಜ್ ಅದಾದ ಮೇಲೆ ಸದರಿ ವಿದ್ಯಾರ್ಥಿನಿಗೆ ಪದೇ ಪದೇ ಕರೆ ಮಾಡಿ, ಬೆತ್ತಲೆ ಫೋಟೋ ಕೇಳಿದ್ದಾನೆ. ಬಾಧಿತ ಯುವತಿಯು ಕೊನೆಗೆ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುನಾಜ್ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು ಮನೆಯಲ್ಲಿ ಕಳವು ಪ್ರಕರಣ: ಮನೆಗೆಲಸದವ ಒಡಿಶಾದಲ್ಲಿ ಅರೆಸ್ಟ್

ಬೆಂಗಳೂರು: ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ (M.B.Patil) ಅವರ​ ನಿವಾಸದಲ್ಲಿ ನಡೆದ 1 ಲಕ್ಷ 20 ಸಾವಿರ ರೂಪಾಯಿ ವಸ್ತುಗಳ ಕಳ್ಳತನ ಪ್ರಕರಣ ಸಂಬಂಧ ಮನೆಯ ಕೆಲಸಗಾರನನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಎಂ.ಬಿ. ಪಾಟೀಲ್ ಅವರ​ ನಿವಾಸದಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್ ದಾಸ್ ಬಂಧಿತ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ಐದು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯನ್ನು ಕೈಗೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದ ಎಂ.ಬಿ.ಪಾಟೀಲ್ ಅವರ ಮನೆಯಲ್ಲಿ ಜಯಂತ್ ದಾಸ್ ಲಾಂಡ್ರಿ ಕೆಲಸ ಮಾಡುತ್ತಿದ್ದನು. ಆದರೆ ಕಳೆದ ತಿಂಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಕರೆನ್ಸಿ, ಬ್ರಾಂಡೆಡ್ ವಾಚ್​ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಜಯಂತ್ ದಾಸ್ ಕಳವು ಮಾಡಿ ಪರಾರಿಯಾಗಿದ್ದನು. ಈ ವಿಚಾರ ತಿಳಿಯುತ್ತಿದ್ದಂತೆ ಎಂ.ಬಿ.ಪಾಟೀಲ್ ಅವರು ಅಡುಗೆ ಕೆಲಸಕ್ಕೆ ಇದ್ದ ವ್ಯಕ್ತಿ ಮೂಲಕ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ಆರಂಭಿಸಿದ ಪೊಲೀಸರು, ಜಯಂತ್​ನನ್ನು ಒಡಿಶಾದಲ್ಲಿ ಬಂಧಿಸಿದ್ದಾರೆ.

Published On - 8:44 pm, Mon, 1 August 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್