Delhi Crime News: 55 ವರ್ಷದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಮಗಳ ಮಾಜಿ ಪ್ರಿಯಕರ

55 ವರ್ಷದ ಮಹಿಳೆಯನ್ನು ಆಕೆಯ ಮಗಳ ಮಾಜಿ ಗೆಳೆಯ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ದೆಹಲಿಯ ಸರಾಯ್ ರೋಹಿಲ್ಲಾ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Delhi Crime News: 55 ವರ್ಷದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಮಗಳ ಮಾಜಿ ಪ್ರಿಯಕರ
ಸಾಂದರ್ಭಿಕ ಚಿತ್ರ
Follow us
|

Updated on: Jul 06, 2023 | 10:47 AM

ದೆಹಲಿ: 55 ವರ್ಷದ ಮಹಿಳೆಯನ್ನು ಆಕೆಯ ಮಗಳ ಮಾಜಿ ಗೆಳೆಯ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ದೆಹಲಿಯ ಸರಾಯ್ ರೋಹಿಲ್ಲಾ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ಕುರಿತು ಪೊಲೀಸರಿಗೆ ಅಂದು ಸಂಜೆ 4 ಗಂಟೆಗೆ ಮಾಹಿತಿ ನೀಡಲಾಗಿದ್ದು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಡಿಕ್ಕಿ ಕೊಂದಿರುವ ಬಗ್ಗೆ ಪತ್ತೆಯಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ. ಸಾವನ್ನಪಿರುವ ಮಹಿಳೆಯನ್ನು ಪೂನಂ ಎಂದು ಗುರುತಿಸಲಾಗಿದೆ, ಪೂನಂ ಅವರ ಮಗಳ ಮಾಜಿ ಗೆಳೆಯ ಅಂಕಿತ್​ ಕೌಶಿಕ್​ ಕೊಂದಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ. ಪೂನಂ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಇದೀಗ ಅವರ ದೇಹವನ್ನು ಮನೆಯವರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ. ಅಂಕಿತ್​ ಕೌಶಿಕ್ ಎಂಬ ಯುವಕನನ್ನು ಹುಡುಕಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:Crime News ಅಪರಾಧ ಸುದ್ದಿ ರೌಂಡಪ್: ರೈಲಿಗೆ ತಲೆ ಕೊಟ್ಟ ಪ್ರೇಮಿಗಳು, ಡ್ರಗ್ಸ್ ಪೆಡ್ಲರ್ ಅರೆಸ್ಟ್

ಇನ್ನೂ ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಪೂನಂ ಅವರು ಮಗಳು ಮತ್ತು ಅಂಕಿತ್​ ಕೌಶಿಕ್ ಪ್ರೀತಿಸುತ್ತಿದ್ದು, ನಂತರ ಇಬ್ಬರು ದೂರವಾಗಿದ್ದಾರೆ, ನೀನು ನೀಡಿದ ಗಿಫ್ಟ್​​​ನ್ನು ತೆಗೆದುಕೊಂಡು ಹೋಗುವಂತೆ ಅಂಕಿತ್​ ಕೌಶಿಕ್​​ಗೆ ಪೂನಂ ಅವರ ಮಗಳು ತಿಳಿಸಿದ್ದಾಳೆ. ಅಂಕಿತ್​ ಕೌಶಿಕ್ ಪೂನಂ ಅವರ ಮನೆಗೆ ಬಂದಾಗ ನಿನ್ನ ಗಿಫ್ಟ್ ತೆಗೆದುಕೊಂಡು ಹೋಗು ಎಂದು ಅವಾಜ್​​ ಹಾಕಿದ್ದಾಳೆ, ಇಬ್ಬರ ನಡುವೆ ಮಾತು ಚಕಮಕಿ ನಡೆದಿದೆ, ಇದರಿಂದ ಕೋಪಗೊಂಡ ಅಂಕಿತ್​ ಕೌಶಿಕ್ ಪಿಸ್ತೂಲ್​​ ತೆಗೆದು ಗುಂಡು ಹಾರಿಸಲು ಮುಂದಾಗಿದ್ದಾನೆ.

ಈ ಸಮಯದಲ್ಲಿ ಆಕೆಯ ತಾಯಿ ಪೂನಂ ಕೂಡ ಪಕ್ಕದಲ್ಲಿ ನಿಂತಿದ್ದರು, ಇಬ್ಬರ ಜಗಳದ ನಡುವೆ ತಾಯಿ ಮಧ್ಯೆ ಬಂದು ಜಗಳ ನಿಲ್ಲಿಸಲು ಮುಂದಾಗಿದ್ದಾರೆ. ಆದರೆ ಅಂಕಿತ್​ ಕೌಶಿಕ್, ಪೂನಂ ತಲೆಗೆ ಗುಂಡು ಹಾರಿಸಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡ ರಚನೆ ಮಾಡಲಾಗಿದೆ, ಖಂಡಿತ ಆತನನ್ನು ಪತ್ತೆ ಮಾಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ