AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.

Delhi Crime: ಪ್ರೇಯಸಿಯ ಪತಿಯ ಕತ್ತು ಸೀಳಿ ಕೊಲೆ ಮಾಡಿ ದೇಹವ ಸುಟ್ಟು ಹಾಕಿದ ಯುವಕ
ಬಂಧನ
TV9 Web
| Edited By: |

Updated on: Jan 08, 2023 | 2:18 PM

Share

ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ 27 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಪತಿಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ ಮೃತದೇಹವನ್ನು ಸುಟ್ಟುಹಾಕಿರುವ ಘಟನೆ ವರದಿಯಾಗಿದೆ.ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶುದ್ದೀನ್ ಎಂದು ಗುರುತಿಸಲಾಗಿದೆ. ಮುನಿಶುದ್ದೀನ್ ತನ್ನ ಸ್ನೇಹಿತನಾಗಿದ್ದ ಮೃತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ವ್ಯಕ್ತಿಯ ಶವ ಸುಟ್ಟ ಸ್ಥಿತಿಯಲ್ಲಿ ಇರುವುದು ತಿಳಿದುಬಂದಿತ್ತು. ದೇಹವು ಸುಮಾರು 90 ರಷ್ಟು ಸುಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಲ್ಲದೆ ಸಮೀಪದ ಪೊದೆ ಬಳಿಕ ರಕ್ತ ಪತ್ತೆಯಾಗಿದೆ, ಸ್ಥಳದಿಂದ ಪೇಪರ್ ಕಟರ್ ಹಾಗೂ ಬೆಂಕಿಕಡ್ಡಿಯನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಮೃತನ ಜೊತೆಯಲ್ಲಿ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಆರೋಪಿಗಳು ರೋಹಿಣಿ ಸೆಕ್ಟರ್ 16 ಬವಾನಾ ನಾಲೆಯ ಬಳಿ ಬರುತ್ತಾರೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು, ಇದೀಗ ಮುನಿಶುದ್ದೀನ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಮುನಿಶುದ್ದೀನ್ ತನ್ನ ಸ್ನೇಹಿತ ರಶೀದ್ ಮನೆಗೆ ಆಗಾಗ ಹೋಗುತ್ತಿದ್ದ, ಅಲ್ಲಿಯೇ ಸ್ನೇಹಿತನ ಪತ್ನಿ ಹಾಗೂ ಆತನ ನಡುವೆ ಪ್ರೀತಿಯಾಗಿತ್ತು. ಕಳೆದ 10-15 ದಿನಗಳಿಂದ ಮುನಿಶುದ್ದೀನ್​ಗೆ ರಶೀದ್​ನನ್ನು ದೂರ ಮಾಡುವಂತೆ ಒತ್ತಡ ಹೇರುತ್ತಿದ್ದಳು. ಹೀಗಅಗಿ ಮುನಿಶುದ್ದೀನ್ ರಶೀದ್​ನನ್ನು ರಾಮ್​ಘಾಟ್​ಗೆ ಕರೆದೊಯ್ದಿದ್ದ, ಅಲ್ಲಿ ಇಬ್ಬರೂ ಮದ್ಯ ಸೇವಿಸಿದ್ದರು. ಆ ಸಂದರ್ಭದಲ್ಲಿ ರಶೀದ್​ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!