Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸ್ನೇಹಿತನ ಶವವನ್ನು ಅಂಡರ್​ಪಾಸ್​ನಲ್ಲಿ ಎಸೆದು ಹೋಗಿದ್ದ ಮೂವರ ಬಂಧನ

ಸ್ನೇಹಿತರೆಂದರೆ ಇಷ್ಟೇನಾ ಎನಿಸಿಬಿಡುತ್ತದೆ, ಎಲ್ಲಾ ಕಷ್ಟಸುಖಗಳಲ್ಲಿ ಹೆಗಲಿಗೆ ಹೆಗಲಾಗಿ ನಿಲ್ಲಬೇಕಾದವರು ಸತ್ತಾಗಲೂ ಹೆಗಲು ಕೊಡಲಾಗದೆ ಸ್ನೇಹಿತನೆಂದೂ ನೋಡದೆ, ಒಂದು ಹನಿ ಕಣ್ಣೀರು ಹಾಕದೆ ಶವವನ್ನು ಎಲ್ಲೋ ಬಿಸಾಡಿ ಹೋಗುವವರು ಸ್ನೇಹಿತರೆನ್ನುವ ಪದಕ್ಕೆ ಕಳಂಕ ಅಂದರೆ ತಪ್ಪಾಗಲಾರದು.

Delhi Crime: ರಸ್ತೆ ಅಪಘಾತದಲ್ಲಿ ಮೃತಪಟ್ಟ ಸ್ನೇಹಿತನ ಶವವನ್ನು ಅಂಡರ್​ಪಾಸ್​ನಲ್ಲಿ ಎಸೆದು ಹೋಗಿದ್ದ ಮೂವರ ಬಂಧನ
ಬಂಧನ
Follow us
ನಯನಾ ರಾಜೀವ್
|

Updated on: Mar 14, 2023 | 9:36 AM

ಸ್ನೇಹಿತರೆಂದರೆ ಇಷ್ಟೇನಾ ಎನಿಸಿಬಿಡುತ್ತದೆ, ಎಲ್ಲಾ ಕಷ್ಟಸುಖಗಳಲ್ಲಿ ಹೆಗಲಿಗೆ ಹೆಗಲಾಗಿ ನಿಲ್ಲಬೇಕಾದವರು ಸತ್ತಾಗಲೂ ಹೆಗಲು ಕೊಡಲಾಗದೆ ಸ್ನೇಹಿತನೆಂದೂ ನೋಡದೆ, ಒಂದು ಹನಿ ಕಣ್ಣೀರು ಹಾಕದೆ ಶವವನ್ನು ಎಲ್ಲೋ ಬಿಸಾಡಿ ಹೋಗುವವರು ಸ್ನೇಹಿತರೆನ್ನುವ ಪದಕ್ಕೆ ಕಳಂಕ ಅಂದರೆ ತಪ್ಪಾಗಲಾರದು.

ಅಪಘಾತದಲ್ಲಿ ಮೃತಪಟ್ಟ ಸ್ನೇಹಿತನ್ನು ಅಂಡರ್​ಪಾಸ್​ನಲ್ಲಿ ಎಸೆದು ಹೋಗಿರುವ ಘಟನೆ ದೆಹಲಿಯ ವಿವೇಕ ವಿಹಾರದಲ್ಲಿ ನಡೆದಿದೆ. ನಾಲ್ವರು ಸ್ನೇಹಿತರು ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದರು, ಆಟೋ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದ, ಆತನ ಶವವನ್ನು ಮೂವರು ಸ್ನೇಹಿತರು ಅಂಡರ್​ಪಾಸ್​ ಕೆಳಗೆ ಎಸೆದು ಹೋಗಿದ್ದರು.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅವರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾ ಅಪಘಾತಕ್ಕೀಡಾಗಿ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಮತ್ತಷ್ಟು ಓದಿ: ಬಾಗಲಕೋಟೆ: ಅಕ್ಕನ ಮನೆಗೆ ನುಗ್ಗಿ ಬಾಮೈದನ ಅಟ್ಟಹಾಸ; ಕಲ್ಲಿನಿಂದಲೇ ಜಜ್ಜಿ ಇಬ್ಬರ ಕೊಲೆ

ಗಾಯಗೊಂಡಿದ್ದ ಯುವಕ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದ, ನಂತರ ಆತನ ಮೂವರು ಸ್ನೇಹಿತರು ಆಟೋ ರಿಕ್ಷಾದಲ್ಲಿ ಸ್ಥಳದಿಂದ ಕರೆದೊಯ್ದು, ಆಸ್ಪತ್ರೆಗೆ ಕರೆದೊಯ್ಯುವ ಬದಲು ವಿವೇಕ ವಿಹಾರ ಅಂಡರ್​ಪಾಸ್​ನಲ್ಲಿ ಎಸೆದಿದ್ದಾರೆ.

ಪೊಲೀಸರ ಪ್ರಕಾರ ಈ ಆಟೋರಿಕ್ಷಾವು ಆ ಮೂವರಲ್ಲಿ ಒಬ್ಬರಿಗೆ ಸೇರಿದ್ದಾಗಿದೆ, ಮೂವರನ್ನು ಬಂಧಿಸಲಾಗಿದೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು