AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಟ್ಯೂಟರ್​ನ ಕತ್ತು ಸೀಳಿ ಹತ್ಯೆ ಮಾಡಿದ ಬಾಲಕ

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಬಾಲಕನೊಬ್ಬ ಟ್ಯೂಟರ್​ನ ಕತ್ತು ಸೀಳಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು ಬಾಲಕನನ್ನು ಬಂಧಿಸಲಾಗಿದೆ. ಆಗ್ನೇಯ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ ಬುಧವಾರ ಈ ಕೊಲೆ ನಡೆದಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಅಪ್ರಾಪ್ತ ಬಾಲಕನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಟ್ಯೂಟರ್​ನ ಕತ್ತು ಸೀಳಿ ಹತ್ಯೆ ಮಾಡಿದ ಬಾಲಕ
ಕ್ರೈಂ
ನಯನಾ ರಾಜೀವ್
|

Updated on: Sep 03, 2023 | 9:09 AM

Share

ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಬಾಲಕನೊಬ್ಬ ಟ್ಯೂಟರ್​ನ ಕತ್ತು ಸೀಳಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು ಬಾಲಕನನ್ನು ಬಂಧಿಸಲಾಗಿದೆ. ಆಗ್ನೇಯ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ ಬುಧವಾರ ಈ ಕೊಲೆ ನಡೆದಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರುವ ಅಪ್ರಾಪ್ತ ಬಾಲಕನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದನ್ನು ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿದ್ದು, ಅದನ್ನು ಪೊಲೀಸರಿಗೆ ಒಪ್ಪಿಸಿದ್ದು, ತನಿಖೆ ನಡೆಯುತ್ತಿದೆ. ಮೃತ ಟ್ಯೂಟರ್ ಖಾಸಗಿ ಟ್ಯುಟೋರಿಯಲ್​ನಲ್ಲಿ ಶಿಕ್ಷಕರಾಗಿದ್ದರು, ಜಾಕಿರ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದರು, ಅವರು ಅವಿವಾಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಮಿಯಾ ನಗರದಲ್ಲಿ ಮಧ್ಯಾಹ್ನ 2.15ರ ಸುಮಾರಿಗೆ ಪೊಲೀಸರು ರಕ್ತಸಿಕ್ತವಾದ ಮೃತದೇಹವನ್ನು ವಶಪಡಿಸಿಕೊಂಡರು. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾಗ ಮೊದಲು ಕೋಟೆಯಲ್ಲಿ ವ್ಯಕ್ತಿ ರಕ್ತದ ಮಡುವಿನಲ್ಲಿದ್ದುದ್ದನ್ನು ಗಮನಿಸಿದರು, ಕುತ್ತಿಗೆಯನ್ನು ಸೀಳಲಾಗಿತ್ತು.

ಮತ್ತಷ್ಟು ಓದಿ: ಶಾಲಾ ಬಸ್​ನಲ್ಲಿ 6 ವರ್ಷದ ಬಾಲಕಿ ಮೇಲೆ ಹಿರಿಯ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ

ತನಿಖೆ ವೇಳೆ ಬಾಲಕನೇ ಕೊಲೆ ಮಾಡಿರುವುದು ತಿಳಿದುಬಂದಿದೆ, ಟ್ಯೂಟರ್ ಕೆಲವು ದಿನಗಳ ಹಿಂದೆ ಉದ್ಯಾನದಲ್ಲಿ ಬಾಲಕನನ್ನು ಬೇಟಿಯಾಗಿದ್ದರು. ಬಾಲಕನಿಗೆ ತಿಂಡಿ ತಿನಿಸುಗಳನ್ನು ಕೊಡಿಸಿ, ಮನೆಗೆ ಕರೆದಿದ್ದ, ಮನೆಗೆ ಹೋದಾಗ ಆತ ಕೆಲವು ವಿಡಿಯೋಗಳನ್ನು ರೆಕಾರ್ಡ್​ ಮಾಡಿದ್ದ, ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ವಿಡಿಯೋವನ್ನು ಬಹಿರಂಗಗೊಳಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದ.

ಬೆದರಿಕೆ ಪದೇ ಪದೇ ಲೈಂಗಿಕ ದೌರ್ಜನ್ಯದಿಂದ ಬೇಸತ್ತ ಬಾಲಕ ಅವಕಾಶ ಸಿಕ್ಕಾಗ ವ್ಯಕ್ತಿಯನ್ನು ಕೊಲ್ಲಬೇಕೆಂದು ನಿರ್ಧರಿಸಿದ್ದ. ಹರಿತವಾದ ಪೇಪರ್​ ಕಟರ್​ನಲ್ಲಿ ಕುತ್ತಿಗೆ ಸೀಳಿದ್ದ, ಬಳಿಕ ವ್ಯಕ್ತಿಯ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದ. ಇದೀಗ ಬಾಲಕನನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ