AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Accident ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ: ಮರಣೋತ್ತರ ಪರೀಕ್ಷೆ ವರದಿಯ ಸ್ಪೋಟಕ ಮಾಹಿತಿ ಬಹಿರಂಗ

ಹೊಸ ವರ್ಷಾಚರಣೆಯಲ್ಲಿ ಭಾಗವಹಿಸಿ ಕೆಲವೇ ಸಮಯದಲ್ಲಿ ಕಾರಿನಡಿ ಸಿಲುಕಿ ಭಯಾನಕವಾಗಿ ಮೃತಪಟ್ಟಿದ್ದ ದೆಹಲಿಯ 20 ವರ್ಷದ ಯುವತಿಯ ಮರಣೋತ್ತರ ಪರೀಕ್ಷೆ ಬಹಿರಂಗವಾಗಿದೆ.

Delhi Accident ಯುವತಿ ಮೇಲೆ ಅತ್ಯಾಚಾರವಾಗಿಲ್ಲ, ಮೆದುಳು ನಾಪತ್ತೆ: ಮರಣೋತ್ತರ ಪರೀಕ್ಷೆ ವರದಿಯ ಸ್ಪೋಟಕ ಮಾಹಿತಿ ಬಹಿರಂಗ
ದೆಹಲಿ ಅಪಘಾತ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 04, 2023 | 6:03 PM

ನವದೆಹಲಿ: ಜನವರಿ 1ರಂದು ರಾತ್ರಿ ನವದೆಹಲಿಯ(Delhi Accident)) ಸುಲ್ತಾನ್​ಪುರಿ ಪ್ರದೇಶದಲ್ಲಿ ಅಂಜಲಿ ಎನ್ನುವ ಯುವತಿ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು ಆಕೆಯನ್ನು ಕಿ.ಮೀ.ಗಟ್ಟಲೆ ದೂರಕ್ಕೆ ಎಳೆದುಕೊಂಡು ಹೋಗಿತ್ತು. ಇದಾದ ಬಳಿಕ ಆಕೆ ಸಾವನ್ನಪ್ಪಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ ನಂತರ ಎಳೆದೊಯ್ಯುವ ಮುನ್ನ ಕೊಂದು ಹಾಕಿರಬಹುದು ಎಂದು ಶಂಕಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಿಗ ಮೃತ ಯುವತಿ ಅಂಜಲಿ ಮರಣೋತ್ತರ ಪರೀಕ್ಷೆ ವರದಿ(post mortem report) ಬಹಿರಂಗವಾಗಿದ್ದು, ಅತ್ಯಾಚಾರ ಮಾಡಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಕಿಲೋಮೀಟರ್​ಗಟ್ಟಲೇ ಕಾರು ಎಳೆದುಕೊಂಡು ಹೋಗಿದ್ದರಿಂದ ಆಕೆಯ ದೇಹದ ಬಹುತೇಕ ಎಲ್ಲಾ ಭಾಗಗಳಲ್ಲಿ ಗಾಯಗಳಾಗಿವೆ. ಅಲ್ಲದೇ ದೇಹದ ಹಿಂಬದಿಯ ಚರ್ಮ ಕಿತ್ತುಹೋಗಿ ಪಕ್ಕೆಲುಬುಗಳು ಕೂಡ ಹೊರಗೆ ಕಾಣಿಸುತ್ತಿದ್ದವು. ಹಾಗೇ ಅಂಜಲಿ ಮೆದುಳು ನಾಪತ್ತೆಯಾಗಿದೆ. ಆದ್ರೆ, ಅತ್ಯಾಚಾರ ಮಾಡಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಬದಲಾಗಿ ಅಘಾತದಿಂದ ರಕ್ತಸ್ರಾವವಾಗಿ ಮೃತಟ್ಟಿದ್ದಾಳೆ ಎನ್ನುವ ಅಂಶ ಮರಣೋತ್ತರ ಪರೀಕ್ಷೆ ವರದಿಯಿಂದ ತಿಳಿದುಬಂದಿದೆ.

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸುಲ್ತಾನ್​ಪುರಿ ಪೊಲೀಸ್​ ಠಾಣೆಗೆ ಇಂದು(ಜನವರಿ 04) FSL ತಜ್ಞರು ಭೇಟಿ ನೀಡಿದ್ದು, ಯುವತಿಗೆ ಡಿಕ್ಕಿ ಹೊಡೆಸಿ ಎಳೆದೊಯ್ದಿದ್ದ DL​ 8CAY 6414 ನಂಬರ್​ನ ಕಾರು ಪರಿಶೀಲನೆ ಮಾಡಿದರು.

ಹೊಸ ವರ್ಷದ ನಸುಕಿನಲ್ಲಿ ಭಯಾನಕ ಅಪಘಾತ

ಜನವರಿ 01ರಂದು ನಸುಕಿನ ವೇಳೆ ಅಂಜಲಿ ಸ್ಕೂಟರ್ ಅಪಘಾತಕ್ಕೀಡಾಗಿತ್ತು. ಕಾರಿನ ಚಕ್ರಕ್ಕೆ ಬಟ್ಟೆ ಸಿಕ್ಕಿಹಾಕಿಕೊಂಡು ಕಿಲೋಮೀಟರ್​ ವರೆಗೂ ಎಳೆದೊಯ್ದಿತ್ತು. ದೇಹ ರಸ್ತೆ ಬದಿಯಲ್ಲಿ ಅಂಜಲಿ ಸಿಂಗ್ ಅವರ ಮೃತದೇಹದ ಮೇಲೆ ಬಟ್ಟೆಗಳೇ ಇರಲಿಲ್ಲ. ಹೀಗಾಗಿ ಆಕೆಯ ಮೇಲೆ ಅತ್ಯಾಚಾರವಾಗರಬಹುದು ಎಂದು ಅನುಮಾನಗಳು ವ್ಯಕ್ತವಾಗಿದ್ದವು. ಅಲ್ಲದೇ ಈ ಬಗ್ಗೆ ಯುವತಿಯ ತಾಯಿಯೂ ಸಹ ಶಂಕೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಸುಲ್ತಾನ್​ಪುರಿ ಪ್ರದೇಶದಲ್ಲಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದ ಬಳಿಕ ಆಕೆಯ ಕಾಲು ಆಕ್ಸೆಲ್‌ಗೆ ಸಿಕ್ಕಿಕೊಂಡಿತ್ತು. ಒಳಗಿದ್ದ ಐವರು ವ್ಯಕ್ತಿಗಳು ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದರಿಂದ ತಮಗೆ ಇದರ ಪರಿವೇ ಇರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಕಾರು ಮುಂದೆ ಸಾಗಿದಂತೆ, ಅಂಜಲಿಯ ದೇಹ ನೆಲದ ಮೇಲೆಯೇ ಹೋಗುತ್ತಿತ್ತು. ಇದರಿಂದ ಬಟ್ಟೆಗಳು ಹರಿದುಹೋಗಿವೆ ಎನ್ನಲಾಗಿದೆ. ಕೊನೆಗೂ ಕಾರಿನಲ್ಲಿದ್ದ ಒಬ್ಬಾತ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಕಾರಿನ ಅಡಿ ಆಕೆಯ ಕೈ ಕಂಡಿದ್ದ. ತಿರುವು ಪಡೆಯುವಾಗ ದೇಹ ಬಿದ್ದಿದ್ದರಿಂದ ಗಾಬರಿಗೊಂಡಿದ್ದ ಅವರು, ಅಲ್ಲಿಂದ ಪರಾರಿಯಾಗಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ