AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಟ್ರಾಫಿಕ್​ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿದ್ದ ಮೂವರ ಬಂಧನ
ಪೊಲೀಸ್( ಸಾಂದರ್ಭಿಕ ಚಿತ್ರ)Image Credit source: NDTV
ನಯನಾ ರಾಜೀವ್
|

Updated on: Apr 02, 2023 | 8:57 AM

Share

ಟ್ರಾಫಿಕ್ ಪೊಲೀಸರೊಬ್ಬರಿಗೆ ಚಾಕುವಿನಿಂದ ಇರಿದು 63 ಸಾವಿರ ರೂ. ದೋಚಿ ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಸಿಗ್ನೇಚರ್ ಸೇತುವೆ ಬಳಿಯ ಟ್ರಾಫಿಕ್ ಸರ್ಕಲ್ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಣವನ್ನು ದೋಚಿದ್ದರು. ಬಂಧಿತ ಆರೋಪಿಗಳನ್ನು ಆರಿಫ್ ಅಲಿಯಾಸ್ ಖುಜ್ಲಿ, ಅಬಿದ್ ಅಲಿಯಾಸ್ ಕಲ್ಲುವ ಮತ್ತು ಅನುಪ್ ಅಲಿಯಾಸ್ ಜುಲ್ಫಿ ಎಂದು ಗುರುತಿಸಲಾಗಿದೆ. ಆರಿಫ್ ಮತ್ತು ಅಬಿದ್ ಅವರು ಅನುಪ್‌ಗೆ ಫೋನ್‌ಗಳನ್ನು ಮಾರಾಟ ಮಾಡಿದ್ದಾರೆ ಮತ್ತು ಇ-ವ್ಯಾಲೆಟ್, ಎಟಿಎಂ ಕಾರ್ಡ್ ಮತ್ತು ಸಿಮ್ ಕಾರ್ಡ್ ಬಳಸಿ ದೂರುದಾರ ಎಚ್‌ಸಿ ಮೋಹಿತ್ ಅವರ ಬ್ಯಾಂಕ್ ಖಾತೆಯಿಂದ 63,000 ಸಾವಿರ ದೋಚಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ

6 ಟಾಪ್ ಎಂಡ್ ಮೊಬೈಲ್ ಫೋನ್ ಗಳು, 4 ಎಟಿಎಂ ಕಾರ್ಡ್ ಗಳು ಹಾಗೂ ಪೊಲೀಸರ ವ್ಯಾಲೆಟ್ ನಿಂದ ಡ್ರಾ ಮಾಡಿದ್ದ 60,000 ರೂ. ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಎಚ್‌ಸಿ ಮೋಹಿತ್ ಮಾರ್ಚ್ 29 ರಂದು ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಸಿಗ್ನೇಚರ್ ಸೇತುವೆಯ ಘಟನೆ ನಡೆದಿತ್ತು.

ಚಾಕುವಿನಿಂದ ಇರಿದು ಆತನ ಬಳಿಯಿದ್ದ ಎಟಿಎಂ ಕಾರ್ಡ್, ಐ-ಕಾರ್ಡ್, 6,000 ರೂ. ಹಾಗೂ ಮೊಬೈಲ್ ಫೋನ್ ದೋಚಿದ್ದರು. ಆರೋಪಿ ಅನುಪ್ ಅಲಿಯಾಸ್ ಜುಲ್ಫಿ ಗ್ಯಾಂಗ್‌ನ ರಿಂಗ್ ಲೀಡರ್ ಆಗಿದ್ದು, ಉಸ್ಮಾನ್‌ಪುರ ಬಳಿಯ ಪುಷ್ಟ, ಖಜೂರಿ ಮತ್ತು ಸಿಗ್ನೇಚರ್ ಬ್ರಿಡ್ಜ್ ಪ್ರದೇಶದಲ್ಲಿ ಡಾರ್ಕ್ ಸ್ಪಾಟ್‌ಗಳಲ್ಲಿ ಒಂಟಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಮೇರೆಗೆ ಆರೋಪಿಗಳ ಹುಡುಕಾಟ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಿಫ್ ಈ ಹಿಂದೆ ಇದೇ ರೀತಿಯ ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಅನುಪ್ 37 ದರೋಡೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?