AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಟ್ಯೂಟರ್​ನ ಕತ್ತು ಸೀಳಿ ಹತ್ಯೆ ಮಾಡಿದ ಬಾಲಕ

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಬಾಲಕನೊಬ್ಬ ಟ್ಯೂಟರ್​ನ ಕತ್ತು ಸೀಳಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು ಬಾಲಕನನ್ನು ಬಂಧಿಸಲಾಗಿದೆ. ಆಗ್ನೇಯ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ ಬುಧವಾರ ಈ ಕೊಲೆ ನಡೆದಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಅಪ್ರಾಪ್ತ ಬಾಲಕನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಟ್ಯೂಟರ್​ನ ಕತ್ತು ಸೀಳಿ ಹತ್ಯೆ ಮಾಡಿದ ಬಾಲಕ
ಕ್ರೈಂ
ನಯನಾ ರಾಜೀವ್
|

Updated on: Sep 03, 2023 | 9:09 AM

Share

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಬಾಲಕನೊಬ್ಬ ಟ್ಯೂಟರ್​ನ ಕತ್ತು ಸೀಳಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು ಬಾಲಕನನ್ನು ಬಂಧಿಸಲಾಗಿದೆ. ಆಗ್ನೇಯ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ ಬುಧವಾರ ಈ ಕೊಲೆ ನಡೆದಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಅಪ್ರಾಪ್ತ ಬಾಲಕನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದನ್ನು ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿದ್ದು, ಅದನ್ನು ಪೊಲೀಸರಿಗೆ ಒಪ್ಪಿಸಿದ್ದು, ತನಿಖೆ ನಡೆಯುತ್ತಿದೆ. ಮೃತ ಟ್ಯೂಟರ್ ಖಾಸಗಿ ಟ್ಯುಟೋರಿಯಲ್​ನಲ್ಲಿ ಶಿಕ್ಷಕರಾಗಿದ್ದರು, ಜಾಕಿರ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದರು, ಅವರು ಅವಿವಾಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮಿಯಾ ನಗರದಲ್ಲಿ ಮಧ್ಯಾಹ್ನ 2.15ರ ಸುಮಾರಿಗೆ ಪೊಲೀಸರು ರಕ್ತಸಿಕ್ತವಾದ ಮೃತದೇಹವನ್ನು ವಶಪಡಿಸಿಕೊಂಡರು. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾಗ ಮೊದಲು ಕೋಟೆಯಲ್ಲಿ ವ್ಯಕ್ತಿ ರಕ್ತದ ಮಡುವಿನಲ್ಲಿದ್ದುದ್ದನ್ನು ಗಮನಿಸಿದರು, ಕುತ್ತಿಗೆಯನ್ನು ಸೀಳಲಾಗಿತ್ತು.

ಮತ್ತಷ್ಟು ಓದಿ: ಶಾಲಾ ಬಸ್​ನಲ್ಲಿ 6 ವರ್ಷದ ಬಾಲಕಿ ಮೇಲೆ ಹಿರಿಯ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ

ತನಿಖೆ ವೇಳೆ ಬಾಲಕನೇ ಕೊಲೆ ಮಾಡಿರುವುದು ತಿಳಿದುಬಂದಿದೆ, ಟ್ಯೂಟರ್ ಕೆಲವು ದಿನಗಳ ಹಿಂದೆ ಉದ್ಯಾನದಲ್ಲಿ ಬಾಲಕನನ್ನು ಬೇಟಿಯಾಗಿದ್ದರು. ಬಾಲಕನಿಗೆ ತಿಂಡಿ ತಿನಿಸುಗಳನ್ನು ಕೊಡಿಸಿ, ಮನೆಗೆ ಕರೆದಿದ್ದ, ಮನೆಗೆ ಹೋದಾಗ ಆತ ಕೆಲವು ವಿಡಿಯೋಗಳನ್ನು ರೆಕಾರ್ಡ್​ ಮಾಡಿದ್ದ, ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ವಿಡಿಯೋವನ್ನು ಬಹಿರಂಗಗೊಳಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದ.

ಬೆದರಿಕೆ ಪದೇ ಪದೇ ಲೈಂಗಿಕ ದೌರ್ಜನ್ಯದಿಂದ ಬೇಸತ್ತ ಬಾಲಕ ಅವಕಾಶ ಸಿಕ್ಕಾಗ ವ್ಯಕ್ತಿಯನ್ನು ಕೊಲ್ಲಬೇಕೆಂದು ನಿರ್ಧರಿಸಿದ್ದ. ಹರಿತವಾದ ಪೇಪರ್​ ಕಟರ್​ನಲ್ಲಿ ಕುತ್ತಿಗೆ ಸೀಳಿದ್ದ, ಬಳಿಕ ವ್ಯಕ್ತಿಯ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದ. ಇದೀಗ ಬಾಲಕನನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ