AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್

ಕಾಮುಕ ಮುನಾಜ್ ಅದಾದ ಮೇಲೆ ಸದರಿ ವಿದ್ಯಾರ್ಥಿನಿಗೆ ಪದೇ ಪದೇ ಕರೆ ಮಾಡಿ, ಬೆತ್ತಲೆ ಫೋಟೋ ಕೇಳಿದ್ದಾನೆ. ಬಾಧಿತ ಯುವತಿಯು ಕೊನೆಗೆ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್
ಸೂರತ್ಕಲ್​​ ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕಾಮುಕ ಮುನಾಜ್ ಅರೆಸ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Aug 01, 2022 | 8:57 PM

Share

ಮಂಗಳೂರು: ಸೂರತ್ಕಲ್ ಸಮೀಪದ ಎನ್.ಐ.ಟಿ.ಕೆ ಬೀಚ್ ನಲ್ಲಿ ಹಾಡಹಗಲೇ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ. ಜುಲೈ 27 ರಂದು ಈ ಆಘಾತಕಾರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ವಿದ್ಯಾರ್ಥಿನಿಯು ತನ್ನ ಸಹಪಾಠಿ ವಿದ್ಯಾರ್ಥಿಯ ಜೊತೆ ಒಟ್ಟಿಗೆ ಬೀಚ್ ಬಳಿ ಇದ್ದರು. ಅದನ್ನು ಮುನಾಜ್ ಅಹ್ಮದ್ (30) ಎಂಬ ದುಷ್ಕರ್ಮಿ ವೀಡಿಯೊ ಮಾಡಿಕೊಂಡಿದ್ದಾನೆ. ಬಳಿಕ ಮುನಾಜ್ ಅಹ್ಮದ್ ಪದವಿ ವ್ಯಾಸಂಗದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅದನ್ನೂ ಕೂಡ ವೀಡಿಯೊ ಮಾಡಿಕೊಂಡಿದ್ದಾನೆ. ಈ ಮಧ್ಯೆ ಹುಡುಗಿಯ ಜೊತೆ ಬಂದಿದ್ದ ಹುಡುಗ ಪರಾರಿಯಾಗಿದ್ದಾನೆ.

ಕಾಮುಕ ಮುನಾಜ್ ಅದಾದ ಮೇಲೆ ಸದರಿ ವಿದ್ಯಾರ್ಥಿನಿಗೆ ಪದೇ ಪದೇ ಕರೆ ಮಾಡಿ, ಬೆತ್ತಲೆ ಫೋಟೋ ಕೇಳಿದ್ದಾನೆ. ಬಾಧಿತ ಯುವತಿಯು ಕೊನೆಗೆ ಸುರತ್ಕಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುನಾಜ್ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು ಮನೆಯಲ್ಲಿ ಕಳವು ಪ್ರಕರಣ: ಮನೆಗೆಲಸದವ ಒಡಿಶಾದಲ್ಲಿ ಅರೆಸ್ಟ್

ಬೆಂಗಳೂರು: ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ (M.B.Patil) ಅವರ​ ನಿವಾಸದಲ್ಲಿ ನಡೆದ 1 ಲಕ್ಷ 20 ಸಾವಿರ ರೂಪಾಯಿ ವಸ್ತುಗಳ ಕಳ್ಳತನ ಪ್ರಕರಣ ಸಂಬಂಧ ಮನೆಯ ಕೆಲಸಗಾರನನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. ಎಂ.ಬಿ. ಪಾಟೀಲ್ ಅವರ​ ನಿವಾಸದಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್ ದಾಸ್ ಬಂಧಿತ ಆರೋಪಿಯಾಗಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ಐದು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯನ್ನು ಕೈಗೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದ ಎಂ.ಬಿ.ಪಾಟೀಲ್ ಅವರ ಮನೆಯಲ್ಲಿ ಜಯಂತ್ ದಾಸ್ ಲಾಂಡ್ರಿ ಕೆಲಸ ಮಾಡುತ್ತಿದ್ದನು. ಆದರೆ ಕಳೆದ ತಿಂಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಕರೆನ್ಸಿ, ಬ್ರಾಂಡೆಡ್ ವಾಚ್​ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಜಯಂತ್ ದಾಸ್ ಕಳವು ಮಾಡಿ ಪರಾರಿಯಾಗಿದ್ದನು. ಈ ವಿಚಾರ ತಿಳಿಯುತ್ತಿದ್ದಂತೆ ಎಂ.ಬಿ.ಪಾಟೀಲ್ ಅವರು ಅಡುಗೆ ಕೆಲಸಕ್ಕೆ ಇದ್ದ ವ್ಯಕ್ತಿ ಮೂಲಕ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ಆರಂಭಿಸಿದ ಪೊಲೀಸರು, ಜಯಂತ್​ನನ್ನು ಒಡಿಶಾದಲ್ಲಿ ಬಂಧಿಸಿದ್ದಾರೆ.

Published On - 8:44 pm, Mon, 1 August 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು