AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: May 18, 2023 | 8:44 AM

Share

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್ ಪ್ರದೇಶದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆ ಮೃತಪಟ್ಟಿರುವುದು ಕಂಡು ಬಂದಿದೆ. ಆಕೆಯ ದೇಹದ ಮೇಲೆ ಅನೇಕ ಇರಿತದ ಗಾಯಗಳಿದ್ದವು.

ವಿಚಾರಣೆ ವೇಳೆ ಸಂತ್ರಸ್ತೆ ಕಳೆದ ವರ್ಷ ನವೆಂಬರ್‌ನಲ್ಲಿ ಎಸ್‌ಕೆ ಗುಪ್ತಾ ಅವರನ್ನು ವಿವಾಹವಾಗಿದ್ದರು ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಪ್ತಾ ಅವರ ಮಗ ವಿಶೇಷ ಚೇತನರಾಗಿದ್ದು ಅವರನ್ನು ನೋಡಿಕೊಳ್ಳುವ ಉದ್ದೇಶದಿಂದ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ ಕೆಲವೇ ದಿನಗಳಲ್ಲಿ ವಿಚ್ಛೇದನ ಬೇಕು ಎಂದು ಕೇಳಿದ್ದಳು, ಜತೆಗೆ 1 ಕೋಟಿ ರೂ ಪರಿಹಾರವೂ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು.

ಮತ್ತಷ್ಟು ಓದಿ: ಕೌಟುಂಬಿಕ ಕಲಹ ಹಿನ್ನಲೆ ಪತಿಯಿಂದಲೇ ಪತ್ನಿಯ ಕೊಲೆ; ಮದುವೆ ಮನೆಯಲ್ಲೀಗ ಸೂತಕದ ಛಾಯೆ

ಹಾಗಾಗಿ ಪತ್ನಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು.ಪೊಲೀಸರ ಪ್ರಕಾರ, ಗುಪ್ತಾ ತನ್ನ ಮಗ ಅಮಿತ್‌ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆರೋಪಿ ವಿಪಿನ್‌ನೊಂದಿಗೆ ಸಂಪರ್ಕ ಹೊಂದಿದ್ದ, ಪತ್ನಿಯನ್ನು ಕೊಲ್ಲಲು 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿ 2.40 ಲಕ್ಷ ರೂ ಮುಂಗಡವಾಗಿ ನೀಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.

ಯೋಜನೆಯಂತೆ ಆರೋಪಿ ಹಿಮಾಂಶು ಸೇರಿ ಮನೆಗೆ ಹೋಗಿ ಮಹಿಳೆಗೆ ಚಾಕುವಿನಿಂದ ಇರಿದಿದ್ದ. ಪೊಲೀಸರ ದಾರಿ ತಪ್ಪಿಸುವ ಸಲುವಾಗಿ ಮನೆಯಿಂದ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದರು. ಮೊಬೈಲ್​ ಫೋನ್​ಗಳನ್ನು ಕೂಡ ಕದ್ದಿದ್ದರು. ಕೊಲೆ ನಡೆದಾಗ ಅಮಿತ್ ಮನೆಯಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ಎಸ್‌ಕೆ ಗುಪ್ತಾ, ಅವರ ಮಗ ಅಮಿತ್ ಮತ್ತು ಇಬ್ಬರು ಗುತ್ತಿಗೆ ಹಂತಕರಾದ ವಿಪಿನ್ ಸೇಥಿ (45) ಮತ್ತು ಹಿಮಾಂಶು (20) ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಅವರು ಅಪರಾಧದಲ್ಲಿ ತಮ್ಮ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಅಪರಾಧಕ್ಕೆ ಬಳಸಿದ ಫೋನ್‌ಗಳು, ರಕ್ತಸಿಕ್ತ ಬಟ್ಟೆಗಳು ಮತ್ತು ಸ್ಕೂಟರ್‌ಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ