AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ
ಪೊಲೀಸ್( ಸಾಂದರ್ಭಿಕ ಚಿತ್ರ)Image Credit source: NDTV
ನಯನಾ ರಾಜೀವ್
|

Updated on: Apr 02, 2023 | 8:57 AM

Share

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಸಿಗ್ನೇಚರ್ ಸೇತುವೆ ಬಳಿಯ ಟ್ರಾಫಿಕ್ ಸರ್ಕಲ್ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಣವನ್ನು ದೋಚಿದ್ದರು. ಬಂಧಿತ ಆರೋಪಿಗಳನ್ನು ಆರಿಫ್ ಅಲಿಯಾಸ್ ಖುಜ್ಲಿ, ಅಬಿದ್ ಅಲಿಯಾಸ್ ಕಲ್ಲುವ ಮತ್ತು ಅನುಪ್ ಅಲಿಯಾಸ್ ಜುಲ್ಫಿ ಎಂದು ಗುರುತಿಸಲಾಗಿದೆ. ಆರಿಫ್ ಮತ್ತು ಅಬಿದ್ ಅವರು ಅನುಪ್‌ಗೆ ಫೋನ್‌ಗಳನ್ನು ಮಾರಾಟ ಮಾಡಿದ್ದಾರೆ ಮತ್ತು ಇ-ವ್ಯಾಲೆಟ್, ಎಟಿಎಂ ಕಾರ್ಡ್ ಮತ್ತು ಸಿಮ್ ಕಾರ್ಡ್ ಬಳಸಿ ದೂರುದಾರ ಎಚ್‌ಸಿ ಮೋಹಿತ್ ಅವರ ಬ್ಯಾಂಕ್ ಖಾತೆಯಿಂದ 63,000 ಸಾವಿರ ದೋಚಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ

6 ಟಾಪ್ ಎಂಡ್ ಮೊಬೈಲ್ ಫೋನ್ ಗಳು, 4 ಎಟಿಎಂ ಕಾರ್ಡ್ ಗಳು ಹಾಗೂ ಪೊಲೀಸರ ವ್ಯಾಲೆಟ್ ನಿಂದ ಡ್ರಾ ಮಾಡಿದ್ದ 60,000 ರೂ. ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಎಚ್‌ಸಿ ಮೋಹಿತ್ ಮಾರ್ಚ್ 29 ರಂದು ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಸಿಗ್ನೇಚರ್ ಸೇತುವೆಯ ಘಟನೆ ನಡೆದಿತ್ತು.

ಚಾಕುವಿನಿಂದ ಇರಿದು ಆತನ ಬಳಿಯಿದ್ದ ಎಟಿಎಂ ಕಾರ್ಡ್, ಐ-ಕಾರ್ಡ್, 6,000 ರೂ. ಹಾಗೂ ಮೊಬೈಲ್ ಫೋನ್ ದೋಚಿದ್ದರು. ಆರೋಪಿ ಅನುಪ್ ಅಲಿಯಾಸ್ ಜುಲ್ಫಿ ಗ್ಯಾಂಗ್‌ನ ರಿಂಗ್ ಲೀಡರ್ ಆಗಿದ್ದು, ಉಸ್ಮಾನ್‌ಪುರ ಬಳಿಯ ಪುಷ್ಟ, ಖಜೂರಿ ಮತ್ತು ಸಿಗ್ನೇಚರ್ ಬ್ರಿಡ್ಜ್ ಪ್ರದೇಶದಲ್ಲಿ ಡಾರ್ಕ್ ಸ್ಪಾಟ್‌ಗಳಲ್ಲಿ ಒಂಟಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಮೇರೆಗೆ ಆರೋಪಿಗಳ ಹುಡುಕಾಟ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಿಫ್ ಈ ಹಿಂದೆ ಇದೇ ರೀತಿಯ ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಅನುಪ್ 37 ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ