AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: May 18, 2023 | 8:44 AM

Share

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್ ಪ್ರದೇಶದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆ ಮೃತಪಟ್ಟಿರುವುದು ಕಂಡು ಬಂದಿದೆ. ಆಕೆಯ ದೇಹದ ಮೇಲೆ ಅನೇಕ ಇರಿತದ ಗಾಯಗಳಿದ್ದವು.

ವಿಚಾರಣೆ ವೇಳೆ ಸಂತ್ರಸ್ತೆ ಕಳೆದ ವರ್ಷ ನವೆಂಬರ್‌ನಲ್ಲಿ ಎಸ್‌ಕೆ ಗುಪ್ತಾ ಅವರನ್ನು ವಿವಾಹವಾಗಿದ್ದರು ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಪ್ತಾ ಅವರ ಮಗ ವಿಶೇಷ ಚೇತನರಾಗಿದ್ದು ಅವರನ್ನು ನೋಡಿಕೊಳ್ಳುವ ಉದ್ದೇಶದಿಂದ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ ಕೆಲವೇ ದಿನಗಳಲ್ಲಿ ವಿಚ್ಛೇದನ ಬೇಕು ಎಂದು ಕೇಳಿದ್ದಳು, ಜತೆಗೆ 1 ಕೋಟಿ ರೂ ಪರಿಹಾರವೂ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು.

ಮತ್ತಷ್ಟು ಓದಿ: ಕೌಟುಂಬಿಕ ಕಲಹ ಹಿನ್ನಲೆ ಪತಿಯಿಂದಲೇ ಪತ್ನಿಯ ಕೊಲೆ; ಮದುವೆ ಮನೆಯಲ್ಲೀಗ ಸೂತಕದ ಛಾಯೆ

ಹಾಗಾಗಿ ಪತ್ನಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು.ಪೊಲೀಸರ ಪ್ರಕಾರ, ಗುಪ್ತಾ ತನ್ನ ಮಗ ಅಮಿತ್‌ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆರೋಪಿ ವಿಪಿನ್‌ನೊಂದಿಗೆ ಸಂಪರ್ಕ ಹೊಂದಿದ್ದ, ಪತ್ನಿಯನ್ನು ಕೊಲ್ಲಲು 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿ 2.40 ಲಕ್ಷ ರೂ ಮುಂಗಡವಾಗಿ ನೀಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.

ಯೋಜನೆಯಂತೆ ಆರೋಪಿ ಹಿಮಾಂಶು ಸೇರಿ ಮನೆಗೆ ಹೋಗಿ ಮಹಿಳೆಗೆ ಚಾಕುವಿನಿಂದ ಇರಿದಿದ್ದ. ಪೊಲೀಸರ ದಾರಿ ತಪ್ಪಿಸುವ ಸಲುವಾಗಿ ಮನೆಯಿಂದ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದರು. ಮೊಬೈಲ್​ ಫೋನ್​ಗಳನ್ನು ಕೂಡ ಕದ್ದಿದ್ದರು. ಕೊಲೆ ನಡೆದಾಗ ಅಮಿತ್ ಮನೆಯಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ಎಸ್‌ಕೆ ಗುಪ್ತಾ, ಅವರ ಮಗ ಅಮಿತ್ ಮತ್ತು ಇಬ್ಬರು ಗುತ್ತಿಗೆ ಹಂತಕರಾದ ವಿಪಿನ್ ಸೇಥಿ (45) ಮತ್ತು ಹಿಮಾಂಶು (20) ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಅವರು ಅಪರಾಧದಲ್ಲಿ ತಮ್ಮ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಅಪರಾಧಕ್ಕೆ ಬಳಸಿದ ಫೋನ್‌ಗಳು, ರಕ್ತಸಿಕ್ತ ಬಟ್ಟೆಗಳು ಮತ್ತು ಸ್ಕೂಟರ್‌ಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​