AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ
ಪೊಲೀಸ್( ಸಾಂದರ್ಭಿಕ ಚಿತ್ರ)Image Credit source: NDTV
ನಯನಾ ರಾಜೀವ್
|

Updated on: Apr 02, 2023 | 8:57 AM

Share

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಸಿಗ್ನೇಚರ್ ಸೇತುವೆ ಬಳಿಯ ಟ್ರಾಫಿಕ್ ಸರ್ಕಲ್ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಣವನ್ನು ದೋಚಿದ್ದರು. ಬಂಧಿತ ಆರೋಪಿಗಳನ್ನು ಆರಿಫ್ ಅಲಿಯಾಸ್ ಖುಜ್ಲಿ, ಅಬಿದ್ ಅಲಿಯಾಸ್ ಕಲ್ಲುವ ಮತ್ತು ಅನುಪ್ ಅಲಿಯಾಸ್ ಜುಲ್ಫಿ ಎಂದು ಗುರುತಿಸಲಾಗಿದೆ. ಆರಿಫ್ ಮತ್ತು ಅಬಿದ್ ಅವರು ಅನುಪ್‌ಗೆ ಫೋನ್‌ಗಳನ್ನು ಮಾರಾಟ ಮಾಡಿದ್ದಾರೆ ಮತ್ತು ಇ-ವ್ಯಾಲೆಟ್, ಎಟಿಎಂ ಕಾರ್ಡ್ ಮತ್ತು ಸಿಮ್ ಕಾರ್ಡ್ ಬಳಸಿ ದೂರುದಾರ ಎಚ್‌ಸಿ ಮೋಹಿತ್ ಅವರ ಬ್ಯಾಂಕ್ ಖಾತೆಯಿಂದ 63,000 ಸಾವಿರ ದೋಚಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ

6 ಟಾಪ್ ಎಂಡ್ ಮೊಬೈಲ್ ಫೋನ್ ಗಳು, 4 ಎಟಿಎಂ ಕಾರ್ಡ್ ಗಳು ಹಾಗೂ ಪೊಲೀಸರ ವ್ಯಾಲೆಟ್ ನಿಂದ ಡ್ರಾ ಮಾಡಿದ್ದ 60,000 ರೂ. ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಎಚ್‌ಸಿ ಮೋಹಿತ್ ಮಾರ್ಚ್ 29 ರಂದು ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಸಿಗ್ನೇಚರ್ ಸೇತುವೆಯ ಘಟನೆ ನಡೆದಿತ್ತು.

ಚಾಕುವಿನಿಂದ ಇರಿದು ಆತನ ಬಳಿಯಿದ್ದ ಎಟಿಎಂ ಕಾರ್ಡ್, ಐ-ಕಾರ್ಡ್, 6,000 ರೂ. ಹಾಗೂ ಮೊಬೈಲ್ ಫೋನ್ ದೋಚಿದ್ದರು. ಆರೋಪಿ ಅನುಪ್ ಅಲಿಯಾಸ್ ಜುಲ್ಫಿ ಗ್ಯಾಂಗ್‌ನ ರಿಂಗ್ ಲೀಡರ್ ಆಗಿದ್ದು, ಉಸ್ಮಾನ್‌ಪುರ ಬಳಿಯ ಪುಷ್ಟ, ಖಜೂರಿ ಮತ್ತು ಸಿಗ್ನೇಚರ್ ಬ್ರಿಡ್ಜ್ ಪ್ರದೇಶದಲ್ಲಿ ಡಾರ್ಕ್ ಸ್ಪಾಟ್‌ಗಳಲ್ಲಿ ಒಂಟಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಮೇರೆಗೆ ಆರೋಪಿಗಳ ಹುಡುಕಾಟ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಿಫ್ ಈ ಹಿಂದೆ ಇದೇ ರೀತಿಯ ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಅನುಪ್ 37 ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ