AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ
ಪೊಲೀಸ್( ಸಾಂದರ್ಭಿಕ ಚಿತ್ರ)Image Credit source: NDTV
ನಯನಾ ರಾಜೀವ್
|

Updated on: Apr 02, 2023 | 8:57 AM

Share

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಸಿಗ್ನೇಚರ್ ಸೇತುವೆ ಬಳಿಯ ಟ್ರಾಫಿಕ್ ಸರ್ಕಲ್ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಣವನ್ನು ದೋಚಿದ್ದರು. ಬಂಧಿತ ಆರೋಪಿಗಳನ್ನು ಆರಿಫ್ ಅಲಿಯಾಸ್ ಖುಜ್ಲಿ, ಅಬಿದ್ ಅಲಿಯಾಸ್ ಕಲ್ಲುವ ಮತ್ತು ಅನುಪ್ ಅಲಿಯಾಸ್ ಜುಲ್ಫಿ ಎಂದು ಗುರುತಿಸಲಾಗಿದೆ. ಆರಿಫ್ ಮತ್ತು ಅಬಿದ್ ಅವರು ಅನುಪ್‌ಗೆ ಫೋನ್‌ಗಳನ್ನು ಮಾರಾಟ ಮಾಡಿದ್ದಾರೆ ಮತ್ತು ಇ-ವ್ಯಾಲೆಟ್, ಎಟಿಎಂ ಕಾರ್ಡ್ ಮತ್ತು ಸಿಮ್ ಕಾರ್ಡ್ ಬಳಸಿ ದೂರುದಾರ ಎಚ್‌ಸಿ ಮೋಹಿತ್ ಅವರ ಬ್ಯಾಂಕ್ ಖಾತೆಯಿಂದ 63,000 ಸಾವಿರ ದೋಚಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ

6 ಟಾಪ್ ಎಂಡ್ ಮೊಬೈಲ್ ಫೋನ್ ಗಳು, 4 ಎಟಿಎಂ ಕಾರ್ಡ್ ಗಳು ಹಾಗೂ ಪೊಲೀಸರ ವ್ಯಾಲೆಟ್ ನಿಂದ ಡ್ರಾ ಮಾಡಿದ್ದ 60,000 ರೂ. ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಎಚ್‌ಸಿ ಮೋಹಿತ್ ಮಾರ್ಚ್ 29 ರಂದು ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಸಿಗ್ನೇಚರ್ ಸೇತುವೆಯ ಘಟನೆ ನಡೆದಿತ್ತು.

ಚಾಕುವಿನಿಂದ ಇರಿದು ಆತನ ಬಳಿಯಿದ್ದ ಎಟಿಎಂ ಕಾರ್ಡ್, ಐ-ಕಾರ್ಡ್, 6,000 ರೂ. ಹಾಗೂ ಮೊಬೈಲ್ ಫೋನ್ ದೋಚಿದ್ದರು. ಆರೋಪಿ ಅನುಪ್ ಅಲಿಯಾಸ್ ಜುಲ್ಫಿ ಗ್ಯಾಂಗ್‌ನ ರಿಂಗ್ ಲೀಡರ್ ಆಗಿದ್ದು, ಉಸ್ಮಾನ್‌ಪುರ ಬಳಿಯ ಪುಷ್ಟ, ಖಜೂರಿ ಮತ್ತು ಸಿಗ್ನೇಚರ್ ಬ್ರಿಡ್ಜ್ ಪ್ರದೇಶದಲ್ಲಿ ಡಾರ್ಕ್ ಸ್ಪಾಟ್‌ಗಳಲ್ಲಿ ಒಂಟಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಮೇರೆಗೆ ಆರೋಪಿಗಳ ಹುಡುಕಾಟ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಿಫ್ ಈ ಹಿಂದೆ ಇದೇ ರೀತಿಯ ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಅನುಪ್ 37 ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್