AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕ್ಯಾಬ್​ನಲ್ಲಿ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದ ಯುವಕ

ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ತನ್ನ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದಿರುವ ಘಟನೆ ದೆಹಲಿಯ ಲಾಡೋ ಸರಾಯ್ ಪ್ರದೇಶದಲ್ಲಿ ನಡೆದಿದೆ. ಇಂಟರ್​ವ್ಯೂ ಇತ್ತೆಂದು ಬೆಳಗ್ಗೆ 6.30ಕ್ಕೆ ಮನೆ ಬಿಟ್ಟಿದ್ದಳು, ಆರೋಪಿಯನ್ನು ಆಕೆ ಪ್ರೀತಿಸುತ್ತಿದ್ದಳು, ಕೆಲವು ದಿನದಿಂದ ಆತನಿಂದ ದೂರವಾಗಲು ಪ್ರಯತ್ನಿಸುತ್ತಿದ್ದಳು. ಈ ಕೋಪದಿಂದ ಮಹಿಳೆಯ ಮುಖ, ತೊಡೆ ಸೇರಿದಂತೆ ಹಲವೆಡೆ 13 ಬಾರಿ ಇರಿದಿದ್ದಾನೆ. ಆಕೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ದೆಹಲಿ: ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕ್ಯಾಬ್​ನಲ್ಲಿ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದ ಯುವಕ
ಪೊಲೀಸ್Image Credit source: India TV
ನಯನಾ ರಾಜೀವ್
|

Updated on: Oct 13, 2023 | 11:28 AM

Share

ಪ್ರೀತಿ ಮುಂದುವರೆಸಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ತನ್ನ ಗೆಳತಿಗೆ 13 ಬಾರಿ ಚಾಕುವಿನಿಂದ ಇರಿದಿರುವ ಘಟನೆ ದೆಹಲಿಯ ಲಾಡೋ ಸರಾಯ್ ಪ್ರದೇಶದಲ್ಲಿ ನಡೆದಿದೆ. ಇಂಟರ್​ವ್ಯೂ ಇತ್ತೆಂದು ಬೆಳಗ್ಗೆ 6.30ಕ್ಕೆ ಮನೆ ಬಿಟ್ಟಿದ್ದಳು, ಆರೋಪಿಯನ್ನು ಆಕೆ ಪ್ರೀತಿಸುತ್ತಿದ್ದಳು, ಕೆಲವು ದಿನದಿಂದ ಆತನಿಂದ ದೂರವಾಗಲು ಪ್ರಯತ್ನಿಸುತ್ತಿದ್ದಳು. ಈ ಕೋಪದಿಂದ ಮಹಿಳೆಯ ಮುಖ, ತೊಡೆ ಸೇರಿದಂತೆ ಹಲವೆಡೆ 13 ಬಾರಿ ಇರಿದಿದ್ದಾನೆ. ಆಕೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಯುವತಿಯ ತಾಯಿ ಶಕುಂತಲಾ ಮಾತನಾಡಿ, ಮಗಳು ಲಜಪತ್​ನಗರದಲ್ಲಿ ಇಂಟರ್​ವ್ಯೂಗೆಂದು ಹೋಗುತ್ತಿದ್ದಳು, ಕ್ಯಾಬ್​ನಲ್ಲಿ ಯುವಕ ಚೂರಿಯಿಂದ ಇರಿದಿರುವುದಾಗಿ ತಿಳಿಸಿದ್ದಾರೆ. ಆಫೀಸ್​ಗೆ ಹೋಗಲು ತಡವಾಗುತ್ತಿದೆ, ಮತ್ತೆ ನಿನ್ನೊಂದಿಗೆ ಮಾತನಾಡಲು ನನಗೆ ಇಷ್ಟವೂ ಇಲ್ಲ ಎಂದು ಎಷ್ಟೇ ಹೇಳಿದರೂ ಕ್ಯಾಬ್​ನಲ್ಲಿ ಕುಳಿತುಕೊಳ್ಳುವಂತೆ ಆಕೆಗೆ ಒತ್ತಾಯಿಸಿದ್ದ, ಕುಳಿತುಕೊಂಡ ಬಳಿಕ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಕಳೆದ 2 ವರ್ಷಗಳಿಂದ ಪ್ರೀತಿ ಮಾಡುವಂತೆ ಆಕೆಯನ್ನು ಪೀಡಿಸುತ್ತಿದ್ದ ಎಂದು ದೂರಿದ್ದಾಳೆ.

ಆಕೆ ಆ ಯುವಕನನ್ನು ಪ್ರೀತಿ ಮಾಡಿಲ್ಲ, ಮನೆಯಲ್ಲಿ ತಂದೆ ಇಲ್ಲದ ಕಾರಣ ನಮ್ಮೆಲ್ಲರ ಜವಾಬ್ದಾರಿ ಆಕೆಯ ಮೇಲಿದೆ, ಕೋರ್ಟ್​ ಮ್ಯಾರೇಜ್ ಆಗೋಣ ಎಂದು ಆತ ಕೇಳಿದ್ದ ಆದರೆ ಆಕೆ ಒಪ್ಪಿರಲಿಲ್ಲ. ಕ್ಯಾಬ್ ಚಾಲಕನೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂರು ವರ್ಷಗಳ ಹಿಂದೆ ಇಬ್ಬರು ಒಂದೇ ಆಫೀಸ್​ನಲ್ಲಿ ಕೆಲಸ ಮಾಡುತ್ತಿದ್ದಾಗ ಭೇಟಿಯಾಗಿದ್ದರು.

ಮತ್ತಷ್ಟು ಓದಿ: ಕ್ಯಾಬ್​ ಬುಕ್ ಮಾಡಿ ರದ್ದುಗೊಳಿಸಿದ್ದಕ್ಕೆ ಮಹಿಳೆಯ ವಾಟ್ಸಪ್​ಗೆ ನಗ್ನ ವಿಡಿಯೋ, ಫೋಟೋಸ್ ಕಳುಹಿಸಿದ ಚಾಲಕ

ಅಕ್ಟೋಬರ್ 10 ರಂದು, ಮಹಿಳೆ ತನಗೆ ಪಾಲ್ ಕಿರುಕುಳ ನೀಡುತ್ತಿದ್ದಾನೆ ಎಂದು ಪಿಸಿಆರ್ ಕರೆ ಮಾಡಿದ್ದಳು. ವಾಯುವ್ಯ ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ 16 ವರ್ಷದ ಬಾಲಕಿಯನ್ನು ಯುವಕನೊಬ್ಬ 20 ಕ್ಕೂ ಹೆಚ್ಚು ಬಾರಿ ಇರಿದು ಕೊಂದಿದ್ದ. ಆರೋಪಿ ಸಾಹಿಲ್ (20)ನನ್ನು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಂಧಿಸಲಾಗಿತ್ತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!