AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ

ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದರು ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.

ದೆಹಲಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Apr 05, 2024 | 9:48 AM

Share

ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದರು ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ರಾತ್ರಿ ಪೊಲೀಸರಿಗೆ ಕರೆ ಬಂದಿದೆ, ಮಹಿಳೆಯ ತಂದೆ ತನ್ನ ಮಗಳನ್ನು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.

ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಮನೆಗೆ ಹೋಗಿದ್ದಾರೆ. ಫ್ಲಾಟ್​ಗೆ ತೆರಳಿದಾಗ ಆಕೆಯ ಮೃತದೇಹವು ರೂಮಿನ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು ಎಂದಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ತನ್ನ ಮಗಳು ವಿಪಾಲ್ ಜೊತೆ ಬಾಡಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದಳು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಡಿಡಿಯು ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್‌ನ ಸೂರತ್‌ ಮೂಲದ ಆರೋಪಿ ವಿಪಾಲ್‌ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ದೂರುದಾರರ ಹೇಳಿಕೆಯ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸ್ ತಂಡಗಳು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿವೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ