AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್​ನಲ್ಲಿ ಫ್ಲಶ್ ಮಾಡಿಲ್ಲವೆಂದು ಶುರುವಾದ ಮನೆ ಬಾಡಿಗೆದಾರರ ಜಗಳ ಕೊಲೆಯಲ್ಲಿ ಅಂತ್ಯ!

ದೆಹಲಿಯಲ್ಲಿ ಟಾಯ್ಲೆಟ್ ಫ್ಲಶಿಂಗ್ ವಿಚಾರವಾಗಿ ನಡೆದ ಬಾಡಿಗೆದಾರರ ನಡುವೆ ಜಗಳ ಮಾರಣಾಂತಿಕವಾಗಿ ಅಂತ್ಯಗೊಂಡಿದೆ. ಈ ಜಗಳದ ಬಳಿಕ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಟಾಯ್ಲೆಟ್​ನಲ್ಲಿ ಫ್ಲಶ್ ಮಾಡಿಲ್ಲವೆಂದು ಶುರುವಾದ ಮನೆ ಬಾಡಿಗೆದಾರರ ಜಗಳ ಕೊಲೆಯಲ್ಲಿ ಅಂತ್ಯ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 07, 2024 | 4:45 PM

Share

ನವದೆಹಲಿ: ಬಾಡಿಗೆದಾರರು ಬಳಸುತ್ತಿದ್ದ ಕಾಮನ್ ಬಾತ್​ರೂಂನಲ್ಲಿದ್ದ ಟಾಯ್ಲೆಟ್​ನಲ್ಲಿ ಸರಿಯಾಗಿ ಫ್ಲಶ್ ಮಾಡಿಲ್ಲ ಎಂದು ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಡಿದಾರರಾಗಿದ್ದ 18 ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಈ ಘಟನೆಯಲ್ಲಿ ಅವನ ಸಹೋದರ ಕೂಡ ಗಾಯಗೊಂಡಿದ್ದಾನೆ.

ಶುಕ್ರವಾರ ರಾತ್ರಿ ಸುಧೀರ್ ಎಂಬ ಯುವಕನ ಎದೆ, ತಲೆ ಮತ್ತು ಮುಖದ ಮೇಲೆ ಅಡಿಗೆಗೆ ಬಳಸುವ ಚಾಕುವಿನಿಂದ ಇರಿಯಲಾಗಿತ್ತು. ಆತನಿಗೆ ಹಲವು ಕಡೆ ಇರಿತದ ಗಾಯಗಳಾಗಿದ್ದುದರಿಂದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ರಾತ್ರಿಯೇ ಆತ ಮೃತಪಟ್ಟನು. ಅವರ ಸಹೋದರ ಪ್ರೇಮ್ (22) ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾ.ಎ ಅವನ ಸ್ನೇಹಿತ ಸಾಗರ್ ಎಂಬಾತನನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಇದನ್ನೂ ಓದಿ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಬೆಳಗಾವಿ: ಪ್ರೀತಿಗೆ ಅಡ್ಡಬಂದ ಪ್ರೇಯಸಿಯ ತಾಯಿ, ಮಗನ ಹತ್ಯೆ

ಗೋವಿಂದಪುರಿಯ ಲೇನ್ ಸಂಖ್ಯೆ 6ರಲ್ಲಿನ ಕಟ್ಟಡದ ಮೊದಲ ಮಹಡಿಯಲ್ಲಿ ಬಾಡಿಗೆಗೆ ವಾಸಿಸುವ ಎರಡು ಕುಟುಂಬಗಳ ನಡುವೆ ಶುಕ್ರವಾರ ತಡರಾತ್ರಿ ಜಗಳ ಉಂಟಾಗಿತ್ತು. ಕಾಮನ್​ ಟಾಯ್ಲೆಟ್​ನಲ್ಲಿ ಫ್ಲಶ್ ಮಾಡದಿರುವುದನ್ನು ಸುಧೀರ್ ವಿರೋಧಿಸಿದಾಗ ಸಂಘರ್ಷ ಪ್ರಾರಂಭವಾಯಿತು. ಭೀಕಮ್ ಸಿಂಗ್, ಅವರ ಪತ್ನಿ ಮೀನಾ ಮತ್ತು ಅವರ ಮೂವರು ಮಕ್ಕಳು ಸುಧೀರ್ ಮತ್ತು ಅವನ ಜೊತೆಗಿದ್ದವರ ಮೇಲೆ ಹಲ್ಲೆ ನಡೆಸಿದ್ದರು.

ಆ ಎರಡೂ ಕುಟುಂಬಗಳು ಮೊದಲ ಮಹಡಿಯಲ್ಲಿ ಬಾಡಿಗೆದಾರರಾಗಿದ್ದರು. ಎರಡೂ ಮನೆಗೂ ಒಂದೇ ಬಾತ್​ರೂಂ ಇತ್ತು. ಭೀಕಮ್ ಅವರ ಕಿರಿಯ ಮಗ ಶೌಚಾಲಯವನ್ನು ಬಳಸಿದಾಗ ಸರಿಯಾಗಿ ಫ್ಲಶ್ ಮಾಡಿರಲಿಲ್ಲ. ಅದಾದ ನಂತರ ಸುಧೀರ್ ಟಾಯ್ಲೆಟ್​ಗೆ ಹೋದಾಗ ಫ್ಲಶ್ ಮಾಡದ್ದನ್ನು ಕಂಡು ಕೋಪಗೊಂಡು ಗಲಾಟೆ ಮಾಡಿದ್ದ.

ಇದನ್ನೂ ಓದಿ: ವಾಕಿಂಗ್ ಮುಗಿಸಿ ಬರುತ್ತಿದ್ದ ವ್ಯಕ್ತಿಗೆ ದೆಹಲಿಯಲ್ಲಿ ಗುಂಡಿಕ್ಕಿ ಹತ್ಯೆ; ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಆಕ್ರೋಶ

ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಭೀಕಂ ಮತ್ತು ಆತನ ಕುಟುಂಬವನ್ನು ವಶಕ್ಕೆ ಪಡೆಯಲಾಗಿದೆ. ಸುಧೀರ್ ಮೇಲೆ ರಾಡ್ ಮತ್ತು ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಸುಧೀರ್ ಅವರ ಸೋದರಸಂಬಂಧಿ ಸಂಜೀವ್ ಸಕ್ಸೇನಾ ಅವರು ಇದೇ ಕಟ್ಟಡದಲ್ಲಿ ವಾಸಿಸುತ್ತಿದ್ದು, ಶುಕ್ರವಾರ ರಾತ್ರಿ 11:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಕಟ್ಟಡ ಸಾಮಗ್ರಿಗಳ ಅಂಗಡಿಯಲ್ಲಿ ಕೆಲಸ ಮಾಡುವ ಭೀಕಮ್ ಸಿಂಗ್ ಅವರು ಸುಮಾರು 45 ದಿನಗಳ ಹಿಂದೆ ಈ ಕಟ್ಟಡಕ್ಕೆ ಬಾಡಿಗೆಗೆ ಬಂದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್