AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: May 18, 2023 | 8:44 AM

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್ ಪ್ರದೇಶದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆ ಮೃತಪಟ್ಟಿರುವುದು ಕಂಡು ಬಂದಿದೆ. ಆಕೆಯ ದೇಹದ ಮೇಲೆ ಅನೇಕ ಇರಿತದ ಗಾಯಗಳಿದ್ದವು.

ವಿಚಾರಣೆ ವೇಳೆ ಸಂತ್ರಸ್ತೆ ಕಳೆದ ವರ್ಷ ನವೆಂಬರ್‌ನಲ್ಲಿ ಎಸ್‌ಕೆ ಗುಪ್ತಾ ಅವರನ್ನು ವಿವಾಹವಾಗಿದ್ದರು ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಪ್ತಾ ಅವರ ಮಗ ವಿಶೇಷ ಚೇತನರಾಗಿದ್ದು ಅವರನ್ನು ನೋಡಿಕೊಳ್ಳುವ ಉದ್ದೇಶದಿಂದ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ ಕೆಲವೇ ದಿನಗಳಲ್ಲಿ ವಿಚ್ಛೇದನ ಬೇಕು ಎಂದು ಕೇಳಿದ್ದಳು, ಜತೆಗೆ 1 ಕೋಟಿ ರೂ ಪರಿಹಾರವೂ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು.

ಮತ್ತಷ್ಟು ಓದಿ: ಕೌಟುಂಬಿಕ ಕಲಹ ಹಿನ್ನಲೆ ಪತಿಯಿಂದಲೇ ಪತ್ನಿಯ ಕೊಲೆ; ಮದುವೆ ಮನೆಯಲ್ಲೀಗ ಸೂತಕದ ಛಾಯೆ

ಹಾಗಾಗಿ ಪತ್ನಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು.ಪೊಲೀಸರ ಪ್ರಕಾರ, ಗುಪ್ತಾ ತನ್ನ ಮಗ ಅಮಿತ್‌ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆರೋಪಿ ವಿಪಿನ್‌ನೊಂದಿಗೆ ಸಂಪರ್ಕ ಹೊಂದಿದ್ದ, ಪತ್ನಿಯನ್ನು ಕೊಲ್ಲಲು 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿ 2.40 ಲಕ್ಷ ರೂ ಮುಂಗಡವಾಗಿ ನೀಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.

ಯೋಜನೆಯಂತೆ ಆರೋಪಿ ಹಿಮಾಂಶು ಸೇರಿ ಮನೆಗೆ ಹೋಗಿ ಮಹಿಳೆಗೆ ಚಾಕುವಿನಿಂದ ಇರಿದಿದ್ದ. ಪೊಲೀಸರ ದಾರಿ ತಪ್ಪಿಸುವ ಸಲುವಾಗಿ ಮನೆಯಿಂದ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದರು. ಮೊಬೈಲ್​ ಫೋನ್​ಗಳನ್ನು ಕೂಡ ಕದ್ದಿದ್ದರು. ಕೊಲೆ ನಡೆದಾಗ ಅಮಿತ್ ಮನೆಯಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ಎಸ್‌ಕೆ ಗುಪ್ತಾ, ಅವರ ಮಗ ಅಮಿತ್ ಮತ್ತು ಇಬ್ಬರು ಗುತ್ತಿಗೆ ಹಂತಕರಾದ ವಿಪಿನ್ ಸೇಥಿ (45) ಮತ್ತು ಹಿಮಾಂಶು (20) ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಅವರು ಅಪರಾಧದಲ್ಲಿ ತಮ್ಮ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಅಪರಾಧಕ್ಕೆ ಬಳಸಿದ ಫೋನ್‌ಗಳು, ರಕ್ತಸಿಕ್ತ ಬಟ್ಟೆಗಳು ಮತ್ತು ಸ್ಕೂಟರ್‌ಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ