Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್​ನಲ್ಲಿ ಫ್ಲಶ್ ಮಾಡಿಲ್ಲವೆಂದು ಶುರುವಾದ ಮನೆ ಬಾಡಿಗೆದಾರರ ಜಗಳ ಕೊಲೆಯಲ್ಲಿ ಅಂತ್ಯ!

ದೆಹಲಿಯಲ್ಲಿ ಟಾಯ್ಲೆಟ್ ಫ್ಲಶಿಂಗ್ ವಿಚಾರವಾಗಿ ನಡೆದ ಬಾಡಿಗೆದಾರರ ನಡುವೆ ಜಗಳ ಮಾರಣಾಂತಿಕವಾಗಿ ಅಂತ್ಯಗೊಂಡಿದೆ. ಈ ಜಗಳದ ಬಳಿಕ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಟಾಯ್ಲೆಟ್​ನಲ್ಲಿ ಫ್ಲಶ್ ಮಾಡಿಲ್ಲವೆಂದು ಶುರುವಾದ ಮನೆ ಬಾಡಿಗೆದಾರರ ಜಗಳ ಕೊಲೆಯಲ್ಲಿ ಅಂತ್ಯ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Dec 07, 2024 | 4:45 PM

ನವದೆಹಲಿ: ಬಾಡಿಗೆದಾರರು ಬಳಸುತ್ತಿದ್ದ ಕಾಮನ್ ಬಾತ್​ರೂಂನಲ್ಲಿದ್ದ ಟಾಯ್ಲೆಟ್​ನಲ್ಲಿ ಸರಿಯಾಗಿ ಫ್ಲಶ್ ಮಾಡಿಲ್ಲ ಎಂದು ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಡಿದಾರರಾಗಿದ್ದ 18 ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಈ ಘಟನೆಯಲ್ಲಿ ಅವನ ಸಹೋದರ ಕೂಡ ಗಾಯಗೊಂಡಿದ್ದಾನೆ.

ಶುಕ್ರವಾರ ರಾತ್ರಿ ಸುಧೀರ್ ಎಂಬ ಯುವಕನ ಎದೆ, ತಲೆ ಮತ್ತು ಮುಖದ ಮೇಲೆ ಅಡಿಗೆಗೆ ಬಳಸುವ ಚಾಕುವಿನಿಂದ ಇರಿಯಲಾಗಿತ್ತು. ಆತನಿಗೆ ಹಲವು ಕಡೆ ಇರಿತದ ಗಾಯಗಳಾಗಿದ್ದುದರಿಂದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ರಾತ್ರಿಯೇ ಆತ ಮೃತಪಟ್ಟನು. ಅವರ ಸಹೋದರ ಪ್ರೇಮ್ (22) ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾ.ಎ ಅವನ ಸ್ನೇಹಿತ ಸಾಗರ್ ಎಂಬಾತನನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಇದನ್ನೂ ಓದಿ: ಜೋಡಿ ಕೊಲೆಗೆ ಬೆಚ್ಚಿಬಿದ್ದ ಬೆಳಗಾವಿ: ಪ್ರೀತಿಗೆ ಅಡ್ಡಬಂದ ಪ್ರೇಯಸಿಯ ತಾಯಿ, ಮಗನ ಹತ್ಯೆ

ಗೋವಿಂದಪುರಿಯ ಲೇನ್ ಸಂಖ್ಯೆ 6ರಲ್ಲಿನ ಕಟ್ಟಡದ ಮೊದಲ ಮಹಡಿಯಲ್ಲಿ ಬಾಡಿಗೆಗೆ ವಾಸಿಸುವ ಎರಡು ಕುಟುಂಬಗಳ ನಡುವೆ ಶುಕ್ರವಾರ ತಡರಾತ್ರಿ ಜಗಳ ಉಂಟಾಗಿತ್ತು. ಕಾಮನ್​ ಟಾಯ್ಲೆಟ್​ನಲ್ಲಿ ಫ್ಲಶ್ ಮಾಡದಿರುವುದನ್ನು ಸುಧೀರ್ ವಿರೋಧಿಸಿದಾಗ ಸಂಘರ್ಷ ಪ್ರಾರಂಭವಾಯಿತು. ಭೀಕಮ್ ಸಿಂಗ್, ಅವರ ಪತ್ನಿ ಮೀನಾ ಮತ್ತು ಅವರ ಮೂವರು ಮಕ್ಕಳು ಸುಧೀರ್ ಮತ್ತು ಅವನ ಜೊತೆಗಿದ್ದವರ ಮೇಲೆ ಹಲ್ಲೆ ನಡೆಸಿದ್ದರು.

ಆ ಎರಡೂ ಕುಟುಂಬಗಳು ಮೊದಲ ಮಹಡಿಯಲ್ಲಿ ಬಾಡಿಗೆದಾರರಾಗಿದ್ದರು. ಎರಡೂ ಮನೆಗೂ ಒಂದೇ ಬಾತ್​ರೂಂ ಇತ್ತು. ಭೀಕಮ್ ಅವರ ಕಿರಿಯ ಮಗ ಶೌಚಾಲಯವನ್ನು ಬಳಸಿದಾಗ ಸರಿಯಾಗಿ ಫ್ಲಶ್ ಮಾಡಿರಲಿಲ್ಲ. ಅದಾದ ನಂತರ ಸುಧೀರ್ ಟಾಯ್ಲೆಟ್​ಗೆ ಹೋದಾಗ ಫ್ಲಶ್ ಮಾಡದ್ದನ್ನು ಕಂಡು ಕೋಪಗೊಂಡು ಗಲಾಟೆ ಮಾಡಿದ್ದ.

ಇದನ್ನೂ ಓದಿ: ವಾಕಿಂಗ್ ಮುಗಿಸಿ ಬರುತ್ತಿದ್ದ ವ್ಯಕ್ತಿಗೆ ದೆಹಲಿಯಲ್ಲಿ ಗುಂಡಿಕ್ಕಿ ಹತ್ಯೆ; ಬಿಜೆಪಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಆಕ್ರೋಶ

ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಭೀಕಂ ಮತ್ತು ಆತನ ಕುಟುಂಬವನ್ನು ವಶಕ್ಕೆ ಪಡೆಯಲಾಗಿದೆ. ಸುಧೀರ್ ಮೇಲೆ ರಾಡ್ ಮತ್ತು ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಸುಧೀರ್ ಅವರ ಸೋದರಸಂಬಂಧಿ ಸಂಜೀವ್ ಸಕ್ಸೇನಾ ಅವರು ಇದೇ ಕಟ್ಟಡದಲ್ಲಿ ವಾಸಿಸುತ್ತಿದ್ದು, ಶುಕ್ರವಾರ ರಾತ್ರಿ 11:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಕಟ್ಟಡ ಸಾಮಗ್ರಿಗಳ ಅಂಗಡಿಯಲ್ಲಿ ಕೆಲಸ ಮಾಡುವ ಭೀಕಮ್ ಸಿಂಗ್ ಅವರು ಸುಮಾರು 45 ದಿನಗಳ ಹಿಂದೆ ಈ ಕಟ್ಟಡಕ್ಕೆ ಬಾಡಿಗೆಗೆ ಬಂದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು