AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ವ್ಯಕ್ತಿಯನ್ನು ಕೊಂದು, ಅವರದೇ ಮನೆಯ ಫ್ರಿಡ್ಜ್​ನಲ್ಲಿ ಶವವಿಟ್ಟು ಹೋದ ಹಂತಕರು!

ಫ್ರಿಡ್ಜ್​ನಲ್ಲಿ ಶವ ನೋಡಿ ಗಾಬರಿಯಾದ ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಶವವನ್ನು ರೆಫ್ರಿಜರೇಟರ್‌ನಲ್ಲಿ ತುಂಬಿಟ್ಟಿರುವುದು ಕಂಡುಬಂದಿದೆ.

Murder: ವ್ಯಕ್ತಿಯನ್ನು ಕೊಂದು, ಅವರದೇ ಮನೆಯ ಫ್ರಿಡ್ಜ್​ನಲ್ಲಿ ಶವವಿಟ್ಟು ಹೋದ ಹಂತಕರು!
ಪೊಲೀಸ್Image Credit source: India.com
TV9 Web
| Edited By: |

Updated on: Jul 23, 2022 | 9:19 AM

Share

ನವದೆಹಲಿ: ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ 50 ವರ್ಷದ ವ್ಯಕ್ತಿಯನ್ನು ಕೊಂದು (Murder), ಅವರ ಮನೆಯ ಫ್ರಿಡ್ಜ್​​​ನಲ್ಲಿ ಶವವನ್ನು ಇಡಲಾಗಿತ್ತು. ಮೃತಪಟ್ಟ ವ್ಯಕ್ತಿಯನ್ನು ದೆಹಲಿಯ ಗೌತಮಪುರಿಯಲ್ಲಿ ವಾಸವಾಗಿದ್ದ ಜಾಕಿರ್ (50) ಎಂದು ಗುರುತಿಸಲಾಗಿದೆ. ಹಲವು ದಿನಗಳಿಂದ ಜಾಕಿರ್​​ಗೆ ಅವರ ಸಂಬಂಧಿಕರು ಫೋನ್ ಮಾಡಿದರೂ ಅವರು ಕರೆಯನ್ನು ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಅವರು ಜಾಕಿರ್​​ ಅವರ ಮನೆಗೆ ಹೋಗಿ ನೋಡಿದ್ದರು. ಇಡೀ ಮನೆ ಹುಡುಕಾಡಿದರೂ ಅವರಿಗೆ ಯಾರೂ ಕಂಡಿರಲಿಲ್ಲ. ಬಳಿಕ ರೂಮಿನ ಕಪಾಟು, ಬಾತ್​ರೂಂ ಎಲ್ಲ ಹುಡುಕಾಡಿ ಅಡುಗೆಮನೆಯ ಫ್ರಿಡ್ಜ್ ಓಪನ್ ಮಾಡಿದಾಗ ಅದರೊಳಗೆ ಜಾಕಿರ್​ ಶವವನ್ನು ಇಡಲಾಗಿತ್ತು.

ಫ್ರಿಡ್ಜ್​ನಲ್ಲಿ ಶವ ನೋಡಿ ಗಾಬರಿಯಾದ ಸಂಬಂಧಿಕರು ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಶವವನ್ನು ರೆಫ್ರಿಜರೇಟರ್‌ನಲ್ಲಿ ತುಂಬಿಟ್ಟಿರುವುದು ಕಂಡುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪರಾಧ ತನಿಖೆ ಮತ್ತು ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ತಂಡಗಳನ್ನು ಅಪರಾಧದ ಸ್ಥಳದ ಪರಿಶೀಲನೆಗೆ ಕರೆಯಲಾಯಿತು.

ಇದನ್ನೂ ಓದಿ: Shocking News: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಕೊಂದ ಕ್ರೂರ ಪತಿ

ಜಾಕಿರ್ ಮನೆಯಲ್ಲಿ ಒಬ್ಬರೇ ವಾಸವಿದ್ದು, ಅವರ ಪತ್ನಿ ಮತ್ತು ಮಕ್ಕಳು ಬೇರೆ ಕಡೆ ವಾಸಿಸುತ್ತಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಕೊಲೆ ಆರೋಪಿಯ ಸುಳಿವು ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಜಾಕಿರ್ ಅವರನ್ನು ಆಸ್ತಿ ಸಂಬಂಧಿತ ವಿವಾದದಿಂದ ಅವರ ಸಂಬಂಧಿಕರೊಬ್ಬರು ಥಳಿಸಿದ್ದಾರೆ. ಆಗ ಜಾಕಿರ್ ಅವರ ತಲೆಗೆ ಪೆಟ್ಟು ಬಿದ್ದು, ಸಾವನ್ನಪ್ಪಿದ್ದಾರೆ. ನಂತರ ಅವರು ಆ ಶವವನ್ನು ಫ್ರಿಡ್ಜ್‌ನಲ್ಲಿ ಅಡಗಿಸಿಟ್ಟು, ಪರಾರಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್